AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿಯ ಫಸ್ಟ್​ ನೈಟ್​ ಸಿಡಿ ನಾಪತ್ತೆ; ಡಿಫರೆಂಟ್​ ಕಥೆಯ ಹೊಸ ಸಿನಿಮಾ ಇದು

ಮೊದಲ ರಾತ್ರಿಯಲ್ಲಿ ತಮ್ಮ ಖಾಸಗಿ ವಿಡಿಯೋ ಮಾಡಿಕೊಂಡು ಪೇಚಿಗೆ ಸಿಲುಕಿದ ಗಂಡ-ಹೆಂಡತಿಯ ಕಥೆ ಈ ಸಿನಿಮಾದಲ್ಲಿದೆ. ಮನೆಗೆ ಬಂದ ಕಳ್ಳರು ಸಿಡಿ ಪ್ಲೇಯರ್​ ಕದಿಯುತ್ತಾರೆ. ಅದರ ಜೊತೆ ಸಿಡಿ ಕೂಡ ಕಳ್ಳತನ ಆಗುತ್ತದೆ. ಆ ಸಿಡಿ ಹುಡುಕಲು ಗಂಡ-ಹೆಂಡತಿ ಏನೆಲ್ಲ ಸರ್ಕಸ್​ ಮಾಡುತ್ತಾರೆ ಎಂಬ ಕಥೆಯನ್ನು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಗಂಡ-ಹೆಂಡತಿಯ ಫಸ್ಟ್​ ನೈಟ್​ ಸಿಡಿ ನಾಪತ್ತೆ; ಡಿಫರೆಂಟ್​ ಕಥೆಯ ಹೊಸ ಸಿನಿಮಾ ಇದು
ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ
ಮದನ್​ ಕುಮಾರ್​
|

Updated on: Sep 12, 2024 | 8:50 PM

Share

ನಟ ರಾಜ್​ಕುಮಾರ್​ ರಾವ್​ ಅವರು 2024ರಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ. ಅವರು ನಟಿಸಿರುವ ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅವರ ಇನ್ನೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದರ ಶೀರ್ಷಿಕೆ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’. ಈ ಸಿನಿಮಾದಲ್ಲಿ ರಾಜ್​ಕುಮಾರ್​ ರಾವ್​ ಜೊತೆ ತೃಪ್ತಿ ದಿಮ್ರಿ ಅವರು ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ಒಂದು ಡಿಫರೆಂಟ್​ ಕಥೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

1997ರ ಸಮಯದಲ್ಲಿ ನಡೆಯುವ ಒಂದು ಕಹಾನಿಯನ್ನು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಈ ಸಿನಿಮಾದಲ್ಲಿ ರಾಜ್​ಕುಮಾರ್​ ರಾವ್​ ಮತ್ತು ತೃಪ್ತಿ ದಿಮ್ರಿ ಅವರು ಹೊಸದಾಗಿ ಮದುವೆಯಾದ ಗಂಡ-ಹೆಂಡತಿಯ ಪಾತ್ರ ಮಾಡಿದ್ದಾರೆ. ಮಲ್ಲಿಕಾ ಶೆರಾವತ್​ ಅವರು ಕೂಡ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ. ರಾಜ್​ ಶಾಂಡಿಲ್ಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಕ್ಟೋಬರ್​ 11ರಂದು ಸಿನಿಮಾ ಬಿಡುಗಡೆ ಆಗಲಿದೆ.

ಮೊದಲ ರಾತ್ರಿಯ ಸವಿ ನೆನಪು ಯಾವಾಗಲೂ ಇರಬೇಕು ಎಂಬ ಕಾರಣಕ್ಕೆ ಗಂಡ-ಹೆಂಡತಿ (ವಿಕ್ಕಿ ಮತ್ತು ವಿದ್ಯಾ) ವಿಡಿಯೋ ಮಾಡಿಕೊಳ್ಳುತ್ತಾರೆ. ಅದನ್ನು ಸಿಡಿ ಪ್ಲೇಯರ್​ನಲ್ಲಿ ನೋಡಿ ಖುಷಿಪಡುತ್ತಾರೆ. ಆದರೆ ಒಂದು ದಿನ ಅವರ ಮನೆಯ ಸಿಡಿ ಪ್ಲೇಯರ್​ ಕಳ್ಳತನ ಆಗುತ್ತದೆ. ಅದರ ಜೊತೆ ಅವರಿಬ್ಬರ ಖಾಸಗಿ ವಿಡಿಯೋ ಕೂಡ ಕಳೆದು ಹೋಗುತ್ತದೆ. ಆ ಸಿಡಿ ಪಡೆಯಲು ವಿಕ್ಕಿ ಮತ್ತು ವಿದ್ಯಾ ಎಷ್ಟೆಲ್ಲ ಕಷ್ಟಪಡುತ್ತಾರೆ ಎಂಬುದು ಈ ಸಿನಿಮಾದ ಕಥಾ ಸಾರಾಂಶ.

ಇದನ್ನೂ ಓದಿ: ಪ್ರಿಯಕರನ ಜೊತೆ ಡೇಟಿಂಗ್​ ಮಾಡುತ್ತಿರುವ ‘ತೋಬಾ ತೋಬಾ’ ಸುಂದರಿ ತೃಪ್ತಿ ದಿಮ್ರಿ

‘ಅನಿಮಲ್​’ ಸಿನಿಮಾದ ಯಶಸ್ಸಿನ ನಂತರ ತೃಪ್ತಿ ದಿಮ್ರಿ ಅವರು ಸೂಪರ್​ ಸ್ಟಾರ್​ ಆಗಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಹರಿದು ಬರುತ್ತಿವೆ. ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾ ಮೂಲಕವೂ ಅವರು ಮತ್ತೊಂದು ಗೆಲುವು ಕಾಣುವ ಸಾಧ್ಯತೆ ದಟ್ಟವಾಗಿದೆ. ಕಾಮಿಡಿ ಇಷ್ಟಪಡುವ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುವ ಲಕ್ಷಣ ಕಾಣಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!