AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ರಾಝ್ ಮೇಲೆ ದುರ್ನಡತೆ ಆರೋಪ: ಸಹಾಯಕನಿಂದ ಲೈಂಗಿಕ ಕಿರುಕುಳ ಆಗಿದ್ಯಾ?

‘ಸನ್​ ಆಫ್​ ಸರ್ದಾರ್​ 2’ ಸಿನಿಮಾ ತಂಡದ ಜೊತೆ ಹಿರಿಯ ಕಲಾವಿದರ ವಿಜಯ್ ರಾಝ್​ ಅವರು ಕಿರಿಕ್​ ಮಾಡಿಕೊಂಡಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ನಟನ ಸಹಾಯಕರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳ ಆಗಿದೆ ಎಂಬ ಆರೋಪ ಕೂಡ ಇದೆ. ಈ ಘಟನೆಗಳ ಬಗ್ಗೆ ವಿಜಯ್ ರಾಝ್​ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಆ ಬಗ್ಗೆ ಇಲ್ಲಿದೆ ವಿವರ..

ವಿಜಯ್​ ರಾಝ್ ಮೇಲೆ ದುರ್ನಡತೆ ಆರೋಪ: ಸಹಾಯಕನಿಂದ ಲೈಂಗಿಕ ಕಿರುಕುಳ ಆಗಿದ್ಯಾ?
ವಿಜಯ್​ ರಾಝ್​
ಮದನ್​ ಕುಮಾರ್​
|

Updated on: Aug 17, 2024 | 7:17 PM

Share

ಬಾಲಿವುಡ್​ನ ಖ್ಯಾತ ನಟ ವಿಜಯ್ ರಾಝ್ ಅವರು ವಿವಾದದಲ್ಲಿ ಸಿಲುಕಿದ್ದಾರೆ. ‘ಸನ್​ ಆಫ್​ ಸರ್ದಾರ್​ 2’ ಸಿನಿಮಾ ತಂಡದಿಂದ ಅವರನ್ನು ಹೊರಗೆ ಹಾಕಲಾಗಿದೆ. ಇದಕ್ಕೆಲ್ಲ ಕಾರಣ ಏನು ಎಂಬುದನ್ನು ಸಹ-ನಿರ್ಮಾಪಕ ಕುಮಾರ್​ ಪಾಠಕ್​ ಅವರು ಮಾಧ್ಯಮಗಳಿಗೆ ವಿವರಿಸಿದ್ದಾರೆ. ಶೂಟಿಂಗ್ ಸೆಟ್​ನಲ್ಲಿ ವಿಜಯ್ ರಾಝ್​ ಅವರು ದುರ್ವರ್ತನೆ ತೋರಿದ್ದಾರೆ ಎಂಬುದು ನಿರ್ಮಾಪಕರ ಆರೋಪ. ಅಲ್ಲದೇ, ವಿಜಯ್ ರಾಝ್​ ಅವರ ಸಹಾಯಕನಿಂದ ಹೋಟೆಲ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಕೂಡ ಆರೋಪಿಸಲಾಗಿದೆ.

ವಿಜಯ್​ ರಾಝ್​ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ‘ಸನ್​ ಆಫ್ ಸರ್ದಾರ್​ 2’ ಸಿನಿಮಾದಲ್ಲಿ ಅವರು ಅಜಯ್​ ದೇವಗನ್​ ಜೊತೆ ನಟಿಸುತ್ತಿದ್ದಾರೆ. ಆದರೆ ಅಜಯ್​ ದೇವಗನ್​ಗಿಂತಲೂ ಹೆಚ್ಚಿನ ಸೌಲಭ್ಯಗಳನ್ನು ತಮಗೆ ನೀಡಬೇಕು ಎಂದು ವಿಜಯ್ ರಾಝ್​ ಡಿಮ್ಯಾಂಡ್​ ಮಾಡಿದ್ದಾರೆ ಎಂದು ನಿರ್ಮಾಪಕರು ಆರೋಪಿಸಿದ್ದಾರೆ.

ವಿದೇಶದಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಅಲ್ಲಿಗೆ ವಿಜಯ್ ರಾಝ್​ ತೆರಳಿದ್ದರು. ತಮಗೆ ಉಳಿದುಕೊಳ್ಳಲು ನೀಡಿದ ಹೋಟೆಲ್​ ರೂಮ್​ ತುಂಬ ಚಿಕ್ಕದಾಗಿದೆ ಎಂದು ವಿಜಯ್ ರಾಝ್ ಅವರು ಸಮಸ್ಯೆ ಹೇಳಿಕೊಂಡಿದ್ದಾರೆ. ಆ ಕಾರಣದಿಂದಲೇ ನಿರ್ಮಾಪಕರು ಇಷ್ಟೆಲ್ಲ ಕಿರಿಕ್​ ಶುರು ಮಾಡಿದ್ದಾರೆ ಎನ್ನಲಾಗಿದೆ. ಅಜಯ್​ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಎಂಬ ಕಾರಣಕ್ಕೆ ತಮ್ಮನ್ನು ಸಿನಿಮಾದಿಂದ ಹೊರಗೆ ಇಡಲಾಗಿದೆ ಎಂದು ವಿಜಯ್ ರಾಝ್​ ಹೇಳಿದ್ದಾರೆ.

ಇದನ್ನೂ ಓದಿ: ಬಾಕ್ಸ್​ ಆಫೀಸ್​ನಲ್ಲಿ ಹೀನಾಯವಾಗಿ ಸೋತ ಅಜಯ್​ ದೇವಗನ್​-ಟಬು ಜೋಡಿಯ ಸಿನಿಮಾ

ಪ್ರತಿ ಕಲಾವಿದರನ್ನು ನೋಡಿಕೊಳ್ಳಲು ಸಹಾಯಕರನ್ನು ನೀಡಲಾಗುತ್ತದೆ. ಅವರನ್ನು ಸ್ಪಾಟ್​ ಬಾಯ್ಸ್​ ಎಂದು ಕರೆಯುತ್ತಾರೆ. ಆ ಪೈಕಿ ಒಬ್ಬನಿಂದ ಹೋಟೆಲ್​ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಇದೆ. ಅದರ ಬಗ್ಗೆಯೂ ವಿಜಯ್ ರಾಝ್​ ಮಾತನಾಡಿದ್ದಾರೆ. ‘ನನ್ನನ್ನು ಸಿನಿಮಾದಿಂದ ತೆಗೆದುಹಾಕಿದ್ದು ಹಾಗೂ ಸ್ಪಾಟ್​ ಬಾಯ್​ ಮೇಲಿನ ಆರೋಪ ಎಂಬುದು ಎರಡು ಪ್ರತ್ಯೇಕ ಘಟನೆ. ಇದನ್ನು ಒಟ್ಟಾಗಿ ನೋಡಬೇಡಿ. ಸ್ಪಾಟ್ ಬಾಯ್​ ವರ್ತನೆಗೂ ನನಗೂ ಸಂಬಂಧ ಇಲ್ಲ. ಅಂಥ ಕೃತ್ಯವನ್ನು ನಾನು ಬೆಂಬಲಿಸುವುದಿಲ್ಲ. ಆ ವ್ಯಕ್ತಿ ಜೊತೆ ನಾನು ಇನ್ಮುಂದೆ ಕೆಲಸ ಮಾಡಲ್ಲ’ ಎಂದು ವಿಜಯ್ ರಾಝ್​ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ