AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂಪಾಯಿ ಸನಿಹಕ್ಕೆ ಬಂದ ‘ಛಾವ’ ಬಾಕ್ಸ್ ಆಫೀಸ್​ ಕಲೆಕ್ಷನ್​

ಕರ್ನಾಟಕದಲ್ಲಿ ಕೂಡ ‘ಛಾವ’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಪ್ರತಿ ದಿನವೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ವಿಕ್ಕಿ ಕೌಶಲ್ ಅವರು ಈ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಕೂಡ ಹೆಚ್ಚಾಗಿದೆ. ಕಲೆಕ್ಷನ್ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

200 ಕೋಟಿ ರೂಪಾಯಿ ಸನಿಹಕ್ಕೆ ಬಂದ ‘ಛಾವ’ ಬಾಕ್ಸ್ ಆಫೀಸ್​ ಕಲೆಕ್ಷನ್​
Vicky Kaushal
ಮದನ್​ ಕುಮಾರ್​
|

Updated on: Feb 19, 2025 | 10:52 PM

Share

ನಟ ವಿಕ್ಕಿ ಕೌಶಲ್ ಅವರು ಬಾಲಿವುಡ್​ನಲ್ಲಿ ಕೆಲವು ಗಮನಾರ್ಹ ಸಿನಿಮಾಗಳನ್ನು ಮಾಡಿದ್ದಾರೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದ ಬಳಿಕ ಅವರ ಖ್ಯಾತಿ ಸಿಕ್ಕಾಪಟ್ಟೆ ಹೆಚ್ಚಾಯಿತು. ಈಗ ಅವರು ‘ಛಾವ’ ಸಿನಿಮಾದ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಎಲ್ಲ ಕಡೆಗಳಲ್ಲೂ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ‘ಛಾವ’ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದ್ದು, ದಿನದಿಂದ ದಿನಕ್ಕೆ ಕಲೆಕ್ಷನ್ ಹೆಚ್ಚಾಗುತ್ತಿದೆ. ಈಗ ಈ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಸನಿಹದಲ್ಲಿದೆ.

ಲಕ್ಷ್ಮಣ್ ಉಟೇಕರ್ ಅವರು ನಿರ್ದೇಶನ ಮಾಡಿದ ‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಶಂಭಾಜಿ ಮಹಾರಾಜ್ ಪಾತ್ರವನ್ನು ಮಾಡಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ಬಣ್ಣ ಹಚ್ಚಿದ್ದಾರೆ. ಔರಂಗ್​ಜೇಬ್ ಪಾತ್ರದಲ್ಲಿ ಅಕ್ಷಯ್ ಖನ್ನಾ ಅವರು ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಮೊದಲ ದಿನ (ಫೆ.14) ‘ಛಾವ’ ಸಿನಿಮಾಗೆ 33.10 ಕೋಟಿ ರೂಪಾಯಿ ಕಮಾಯಿ ಆಗಿತ್ತು. 2ನೇ ದಿನ 39.30 ಕೋಟಿ ರೂಪಾಯಿ, 3ನೇ ದಿನ 49.03 ಕೋಟಿ ರೂಪಾಯಿ, 4ನೇ ದಿನ 24.10 ಕೋಟಿ ರೂಪಾಯಿ ಹಾಗೂ 5ನೇ ದಿನ 25.75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. 6ನೇ ದಿನ ಕೂಡ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. 6 ದಿನಕ್ಕೆ ಸಿನಿಮಾದ ಕಲೆಕ್ಷನ್​ 200 ಕೋಟಿ ರೂಪಾಯಿ ಸನಿಹದಲ್ಲಿ ಇರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆಗೆ ನಮಿಸಿದ ‘ಛಾವ’ ನಟ ವಿಕ್ಕಿ ಕೌಶಲ್

ಎರಡನೇ ವೀಕೆಂಡ್​ನಲ್ಲಿ ಕೂಡ ‘ಛಾವ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣಲಿದೆ. ಛತ್ರಪತಿ ಶಂಭಾಜಿ ಮಹಾರಾಜ್ ಜೀವನದ ಕಥೆಯನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಫೆ.19ರಂದು ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಆಚರಣೆ ಮಾಡಲಾಗಿದೆ. ಕರ್ನಾಟಕದ ಕೆಲವೆಡೆ ಕೂಡ ಆಚರಣೆ ನಡೆದಿದೆ. ಈ ಪ್ರಯುಕ್ತ ಹಲವರು ‘ಛಾವ’ ನೋಡಲು ಚಿತ್ರಮಂದಿರಕ್ಕೆ ಬಂದಿದ್ದಾರೆ. ಇದರ ಪರಿಣಾಮವಾಗಿ ಕಲೆಕ್ಷನ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು