AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Devarakonda: ಮಾಸ್​ ಅವತಾರದಲ್ಲಿ ವಿಜಯ್​ ದೇವರಕೊಂಡ; ‘ಲೈಗರ್​’ ಗ್ಲಿಂಪ್ಸ್​​ ಇಷ್ಟಪಟ್ಟ ಫ್ಯಾನ್ಸ್​

ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ವಿಡಿಯೋ ರಿಲೀಸ್​ ಆಗಿದೆ. ಈ ವಿಡಿಯೋದಲ್ಲಿ ವಿಜಯ್​ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

Vijay Devarakonda: ಮಾಸ್​ ಅವತಾರದಲ್ಲಿ ವಿಜಯ್​ ದೇವರಕೊಂಡ; ‘ಲೈಗರ್​’ ಗ್ಲಿಂಪ್ಸ್​​ ಇಷ್ಟಪಟ್ಟ ಫ್ಯಾನ್ಸ್​
ವಿಜಯ್​ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on:Jan 01, 2022 | 11:49 AM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್​’ (Liger) ಸಿನಿಮಾ ಮೇಲೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ವಿಜಯ್​ ಅವರು ಬಾಕ್ಸಿಂಗ್​ ಪಟು ಆಗಿ ಕಾಣಿಸಿಕೊಂಡಿದ್ದಾರೆ. ವಿಜಯ್​ ದೇವರಕೊಂಡ ಜೊತೆ ಬಾಕ್ಸಿಂಗ್​ ಲೆಜೆಂಡ್​ ಮೈಕ್​ ಟೈಸನ್ ಅವರೂ​ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಅವರು ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇನ್ನು, ಈ ಸಿನಿಮಾ ವಿಜಯ್​ ಅವರ ಮೊದಲ ಹಿಂದಿ ಚಿತ್ರ ಅನ್ನೋದು ವಿಶೇಷ. ಅಭಿಮಾನಿಗಳಿಗಾಗಿ ‘ಲೈಗರ್​’ ತಂಡ ಹೊಸ ವರ್ಷಕ್ಕೆ ಗ್ಲಿಂಪ್ಸ್​ ವಿಡಿಯೋ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಅವರು ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ.

ಆಗಸ್ಟ್​ 25ಕ್ಕೆ ‘ಲೈಗರ್​’ ಸಿನಿಮಾ ತೆರೆಗೆ ಬರುತ್ತಿದೆ. ಇದಕ್ಕೆ ಇನ್ನೂ 8 ತಿಂಗಳು ಬಾಕಿ ಇದೆ. ಅದಕ್ಕೂ ಮೊದಲೇ ಸಿನಿಮಾ ಎಲ್ಲ ಕಡೆಗಳಲ್ಲೂ ಮನೆ ಮಾತಾಗಬೇಕು ಎನ್ನುವ ಉದ್ದೇಶವನ್ನು ಚಿತ್ರತಂಡ ಹೊಂದಿದೆ. ಒಂದು ಕಡೆ ಶೂಟಿಂಗ್​​​ ನಡೆಯುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದೆ. ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ವಿಡಿಯೋ ರಿಲೀಸ್​ ಆಗಿದೆ. ಈ ವಿಡಿಯೋದಲ್ಲಿ ವಿಜಯ್​ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಡಿಯೋ ಬಿಡುಗಡೆ ಆದ ಕೇವಲ 7 ಗಂಟೆಗೆ ಬರೋಬ್ಬರಿ 91 ಲಕ್ಷ ವೀಕ್ಷಣೆ ಕಂಡಿದೆ.

ಗುರುವಾರ (ಡಿಸೆಂಬರ್​ 30) ಬೆಳಗ್ಗೆ 10:30ಕ್ಕೆ ಚಿತ್ರತಂಡದಿಂದ ಸಿನಿಮಾ ಸ್ಟಿಲ್​ಗಳು​ ಲಾಂಚ್​ ಆಗಿದೆ. ಮಧ್ಯಾಹ್ನ ನಾಲ್ಕು ಗಂಟೆಗೆ ವಿಶೇಷ ಇನ್​ಸ್ಟಾ ಫಿಲ್ಟರ್​ ರಿಲೀಸ್​ ಮಾಡಲಾಗಿದೆ. ಈ ಸಿನಿಮಾವನ್ನು ಪುರಿ ಜಗನ್ನಾಥ್​, ಕರಣ್​ ಜೋಹರ್​, ಚಾರ್ಮಿ ಕೌರ್​, ಅಪೂರ್ವ ಮೆಹ್ತಾ, ಹೀರೂ ಯಶ್​ ಜೋಹರ್​ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಈ ಸಿನಿಮಾದ ಬಜೆಟ್​ 125 ಕೋಟಿ ರೂಪಾಯಿಗೂ ಅಧಿಕವಾಗಿದೆ. ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

ಈ ಸಿನಿಮಾದಲ್ಲಿ ಮೈಕಟ್​ ಟೈಸನ್​ ನಟಿಸುತ್ತಿರುವ ವಿಚಾರ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಬಾಕ್ಸಿಂಗ್​ ಜಗತ್ತಿನಲ್ಲಿ ಅಮೆರಿಕದ ಮೈಕ್​ ಟೈಸನ್​ ಅವರದ್ದು ದೊಡ್ಡ ಹೆಸರು. ಎದುರಾಳಿಗಳಿಗೆ ನಡುಕ ಹುಟ್ಟಿಸುವ ಅವರ ಬಾಕ್ಸಿಂಗ್​ ಪರಾಕ್ರಮಕ್ಕೆ ಸರಿಸಾಟಿ ಆಗಬಲ್ಲ ಮತ್ತೊಬ್ಬ ವ್ಯಕ್ತಿಯೇ ಇಲ್ಲ. ಇದೇ ಮೊದಲ ಬಾರಿಗೆ ಅವರು ಭಾರತೀಯ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೈಕ್​ ಟೈಸನ್​ ಮುಖಾಮುಖಿ ಆಗುವ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ.

ಇದನ್ನೂ ಓದಿ:  ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ ದಕ್ಷಿಣದ ಹೀರೋಗಳು; ಯಶಸ್ಸಿನ ನಿರೀಕ್ಷೆಯಲ್ಲಿ ವಿಜಯ್​ ದೇವರಕೊಂಡ

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದಿಂದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಬಿಗ್​ ಗಿಫ್ಟ್​

Published On - 6:21 pm, Fri, 31 December 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ