ಕತ್ರಿನಾ ಕೈಫ್​ ಹಾಗೂ ವಿಜಯ್​ ಸೇತುಪತಿಗೆ ವಿಶೇಷ ಕ್ಲಾಸ್​; ಇದು ಹೊಸ ಸಿನಿಮಾ ಅಪ್​ಡೇಟ್​

ಆಯುಷ್ಮಾನ್​ ಖುರಾನಾ ಅಭಿನಯದ ‘ಅಂಧಾಧೂನ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರ ನಿರ್ದೇಶನ ಮಾಡಿದ್ದ ಶ್ರೀರಾಮ್​ ರಾಘವನ್​ ಅವರು ಈಗ ‘ಮೇರಿ ಕ್ರಿಸ್​ಮಸ್’​ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಕತ್ರಿನಾ ಕೈಫ್​ ಹಾಗೂ ವಿಜಯ್​ ಸೇತುಪತಿಗೆ ವಿಶೇಷ ಕ್ಲಾಸ್​; ಇದು ಹೊಸ ಸಿನಿಮಾ ಅಪ್​ಡೇಟ್​
ವಿಜಯ್​-ಕತ್ರಿನಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 13, 2022 | 2:50 PM

ನಟ ವಿಜಯ್​ ಸೇತುಪತಿ (Vijay Sethupathi) ದಕ್ಷಿಣ ಭಾರತದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಅವರ ನಟನೆ ಎಲ್ಲರ ಗಮನ ಸೆಳೆದಿದೆ. ‘96’, ‘ವಿಕ್ರಮ್​ ವೇದ’ ಚಿತ್ರಗಳಲ್ಲಿ ಅವರ ಅದ್ಭುತ ನಟನೆಗೆ ಪ್ರೇಕ್ಷಕರು ಮಾರು ಹೋಗಿದ್ದಾರೆ. ಕತ್ರಿನಾ ಕೈಫ್ (Katrina Kaif)​ ಕೂಡ ಅಷ್ಟೇ, ಬಾಲಿವುಡ್​ನಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಈಗ ಇಬ್ಬರೂ ಹೊಸ ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ. ‘ಮೇರಿ ಕ್ರಿಸ್​ಮಸ್​’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್​ ಆರಂಭವಾಗೋಕೆ ಇನ್ನೂ ಸಮಯವಿದೆ. ಆದರೆ, ಅದಕ್ಕೂ ಮೊದಲು ಈ ಜೋಡಿ ವರ್ಕ್​​ಶಾಪ್​ ಒಂದರಲ್ಲಿ ಪಾಲ್ಗೊಳ್ಳಲಿದೆ.

ಆಯುಷ್ಮಾನ್​ ಖುರಾನಾ ಅಭಿನಯದ ‘ಅಂಧಾಧೂನ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಚಿತ್ರ ನಿರ್ದೇಶನ ಮಾಡಿದ್ದ ಶ್ರೀರಾಮ್​ ರಾಘವನ್​ ಅವರು ಈಗ ‘ಮೇರಿ ಕ್ರಿಸ್​ಮಸ್’​ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ಸದ್ಯ ಪ್ರಗತಿಯಲ್ಲಿವೆ. ಈಗ ಕತ್ರಿನಾ ಹಾಗೂ ವಿಜಯ್​ ಸೇತುಪತಿಗೆ ವಿಶೇಷ ವರ್ಕ್​ಶಾಪ್​ ನಡೆಸಲು ನಿರ್ದೇಶಕರು ನಿರ್ಧರಿಸಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ ಎನ್ನಲಾಗಿದೆ.

ಕತ್ರಿನಾ ಕೈಫ್​ ಹಾಗೂ ವಿಜಯ್​ ಸೇತುಪತಿ ಈವರೆಗೆ ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ. ಇದೇ ಮೊದಲ ಬಾರಿಗೆ ಇಬ್ಬರೂ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇವರ ನಡುವೆ ಒಳ್ಳೆಯ ಕೆಮಿಸ್ಟ್ರಿ ಬೆಳೆಯಲಿ ಎಂಬುದು ನಿರ್ದೇಶಕರ ಉದ್ದೇಶ. ಇನ್ನು ಇಬ್ಬರ ಪಾತ್ರ ತುಂಬಾನೇ ಭಿನ್ನವಾಗಿದ್ದು, ಅದಕ್ಕೆ ಕೊಂಚ ಸಿದ್ಧತೆಯ ಅಗತ್ಯವಿದೆ. ಹೀಗಾಗಿ, ಈ ಜೋಡಿಗೆ ವಿಶೇಷ ಕ್ಲಾಸ್​ ತೆಗೆದುಕೊಳ್ಳಲಾಗುತ್ತಿದೆ.

‘ಕತ್ರಿನಾ ಕೈಫ್ ಅವರನ್ನು ನಾನು ಭೇಟಿಯಾಗಿಲ್ಲ. ಆದರೆ, ಅದು ನನಗೆ ಸಮಸ್ಯೆಯಲ್ಲ. ಈ ಮೊದಲು ಕೂಡ ಹಿಂದೆಂದೂ ಭೇಟಿಯಾಗದ ಅನೇಕ ಸಹ ನಟರೊಂದಿಗೆ ನಾನು ಅಭಿನಯಿಸಿದ್ದೇನೆ. ನಾನು ಚಿತ್ರದ ಸ್ಕ್ರಿಪ್ಟ್ ಇಷ್ಟಪಟ್ಟೆ. ಹೀಗಾಗಿ ಸಿನಿಮಾ ಒಪ್ಪಿಕೊಂಡಿದ್ದೇನೆ’ ಎಂದಿದ್ದಾರೆ ವಿಜಯ್​ ಸೇತುಪತಿ.

ಕತ್ರಿನಾ ಕೈಫ್​ ಹಾಗೂ ವಿಕ್ಕಿ ಕೌಶಲ್​ ಇತ್ತೀಚೆಗೆ ಮದುವೆ ಆಗಿದ್ದರು. ಅದ್ದೂರಿಯಾಗಿ ಇವರ ವಿವಾಹ ನೆರವೇರಿತ್ತು. ಮದುವೆ ಫೋಟೋಗಳನ್ನು ಮಾತ್ರ ಈ ದಂಪತಿ ಹಂಚಿಕೊಂಡಿತ್ತು. ಯಾವುದೇ ವಿಡಿಯೋವನ್ನು ಇವರು ಹಂಚಿಕೊಂಡಿಲ್ಲ. ಅಮೇಜಾನ್​ ಪ್ರೈಮ್​ ವಿಡಿಯೋಗೆ ಮದುವೆ ವಿಡಿಯೋ ಪ್ರಸಾರದ ಹಕ್ಕನ್ನು ಇವರು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿಶೇಷ ಫೋಟೊ ಹಂಚಿಕೊಂಡ ಕತ್ರಿನಾ ಕೈಫ್​; ಅಭಿಮಾನಿಗಳು ಪತ್ತೆ ಹಚ್ಚಲು ಹೋಗಿದ್ದು ಏನು?

Year Ender 2021: ಈ ವರ್ಷ ಭಾರೀ ಸುದ್ದಿ ಮಾಡಿದ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಮದುವೆ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ