AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಯ್ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಅಂತ ಹಿರಿಯ ನಟನನ್ನೇ ಸಿನಿಮಾದಿಂದ ತೆಗೆದ ನಿರ್ಮಾಪಕ

‘ಸನ್​ ಆಫ್​ ಸರ್ದಾರ್ 2’ ಸಿನಿಮಾದಲ್ಲಿ ಅಜಯ್​ ದೇವಗನ್ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಯುನೈಡೆಟ್​ ಕಿಂಗ್​ಡಮ್​ನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಆದರೆ ಶೂಟಿಂಗ್​ ಸೆಟ್​ನಲ್ಲಿ ಕಲಾವಿದರ ನಡುವೆ ಕಿರಿಕ್​ ಆದಂತಿದೆ. ಅಜಯ್​ ದೇವಗನ್ ಅವರಿಗೆ ನಮಸ್ಕಾರ ಮಾಡಿಲ್ಲ ಎಂಬ ಕಾರಣಕ್ಕೆ ವಿಜಯ್ ರಾಝ್​ ಅವರನ್ನು ತೆಗೆದು ಹಾಕಿದ ಬಗ್ಗೆ ಸುದ್ದಿ ಆಗಿದೆ.

ಅಜಯ್ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಅಂತ ಹಿರಿಯ ನಟನನ್ನೇ ಸಿನಿಮಾದಿಂದ ತೆಗೆದ ನಿರ್ಮಾಪಕ
ಅಜಯ್​ ದೇವಗನ್​, ವಿಜಯ್​ ರಾಝ್
ಮದನ್​ ಕುಮಾರ್​
|

Updated on: Aug 17, 2024 | 3:09 PM

Share

ಬಾಲಿವುಡ್​ನ ‘ಸನ್​ ಆಫ್​ ಸರ್ದಾರ್ 2’ ಸಿನಿಮಾ ಸಿಕ್ಕಾಪಟ್ಟೆ ವಿವಾದ ಮಾಡಿಕೊಳ್ಳುತ್ತಿದೆ. ಈಗಾಗಲೇ ಈ ಸಿನಿಮಾದಿಂದ ನಟ ಸಂಜಯ್​ ದತ್​ ಅವರನ್ನು ಹೊರಗಿಡಲಾಗಿದೆ ಎಂಬ ಸುದ್ದಿ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟ ವಿಜಯ್ ರಾಝ್​ ಅವರನ್ನು ಚಿತ್ರತಂಡದಿಂದ ತೆಗೆದು ಹಾಕಲಾಗಿದೆ. ಪಾತ್ರವರ್ಗದಲ್ಲಿ ಬದಲಾವಣೆ ಆಗುವುದು ಸಹಜ. ಆದರೆ ಅದಕ್ಕೆ ಕಾರಣ ಏನು ಎಂಬುದು ಮುಖ್ಯ. ‘ಸನ್​ ಆಫ್​ ಸರ್ದಾರ್ 2’ ಸಿನಿಮಾದ ಹೀರೋ ಅಜಯ್​ ದೇವಗನ್​ಗೆ ವಿಜಯ್​ ರಾಝ್​ ನಮಸ್ಕಾರ ಮಾಡಿಲ್ಲ ಎಂಬ ಕಾರಣಕ್ಕೆ ಅವರಿಗೆ ಗೇಟ್​ ಪಾಸ್​ ನೀಡಿದ್ದು ಅಚ್ಚರಿಯ ಸಂಗತಿ.

ಬಹುನಿರೀಕ್ಷಿತ ‘ಸನ್​ ಆಫ್​ ಸರ್ದಾರ್ 2’ ಚಿತ್ರದಲ್ಲಿ ಅಜಯ್​ ದೇವಗನ್ ಅವರು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಯುನೈಡೆಟ್​ ಕಿಂಗ್​ಡಮ್​ನಲ್ಲಿ ಈ ಚಿತ್ರದ ಶೂಟಿಂಗ್ ಮಾಡಲಾಗುತ್ತಿದೆ. ಶೂಟಿಂಗ್​ ಸೆಟ್​ನಲ್ಲಿ ಆಗಿದ್ದೇನು ಎಂಬುದನ್ನು ವಿಜಯ್ ರಾಝ್​ ಹೇಳಿದ್ದಾರೆ. ‘ನಾನು ವ್ಯಾನಿಟಿ ವ್ಯಾನ್​ನಿಂದ ಹೊರಬಂದು ನೋಡಿದಾಗ ಅಜಯ್​ ದೇವಗನ್​ ಅವರು 25 ಮೀಟರ್​ ದೂರದಲ್ಲಿ ನಿಂತಿದ್ದರು. ಅವರು ಬ್ಯುಸಿ ಇದ್ದರು ಎಂಬ ಕಾರಣಕ್ಕಾಗಿ ನಾನು ಅವರನ್ನು ಮಾತನಾಡಿಸಿಲ್ಲ. 25 ನಿಮಿಷಗಳ ಬಳಿಕ ನಿರ್ಮಾಪಕರು ಬಂದು ನಿಮ್ಮನ್ನು ಸಿನಿಮಾದಿಂದ ತೆಗೆದುಹಾಕಿದ್ದೇವೆ ಅಂತ ತಿಳಿಸಿದರು’ ಎಂದಿದ್ದಾರೆ ವಿಜಯ್ ರಾಝ್​.

‘ನನ್ನಿಂದ ಆದ ಏಕೈಕ ತಪ್ಪು ಎಂದರೆ ಅಜಯ್​ ದೇವಗನ್​ ಅವರನ್ನು ಮಾತನಾಡಿಸಿ ನಮಸ್ಕಾರ ಮಾಡದೇ ಇರುವುದು. ಚಿತ್ರತಂಡದ ಬೇರೆ ಯಾರನ್ನೂ ನಾನು ಭೇಟಿ ಮಾಡಿಲ್ಲ. ಅಜಯ್​ ದೇವಗನ್​ಗೆ ನಮಸ್ಕಾರ ಮಾಡಿಲ್ಲದ ಕಾರಣ, ಶೂಟಿಂಗ್​ ಸೆಟ್​ಗೆ ಬಂದು 25 ನಿಮಿಷಗಳ ಬಳಿಕ ನನ್ನನ್ನು ತೆಗೆದುಹಾಕಿದರು. ಇವರೆಲ್ಲ ತುಂಬ ಪ್ರಭಾವಿ ವ್ಯಕ್ತಿಗಳು’ ಎಂದು ವಿಜಯ್​ ರಾಝ್​ ಹೇಳಿದ್ದಾರೆ.

ಇದನ್ನೂ ಓದಿ: ಸಂಜಯ್​ ದತ್​ ಅಪರಾಧ ಹಿನ್ನೆಲೆಯಿಂದ ಚಿತ್ರತಂಡಕ್ಕೆ ತೊಂದರೆ; ನಟನಿಗೆ ಗೇಟ್​ ಪಾಸ್​?

ಅನೇಕ ಸಿನಿಮಾಗಳಲ್ಲಿ ನಟಿಸಿ ವಿಜಯ್​ ರಾಝ್​ ಅವರು ಫೇಮಸ್​ ಆಗಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಶೂಟಿಂಗ್​ ವೇಳೆ ಅವರು ಸರಿಯಾಗಿ ನಡೆದುಕೊಂಡಿಲ್ಲ ಹಾಗೂ ವಿಪರೀತಿ ಬೇಡಿಕೆ ಇಟ್ಟಿದ್ದಾರೆ ಎಂಬ ಕಾರಣಕ್ಕೆ ಅವರನ್ನು ತೆಗೆದುಹಾಕಲಾಗಿದೆ ಎಂದು ಮಾಧ್ಯಮಗಳಿಗೆ ‘ಸನ್​ ಆಫ್​ ಸರ್ದಾರ್ 2’ ಸಿನಿಮಾದ ನಿರ್ಮಾಪಕರು ತಿಳಿಸಿದ್ದಾರೆ. ಈ ಬಗ್ಗೆ ಅಜಯ್​ ದೇವಗನ್​ ಇನ್ನಷ್ಟೇ ಮೌನ ಮುರಿಯಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ