AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಸಿನಿಮಾ ಶೂಟ್ ವೇಳೆ ರಸ್ತೆ ಬದಿ ನಿಲ್ಲಿಸಿದ ಕಾರಲ್ಲಿ ಬಟ್ಟೆ ಬದಲಿಸಿಕೊಂಡಿದ್ದ ವಿದ್ಯಾ ಬಾಲನ್

Vidya Balan: ವಿದ್ಯಾ ಬಾಲನ್ ಬಾಲಿವುಡ್​ನ ಸ್ಟಾರ್ ನಟಿ ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ಮಾತನಾಡಿದ್ದಾರೆ. ಅವರು ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನಲ್ಲಿ ಬಟ್ಟೆಗಳನ್ನು ಬದಲಾಯಿಸಿಕೊಳ್ಳುತ್ತಿದ್ದರಂತೆ.

ಆ ಸಿನಿಮಾ ಶೂಟ್ ವೇಳೆ ರಸ್ತೆ ಬದಿ ನಿಲ್ಲಿಸಿದ ಕಾರಲ್ಲಿ ಬಟ್ಟೆ ಬದಲಿಸಿಕೊಂಡಿದ್ದ ವಿದ್ಯಾ ಬಾಲನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 05, 2024 | 8:45 PM

Share

ವಿದ್ಯಾ ಬಾಲನ್ ಅವರು ಬಾಲಿವುಡ್ನ ಯಶಸ್ವಿ ನಟಿಯರಲ್ಲಿ ಒಬ್ಬರು. ಅವರ ನಟನೆಯ ‘ಕಹಾನಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಈ ಚಿತ್ರ ಬಿಡುಗಡೆ ಆಗಿದ್ದು 2012ರಲ್ಲಿ. ಕೋಲ್ಕತ್ತಾ ಮೆಟ್ರೋದಲ್ಲಿ ನಡೆವ ಒಂದು ಕಲ್ಪನಾತ್ಮಕ ಘಟನೆ ಆಧರಿಸಿ ಈ ಸಿನಿಮಾ ಮಾಡಲಾಗಿತ್ತು. 15 ಕೋಟಿ ರೂಪಾಯಿ ಬಜೆಟ್​ನ ಈ ಚಿತ್ರ 79 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ವಿದ್ಯಾ ಬಾಲನ್​ಗೆ ಆದ ಸಮಸ್ಯೆಗಳ ಬಗ್ಗೆ ಅವರು ಹೇಳಿದ್ದರು.

ಬಜೆಟ್ ಕಾರಣದಿಂದ ಯಾವುದೇ ವ್ಯಾನಿಟಿ ವ್ಯಾನ್ ತರೋಕೆ ಸಾಧ್ಯವಾಗಿಲ್ಲ. ಹೀಗಾಗಿ ಬಟ್ಟೆ ಬದಲಿಸಿಕೊಳ್ಳಬೇಕು ಎಂದರೆ ರಸ್ತೆ ಬದಿ ನಿಲ್ಲಿಸಿದ ಕಾರಿನಲ್ಲೇ ಮಾಡಿಕೊಳ್ಳಬೇಕಿತ್ತು. ‘ಅಲಾದಿನ್ ಸೋತ ನಂತರ ವಿದ್ಯಾ ಬಾಲನ್ ಅವರು ಕಹಾನಿ ಸಿನಿಮಾ ಮಾಡಲ್ಲ ಎಂದರು. ನಾನು ಅಮಿತಾಭ್ ಬಚ್ಚನ್ನಿಂದ ಶಾರುಖ್ ಖಾನ್ ಅವರಿಗೆ ಎಲ್ಲರನ್ನೂ ನೋಡಿದ್ದೇ. ಅವರು ಒಮ್ಮೆ ಸಿನಿಮಾ ಒಪ್ಪಿದರೆ ಅದನ್ನು ಮಾಡಿಯೇ ಮಾಡುತ್ತಾರೆ. ವಿದ್ಯಾ ಕೂಡ ಇದೇ ಸಾಲಿನಲ್ಲಿ ಬರುತ್ತಾರೆ. ಅವರು ಕಹಾನಿ ಮಾಡುತ್ತೇನೆ ಎಂದರು’ ಎಂಬುದಾಗಿ ಸುಜಯ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ: ಕಿಚ್ಚನ ಖಡಕ್ ಡೈಲಾಗ್

‘ನಿಮಗೆ ಆ ಬಗ್ಗೆ ಐಡಿಯಾ ಕೂಡ ಇಲ್ಲ. ನಮಗೆ ಯಾವುದೇ ವ್ಯಾನಿಟಿ ವ್ಯಾನ್ ಖರೀದಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟು ಟೈಟ್ ಬಜೆಟ್ ಇತ್ತು. ಪ್ರತಿ ಬಾರಿ ಬಟ್ಟೆ ಚೇಂಜ್ ಮಾಡಬೇಕು ಎಂದಾಗ ಇನೋವಾ ಕಾರಿನ ಕಿಟಕಿಗೆ ಕಪ್ಪು ಬಟ್ಟೆ ಸುತ್ತುತ್ತಿದ್ದವು. ಅಲ್ಲಿಯೇ ವಿದ್ಯಾ ಬಟ್ಟೆ ಬದಲಿಸಿಕೊಳ್ಳುತ್ತಿದ್ದರು’ ಎಂದಿದ್ದಾರೆ ವಿದ್ಯಾ.

ಸುಜಯ್ ಘೋಷ್ ಅವರು ಜಾಹೀರಾತೊಂದರಲ್ಲಿ ವಿದ್ಯಾ ಅವರನ್ನು ನೋಡಿದ್ದರು. ಅವರ ಜೊತೆ ಕೆಲಸ ಮಾಡಬೇಕು ಎಂದು ಸುಜಯ್ ಅಂದುಕೊಂಡಿದ್ದರು. ಕೊನೆಗೂ ಅದು ಸಂಭವಿಸಿತು. ಕಹಾನಿ ಸಿನಿಮಾದಿಂದ ಅವರು ದೊಡ್ಡ ಮಟ್ಟದ ಗೆಲುವು ಕಂಡರು. ವಿದ್ಯಾ ಬಾಲನ್ ಅವರು ನಾಯಕಿ ಪಾತ್ರಗಳಿಂದ ದೂರ ಇದ್ದಾರೆ. ಅವರು ಮಹಿಳಾ ಪ್ರಧಾನ ಸಿನಿಮಾಗಳ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ