AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ದಿನವೇ ಕತ್ರಿನಾಗೆ ಕಣ್ಣೀರು ಹಾಕಿಸಿದ ವಿಕ್ಕಿ ಕೌಶಲ್​; ಮದುವೆ ಮಂಟಪದಲ್ಲಿ ನಡೆದಿದ್ದೇನು?

Vicky Kaushal | Katrina Kaif: ಮದುವೆ ಮಂಟಪದಲ್ಲಿ ಹಾರ ಬದಲಾಯಿಸಿಕೊಂಡ ಬಳಿಕ ವಿಕ್ಕಿ ಕೌಶಲ್​ ಅವರು ಎಲ್ಲರ ಎದುರು ಭಾವುಕವಾಗಿ ಮಾತನಾಡಿದರು. ಅದರಿಂದ ಕತ್ರಿನಾ ಕೈಫ್ ಎಮೋಷನಲ್​ ಆಗಿ ಕಣ್ಣೀರು ಹಾಕಿದರು ಎಂಬ ಸುದ್ದಿ ಕೇಳಿಬಂದಿದೆ.​

ವಿವಾಹದ ದಿನವೇ ಕತ್ರಿನಾಗೆ ಕಣ್ಣೀರು ಹಾಕಿಸಿದ ವಿಕ್ಕಿ ಕೌಶಲ್​; ಮದುವೆ ಮಂಟಪದಲ್ಲಿ ನಡೆದಿದ್ದೇನು?
ಕತ್ರಿನಾ ಕೈಫ್ - ವಿಕ್ಕಿ ಕೌಶಲ್
TV9 Web
| Edited By: |

Updated on: Dec 12, 2021 | 8:51 AM

Share

ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಕತ್ರಿನಾ ಕೈಫ್​ (Katrina Kaif) ಮತ್ತು ವಿಕ್ಕಿ ಕೌಶಲ್​ (Vicky Kaushal) ಮದುವೆ ನೆರವೇರಿತು. ಡಿ.9ರಂದು ಈ ಜೋಡಿ ಹಸೆಮಣೆ ಏರಿತು. ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆಯ ವಿಡಿಯೋಗಳನ್ನು ಖ್ಯಾತ ಓಟಿಟಿ ಸಂಸ್ಥೆಯೊಂದಕ್ಕೆ ಬರೋಬ್ಬರಿ 100 ಕೋಟಿ ರೂ. ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಹಾಗಾಗಿ ಈ ಮದುವೆಯನ್ನು ಇಷ್ಟೊಂದು ಗುಟ್ಟಾಗಿ ನೆರವೇರಿಸಲಾಯಿತು. ಮದುವೆಗೆ ಸಂಬಂಧಿಸಿದ ವಿಡಿಯೋಗಳು ಇನ್ನೂ ಲಭ್ಯವಾಗಿಲ್ಲ. ಆದರೆ ಮದುವೆ ಮಂಟಪದಲ್ಲಿ ಏನೆಲ್ಲ ನಡೆಯಿತು ಎಂಬ ಬಗ್ಗೆ ಕೆಲವು ಮಾಹಿತಿ ಕೇಳಿಬಂದಿದೆ. ಹಾರ ಬದಲಾಯಿಸಿಕೊಂಡ ಬಳಿಕ ಕತ್ರಿನಾ ಕೈಫ್​ ಕಣ್ಣೀರು ಹಾಕಿದರು ಎನ್ನಲಾಗಿದೆ. ಅದಕ್ಕೆ ಕಾರಣ ವಿಕ್ಕಿ ಕೌಶಲ್​ ಆಡಿದ ಮಾತುಗಳು! ಏನಿದು ಸಮಾಚಾರ? ಮುಂದೆ ಓದಿ..

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ತಮ್ಮ ನಡುವೆ ಪ್ರೀತಿ ಹೇಗೆ ಚಿಗುರಿತು ಎಂಬುದನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ ಮದುವೆ ಮಂಟಪದಲ್ಲಿ ಹಾರ ಬದಲಾಯಿಸಿಕೊಂಡ ಬಳಿಕ ವಿಕ್ಕಿ ಕೌಶಲ್​ ಅವರು ಎಲ್ಲರ ಎದುರು ಭಾವುಕವಾಗಿ ಮಾತನಾಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ತಮ್ಮ ಬದುಕಿನಲ್ಲಿ ಕತ್ರಿನಾ ಹೇಗೆ ಎಂಟ್ರಿ ಆದರು? ಅವರಿಂದಾಗಿ ತಮ್ಮ ಜೀವನದಲ್ಲಿ ಆದ ಬದಲಾವಣೆಗಳು ಏನು ಎಂಬಿತ್ಯಾದಿ ವಿಚಾರಗಳ ಬಗ್ಗೆ ವಿಕ್ಕಿ ಕೌಶಲ್​ ಮಾತನಾಡಿದ್ದಾರೆ. ಅದನ್ನು ಕೇಳಿ ಭಾವುಕರಾದ ಕತ್ರಿನಾ ಕೈಫ್​ ಅವರು ಮದುವೆ ಮಂಟಪದಲ್ಲೇ ಕಣ್ಣೀರು ಹಾಕಿದರು ಎಂದು ವರದಿ ಆಗಿದೆ.

ತಮ್ಮ ಮದುವೆಯ ಫೋಟೋಗಳನ್ನು ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ನವ ದಂಪತಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಈಗ ಸಖತ್​ ವೈರಲ್​ ಆಗುತ್ತಿವೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಟ್ವಿಂಕಲ್​ ಖನ್ನಾ, ಪರಿಣೀತಿ ಚೋಪ್ರಾ, ಹೃತಿಕ್​ ರೋಷನ್​, ಪ್ರಿಯಾಂಕಾ ಚೋಪ್ರಾ, ಸೋನಮ್​ ಕಪೂರ್, ನಿಕ್​ ಜೋನಸ್​, ಬಿಪಾಶಾ ಬಸು, ಇಶಾನ್​ ಕಟ್ಟರ್​, ಕರೀನಾ ಕಪೂರ್​ ಖಾನ್​, ಜಾನ್ವಿ ಕಪೂರ್​, ಆಲಿಯಾ ಭಟ್​, ದೀಪಿಕಾ ಪಡುಕೋಣೆ, ಗಾಯಕಿ ಪಲಕ್​ ಮುಚ್ಚಲ್​ ಸೇರಿದಂತೆ ಅನೇಕ ತಾರೆಯರು ಈ ದಂಪತಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಜೀವನ ಪರ್ಯಂತ ನಿಮ್ಮಿಬ್ಬರ ನಡುವೆ ನಗು, ನಿಷ್ಠೆ, ಪ್ರೀತಿ, ಗೌರವ, ಸಹಬಾಳ್ವೆ ಇರಲಿ’ ಎಂದು ದೀಪಿಕಾ ಪಡುಕೋಣೆ ವಿಶ್​ ಮಾಡಿದ್ದಾರೆ. ‘ಓಹ್​ ಮೈ ಗಾಡ್​.. ನೀವಿಬ್ಬರು ಎಷ್ಟೊಂದು ಸುಂದರವಾಗಿ ಕಾಣುತ್ತಿದ್ದೀರಿ’ ಎಂದು ಆಲಿಯಾ ಭಟ್​ ಕಮೆಂಟ್​ ಮಾಡಿದ್ದಾರೆ. ಹತ್ತಾರು ಹಾರ್ಟ್​ ಎಮೋಜಿಗಳನ್ನು ಕಮೆಂಟ್​ ಬಾಕ್ಸ್​ನಲ್ಲಿ ಹಾಕುವ ಮೂಲಕ ಜಾನ್ವಿ ಕಪೂರ್​ ಪ್ರೀತಿ ತೋರಿಸಿದ್ದಾರೆ.

ಇದನ್ನೂ ಓದಿ:

ಕತ್ರಿನಾ​ ಕೈಫ್​-ವಿಕ್ಕಿ ಕೌಶಲ್​​ ಅರಿಶಿಣ ಶಾಸ್ತ್ರದ ಕಲರ್​ಫುಲ್​ ಫೋಟೋಗಳು ವೈರಲ್​; ಇಲ್ಲಿದೆ ಫೋಟೋ ಆಲ್ಬಂ

ಕತ್ರಿನಾ​ ಮದುವೆ ಉಂಗುರದ ಬೆಲೆ ತಿಳಿದು ಅಚ್ಚರಿ ವ್ಯಕ್ತ ಪಡಿಸಿದ ಫ್ಯಾನ್ಸ್​; ಅಬ್ಬಬ್ಬಾ ಎಷ್ಟು ದುಬಾರಿ ಈ ವಿವಾಹ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ