AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ವಿದ್ಯಾ ಬಾಲನ್​ ಹೆಸರಲ್ಲಿ ದೊಡ್ಡ ಮೋಸ; ಎಚ್ಚೆತ್ತುಕೊಂಡ ನಟಿ

‘ಭೂಲ್​ ಭುಲಯ್ಯ 3’ ಸಿನಿಮಾದಲ್ಲಿ ನಟಿಸಲು ಸಜ್ಜಾಗಿರುವ ವಿದ್ಯಾ ಬಾಲನ್​ ಅವರ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ನಟಿಯ ಹೆಸರಿನಲ್ಲಿ ಜನರನ್ನು ವಂಚಿಸಿರುವುದು ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಿದ್ಯಾ ಬಾಲನ್​ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ಹೆಸರಿನಲ್ಲಿ ಹಲವು ನಕಲಿ ಸೋಶಿಯಲ್​ ಮೀಡಿಯಾ ಖಾತೆ ತೆರೆದು ವಂಚಿಸಲಾಗುತ್ತಿದೆ.

ಹಣಕ್ಕಾಗಿ ವಿದ್ಯಾ ಬಾಲನ್​ ಹೆಸರಲ್ಲಿ ದೊಡ್ಡ ಮೋಸ; ಎಚ್ಚೆತ್ತುಕೊಂಡ ನಟಿ
ವಿದ್ಯಾ ಬಾಲನ್​
ಮದನ್​ ಕುಮಾರ್​
|

Updated on:Feb 21, 2024 | 12:36 PM

Share

ಬಾಲಿವುಡ್​ನ ಖ್ಯಾತ ನಟಿ ವಿದ್ಯಾ ಬಾಲನ್ (Vidya Balan) ಅವರು ಪೊಲೀಸ್​ ಠಾಣೆ ಮಟ್ಟಿಲೇರಿದ್ದಾರೆ. ಅವರ ಹೆಸರಿನಲ್ಲಿ ದೊಡ್ಡ ಮೋಸ ನಡೆದಿದೆ. ಅನೇಕ ದಿನಗಳಿಂದ ನಡೆಯುತ್ತಿದ್ದ ವಂಚನೆಯ ಬಗ್ಗೆ ನಟಿಗೆ ತಡವಾಗಿ ಗೊತ್ತಾಗಿದೆ. ಹಾಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ವಿದ್ಯಾ ಬಾಲನ್​ ಹೆಸರಿನಲ್ಲಿ ನಕಲಿ ಸೋಶಿಯಲ್​ ಮೀಡಿಯಾ ಖಾತೆಗಳನ್ನು (Vidya Balan Fake Account) ತರೆದು ಹಣ ವಸೂಲಿ ಮಾಡುವ ದಂಧೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಈಗ ಬೆಳಕಿಗೆ ಬಂದಿದ್ದು, ವಿದ್ಯಾ ಬಾಲನ್​ ಅವರು ಕಾನೂನಿನ ಮೊರೆ ಹೋಗಿದ್ದಾರೆ.

ಚಿತ್ರರಂಗ ಎಂಬುದು ಮಾಯಾ ಲೋಕ. ಇಲ್ಲಿ ಕೆಲಸ ಮಾಡಬೇಕು, ಅವಕಾಶ ಪಡೆದುಕೊಳ್ಳಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಈ ಆಸೆಯನ್ನೇ ಟಾರ್ಗೆಟ್​ ಮಾಡಿಕೊಂಡು ಕೆಲವರ ವಂಚನೆ ನಡೆಸುತ್ತಾರೆ. ಅದಕ್ಕೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರು ಬಳಸುತ್ತಾರೆ. ಈ ಹಿಂದೆ ಸಲ್ಮಾನ್​ ಖಾನ್​ ಅವರ ಹೆಸರು ದುರ್ಬಳಕೆ ಆಗಿತ್ತು. ಈಗ ವಿದ್ಯಾ ಬಾಲನ್​ ಅವರ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡಿದ್ದು ತಿಳಿದುಬಂದಿದೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ವಿದ್ಯಾ ಬಾಲನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರ ಹೆಸರಿನಲ್ಲಿ ನಕಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದ ಕಿಡಿಗೇಡಿಗಳು ಜನರಿಂದ ಹಣ ವಸೂಲಿ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ವಿದ್ಯಾ ಬಾಲನ್​ ಅವರ ಹೆಸರಿಗೆ ಕಳಂಕ ಬರುತ್ತಿದೆ. ಈ ರೀತಿಯ ಕೃತ್ಯ ನಡೆದಿದೆ ಎಂಬುದು ತಮ್ಮ ಗಮನಕ್ಕೆ ಬಂದ ಕೂಡಲೇ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್

ಜನರನ್ನು ವಂಚಿಸುವ ಉದ್ದೇಶದಿಂದ ಕಿಡಿಗೇಡಿಗಳು ವಿದ್ಯಾ ಬಾಲನ್​ ಅವರ ಹೆಸರಿನಲ್ಲಿ ಈ-ಮೇಲ್​ ಖಾತೆಯನ್ನೂ ತೆರೆದಿದ್ದಾರೆ. ಆ ಮೂಲಕ ಅನೇಕರಿಗೆ ಸಂದೇಶ ಕಳಿಸಿದ್ದಾರೆ. ಚಿತ್ರರಂಗದಲ್ಲಿ ಇರುವ ಸೆಲೆಬ್ರಿಟಿಗಳನ್ನೂ ವಂಚಿಸಲು ಪ್ರಯತ್ನಿಸಲಾಗಿದೆ. ವಿದ್ಯಾ ಬಾಲನ್​ ಹೆಸರಿನಲ್ಲಿ ಮೋಸ ನಡೆಯುತ್ತಿದೆ ಎಂಬುದು ಇತ್ತೀಚೆಗೆ ಕಾಸ್ಟ್ಯೂಮ್​ ಡಿಸೈನರ್​ ಒಬ್ಬರಿಗೆ ತಿಳಿದು ಬಂದಿದೆ. ಅದನ್ನು ಅವರು ನಟಿಗೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ವಿದ್ಯಾ ಬಾಲನ್​ ಅವರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ನ್ಯೂಸ್​ ಪೇಪರ್​ ಅಡ್ಡ ಹಿಡಿದು ಮೈ ಮುಚ್ಚಿಕೊಂಡ ವಿದ್ಯಾ ಬಾಲನ್​; ಡರ್ಟಿ ಪಿಕ್ಚರ್​ ಎಂದ ನೆಟ್ಟಿಗರು

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿದ್ಯಾ ಬಾಲನ್​ ಅವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ತಮಗೆ ಸೂಕ್ತವಾದ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ಭೂಲ್​ ಭುಲಯ್ಯ 3’ ಸಿನಿಮಾಗೆ ಅವರು ಸಹಿ ಮಾಡಿದ್ದಾರೆ. 2007ರಲ್ಲಿ ಬಂದ ಸೂಪರ್​ ಹಿಟ್​ ‘ಭೂಲ್​ ಭುಲಯ್ಯ’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದ ಅವರು ಅದರ ಸೀಕ್ವೆಲ್​ನಲ್ಲಿ ಮಿಸ್​ ಆಗಿದ್ದರು. ಈಗ ‘ಭೂಲ್​ ಭುಲಯ್ಯ 3’ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:35 pm, Wed, 21 February 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು