ಸೋತು ಸುಣ್ಣವಾದ ವಿಜಯ್ ದೇವರಕೊಂಡ ಸಹಾಯಕ್ಕೆ ನಿಂತ ಕರಣ್​ ಜೋಹರ್; ಸ್ಟಾರ್ ನಿರ್ಮಾಪಕ ಮಾಡ್ತಿರೋದೇನು?

| Updated By: ರಾಜೇಶ್ ದುಗ್ಗುಮನೆ

Updated on: Oct 26, 2022 | 10:57 AM

ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಸಾಕಷ್ಟು ಗಮನ ಸೆಳೆದವರು. ‘ಲೈಗರ್​’ ಮೂಲಕ ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್ ಸಿನಿಮಾ ಮಾಡುವ ಪ್ರಯತ್ನಕ್ಕೆ ಕಾಲಿಟ್ಟಿದ್ದರು. ಆದರೆ, ಅದು ಯಶಸ್ಸು ಕಂಡಿಲ್ಲ.

ಸೋತು ಸುಣ್ಣವಾದ ವಿಜಯ್ ದೇವರಕೊಂಡ ಸಹಾಯಕ್ಕೆ ನಿಂತ ಕರಣ್​ ಜೋಹರ್; ಸ್ಟಾರ್ ನಿರ್ಮಾಪಕ ಮಾಡ್ತಿರೋದೇನು?
ವಿಜಯ್-ಕರಣ್
Follow us on

ವಿಜಯ್ ದೇವರಕೊಂಡ (Vijay Devarakonda) ಅವರ ನಟನೆಯ ‘ಲೈಗರ್’ ಸಿನಿಮಾ ಹೇಳ ಹೆಸರಿಲ್ಲದಂತೆ ಹೋಗಿದೆ. ಈ ಚಿತ್ರದಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಬಾಲಿವುಡ್​ಗೆ ಕಾಲಿಡಬೇಕು ಎಂಬ ವಿಜಯ್ ದೇವರಕೊಂಡ ಅವರ ಕನಸು ಭಗ್ನವಾಗಿದೆ. ಈ ಚಿತ್ರದಿಂದ ವಿಜಯ್ ಅವರು ದೊಡ್ಡ ಮಟ್ಟದ ಸೋಲು ಕಂಡಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್​ ಜೋಹರ್ ಕೂಡ ಬಂಡವಾಳ ಹೂಡಿದ್ದರು. ಈಗ ವಿಜಯ್ ಹಾಗೂ ಕರಣ್  (Karan Johar)ಮತ್ತೆ ಒಂದಾಗುತ್ತಿದ್ದಾರೆ. ಈ ವಿಚಾರ ಕೇಳಿ ವಿಜಯ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಸಾಕಷ್ಟು ಗಮನ ಸೆಳೆದವರು. ‘ಲೈಗರ್​’ ಮೂಲಕ ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್ ಸಿನಿಮಾ ಮಾಡುವ ಪ್ರಯತ್ನಕ್ಕೆ ಕಾಲಿಟ್ಟಿದ್ದರು. ಆದರೆ, ಅದು ಯಶಸ್ಸು ಕಂಡಿಲ್ಲ. ಇದನ್ನು ಅಭಿಮಾನಿಗಳು ತಿರಸ್ಕರಿಸಿದರು. ವಿಜಯ್ ದೇವರಕೊಂಡ ಜತೆ ಕೈ ಜೋಡಿಸೋಕೆ ದೊಡ್ಡ ದೊಡ್ಡ ನಿರ್ದೇಶಕರು ನಿರಾಕರಿಸುತ್ತಿದ್ದಾರೆ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ವಿಜಯ್ ಸಹಾಯಕ್ಕೆ ಕರಣ್ ಆಗಮಿಸಿದ್ದಾರೆ.

‘ಕಾಫಿ ವಿತ್ ಕರಣ್​’ ಶೋನಲ್ಲಿ ಈ ಮೊದಲು ಬಾಲಿವುಡ್ ಸ್ಟಾರ್​ಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದರು ಕರಣ್ ಜೋಹರ್. ಆದರೆ, ಈ ಬಾರಿ ದಕ್ಷಿಣದ ಕೆಲ ಸ್ಟಾರ್​ಗಳಿಗೂ ಅವಕಾಶ ಸಿಕ್ಕಿತ್ತು. ಈ ಸಾಲಿನಲ್ಲಿ ವಿಜಯ್ ದೇವರಕೊಂಡ ಕೂಡ ಇದ್ದಾರೆ. ಇದು ವಿಜಯ್ ಹಾಗೂ ಕರಣ್ ನಡುವಿನ ಗೆಳೆತನಕ್ಕೆ ಸಾಕ್ಷ್ಯ ನೀಡುತ್ತದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಹೀಗಾಗಿ, ವಿಜಯ್ ಸಿನಿಮಾಗೆ ಕರಣ್ ಬಂಡವಾಳ ಹೂಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಕರಣ್​-ವಿಜಯ್ ಮಾಡುತ್ತಿರುವ ಚಿತ್ರ ರೊಮ್ಯಾಂಟಿಕ್ ಶೈಲಿಯಲ್ಲಿ ಇರಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಲವ್​ ಸ್ಟೋರಿ ಹೈಲೈಟ್ ಆಗಲಿದೆ. ಈ ಚಿತ್ರಕ್ಕೆ ನಿರ್ದೇಶನ ಯಾರು ಮಾಡುತ್ತಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ವಿಜಯ್ ಮತ್ತೆ ಬಾಲಿವುಡ್​ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಲೈಗರ್’ ಚಿತ್ರದಿಂದ ವಿಜಯ್ ದೇವರಕೊಂಡಗೆ ಆಯ್ತು ದೊಡ್ಡ ನಷ್ಟ; ಅವರು ಅನುಭವಿಸುತ್ತಿರುವ ಕಷ್ಟಗಳೇನು?

ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸಮಂತಾ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು ಎನ್ನಲಾಗಿದೆ. ಹೀಗಾಗಿ, ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದರಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಶೀಘ್ರದಲ್ಲೇ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆಯಲ್ಲಿ ಇಡೀ ತಂಡ ಇದೆ.