ಅಜಯ್ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಅಂತ ಹಿರಿಯ ನಟನನ್ನೇ ಸಿನಿಮಾದಿಂದ ತೆಗೆದ ನಿರ್ಮಾಪಕ

‘ಸನ್​ ಆಫ್​ ಸರ್ದಾರ್ 2’ ಸಿನಿಮಾದಲ್ಲಿ ಅಜಯ್​ ದೇವಗನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಯುನೈಡೆಟ್​ ಕಿಂಗ್​ಡಮ್​ನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಆದರೆ ಶೂಟಿಂಗ್​ ಸೆಟ್​ನಲ್ಲಿ ಕಲಾವಿದರ ನಡುವೆ ಕಿರಿಕ್​ ಆದಂತಿದೆ. ಅಜಯ್​ ದೇವಗನ್ ಅವರಿಗೆ ನಮಸ್ಕಾರ ಮಾಡಿಲ್ಲ ಎಂಬ ಕಾರಣಕ್ಕೆ ವಿಜಯ್ ರಾಝ್​ ಅವರನ್ನು ತೆಗೆದು ಹಾಕಿದ ಬಗ್ಗೆ ಸುದ್ದಿ ಆಗಿದೆ.

ಅಜಯ್ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಅಂತ ಹಿರಿಯ ನಟನನ್ನೇ ಸಿನಿಮಾದಿಂದ ತೆಗೆದ ನಿರ್ಮಾಪಕ
ಅಜಯ್​ ದೇವಗನ್​, ವಿಜಯ್​ ರಾಝ್
Follow us
|

Updated on: Aug 17, 2024 | 3:09 PM

ಬಾಲಿವುಡ್​ನ ‘ಸನ್​ ಆಫ್​ ಸರ್ದಾರ್ 2’ ಸಿನಿಮಾ ಸಿಕ್ಕಾಪಟ್ಟೆ ವಿವಾದ ಮಾಡಿಕೊಳ್ಳುತ್ತಿದೆ. ಈಗಾಗಲೇ ಈ ಸಿನಿಮಾದಿಂದ ನಟ ಸಂಜಯ್​ ದತ್​ ಅವರನ್ನು ಹೊರಗಿಡಲಾಗಿದೆ ಎಂಬ ಸುದ್ದಿ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟ ವಿಜಯ್ ರಾಝ್​ ಅವರನ್ನು ಚಿತ್ರತಂಡದಿಂದ ತೆಗೆದು ಹಾಕಲಾಗಿದೆ. ಪಾತ್ರವರ್ಗದಲ್ಲಿ ಬದಲಾವಣೆ ಆಗುವುದು ಸಹಜ. ಆದರೆ ಅದಕ್ಕೆ ಕಾರಣ ಏನು ಎಂಬುದು ಮುಖ್ಯ. ‘ಸನ್​ ಆಫ್​ ಸರ್ದಾರ್ 2’ ಸಿನಿಮಾದ ಹೀರೋ ಅಜಯ್​ ದೇವಗನ್​ಗೆ ವಿಜಯ್​ ರಾಝ್​ ನಮಸ್ಕಾರ ಮಾಡಿಲ್ಲ ಎಂಬ ಕಾರಣಕ್ಕೆ ಅವರಿಗೆ ಗೇಟ್​ ಪಾಸ್​ ನೀಡಿದ್ದು ಅಚ್ಚರಿಯ ಸಂಗತಿ.

ಬಹುನಿರೀಕ್ಷಿತ ‘ಸನ್​ ಆಫ್​ ಸರ್ದಾರ್ 2’ ಚಿತ್ರದಲ್ಲಿ ಅಜಯ್​ ದೇವಗನ್ ಅವರು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುನೈಡೆಟ್​ ಕಿಂಗ್​ಡಮ್​ನಲ್ಲಿ ಈ ಚಿತ್ರದ ಶೂಟಿಂಗ್ ಮಾಡಲಾಗುತ್ತಿದೆ. ಶೂಟಿಂಗ್​ ಸೆಟ್​ನಲ್ಲಿ ಆಗಿದ್ದೇನು ಎಂಬುದನ್ನು ವಿಜಯ್ ರಾಝ್​ ಹೇಳಿದ್ದಾರೆ. ‘ನಾನು ವ್ಯಾನಿಟಿ ವ್ಯಾನ್​ನಿಂದ ಹೊರಬಂದು ನೋಡಿದಾಗ ಅಜಯ್​ ದೇವಗನ್​ ಅವರು 25 ಮೀಟರ್​ ದೂರದಲ್ಲಿ ನಿಂತಿದ್ದರು. ಅವರು ಬ್ಯುಸಿ ಇದ್ದರು ಎಂಬ ಕಾರಣಕ್ಕಾಗಿ ನಾನು ಅವರನ್ನು ಮಾತನಾಡಿಸಿಲ್ಲ. 25 ನಿಮಿಷಗಳ ಬಳಿಕ ನಿರ್ಮಾಪಕರು ಬಂದು ನಿಮ್ಮನ್ನು ಸಿನಿಮಾದಿಂದ ತೆಗೆದುಹಾಕಿದ್ದೇವೆ ಅಂತ ತಿಳಿಸಿದರು’ ಎಂದಿದ್ದಾರೆ ವಿಜಯ್ ರಾಝ್​.

‘ನನ್ನಿಂದ ಆದ ಏಕೈಕ ತಪ್ಪು ಎಂದರೆ ಅಜಯ್​ ದೇವಗನ್​ ಅವರನ್ನು ಮಾತನಾಡಿಸಿ ನಮಸ್ಕಾರ ಮಾಡದೇ ಇರುವುದು. ಚಿತ್ರತಂಡದ ಬೇರೆ ಯಾರನ್ನೂ ನಾನು ಭೇಟಿ ಮಾಡಿಲ್ಲ. ಅಜಯ್​ ದೇವಗನ್​ಗೆ ನಮಸ್ಕಾರ ಮಾಡಿಲ್ಲದ ಕಾರಣ, ಶೂಟಿಂಗ್​ ಸೆಟ್​ಗೆ ಬಂದು 25 ನಿಮಿಷಗಳ ಬಳಿಕ ನನ್ನನ್ನು ತೆಗೆದುಹಾಕಿದರು. ಇವರೆಲ್ಲ ತುಂಬ ಪ್ರಭಾವಿ ವ್ಯಕ್ತಿಗಳು’ ಎಂದು ವಿಜಯ್​ ರಾಝ್​ ಹೇಳಿದ್ದಾರೆ.

ಇದನ್ನೂ ಓದಿ: ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?

ಅನೇಕ ಸಿನಿಮಾಗಳಲ್ಲಿ ನಟಿಸಿ ವಿಜಯ್​ ರಾಝ್​ ಅವರು ಫೇಮಸ್​ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಶೂಟಿಂಗ್​ ವೇಳೆ ಅವರು ಸರಿಯಾಗಿ ನಡೆದುಕೊಂಡಿಲ್ಲ ಹಾಗೂ ವಿಪರೀತಿ ಬೇಡಿಕೆ ಇಟ್ಟಿದ್ದಾರೆ ಎಂಬ ಕಾರಣಕ್ಕೆ ಅವರನ್ನು ತೆಗೆದುಹಾಕಲಾಗಿದೆ ಎಂದು ಮಾಧ್ಯಮಗಳಿಗೆ ‘ಸನ್​ ಆಫ್​ ಸರ್ದಾರ್ 2’ ಸಿನಿಮಾದ ನಿರ್ಮಾಪಕರು ತಿಳಿಸಿದ್ದಾರೆ. ಈ ಬಗ್ಗೆ ಅಜಯ್​ ದೇವಗನ್​ ಇನ್ನಷ್ಟೇ ಮೌನ ಮುರಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು