AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Sethupathi: ಶಾರುಖ್​ ಖಾನ್ ಎದುರು ವಿಲನ್​ ಆಗಿ ನಟಿಸಿದ ವಿಜಯ್​ ಸೇತುಪತಿಗೆ ಸಿಕ್ಕ ಸಂಬಳ ಎಷ್ಟು?

Vijay Sethupathi Remuneration: ‘ಜವಾನ್​’ ಸಿನಿಮಾದಲ್ಲಿ ವಿಜಯ್​ ಸೇತುಪತಿ ಅವರು ಖಳನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಎಷ್ಟೋ ಹೀರೋಗಳಿಗೂ ಸಿಗದಷ್ಟು ಸಂಭಾವನೆಯನ್ನು ವಿಜಯ್​ ಸೇತುಪತಿ ಅವರು ವಿಲನ್​ ಆಗಿ ಪಡೆಯುತ್ತಿದ್ದಾರೆ.

Vijay Sethupathi: ಶಾರುಖ್​ ಖಾನ್ ಎದುರು ವಿಲನ್​ ಆಗಿ ನಟಿಸಿದ ವಿಜಯ್​ ಸೇತುಪತಿಗೆ ಸಿಕ್ಕ ಸಂಬಳ ಎಷ್ಟು?
ವಿಜಯ್​ ಸೇತುಪತಿ
ಮದನ್​ ಕುಮಾರ್​
|

Updated on: Jul 17, 2023 | 9:00 PM

Share

ಎಲ್ಲ ಬಗೆಯ ಪಾತ್ರಗಳಿಗೆ ಜೀವ ತುಂಬುವಂತಹ ಕಲಾವಿದ ವಿಜಯ್​ ಸೇತುಪತಿ (Vijay Sethupathi) ಅವರು ಬಾಲಿವುಡ್​ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ (Jawan) ಸಿನಿಮಾದಲ್ಲಿ ಅವರು ವಿಲನ್​ ಆಗಿ ನಟಿಸಿದ್ದಾರೆ. ಸ್ಟಾರ್​ ನಟನಾಗಿ ಮಿಂಚುತ್ತಿರುವ ಅವರಿಗೆ ಕೈ ತುಂಬ ಸಂಭಾವನೆ ಸಿಗುತ್ತದೆ. ಅದರಲ್ಲೂ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳ ಸಿನಿಮಾಗಳಲ್ಲಿ ನಟಿಸಿದರೆ ಸಂಬಳ ಇನ್ನೂ ಹೆಚ್ಚುತ್ತದೆ. ಅದಕ್ಕೆ ಬೆಸ್ಟ್​ ಉದಾಹರಣೆ ಎಂದರೆ ‘ಜವಾನ್​’ ಸಿನಿಮಾ. ಈ ಚಿತ್ರಕ್ಕೆ ಶಾರುಖ್​ ಖಾನ್ (Shah Rukh Khan)​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್​ಮೆಂಟ್​’ ಬಂಡವಾಳ ಹೂಡಿದೆ. ವಿಜಯ್​ ಸೇತುಪತಿ ಅವರಿಗೆ ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ವಿಜಯ್​ ಸೇತುಪತಿ ಅವರು ತಮಿಳು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ‘ಜವಾನ್​’ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ಕಾಲಿವುಡ್​ ನಿರ್ದೇಶಕ ಅಟ್ಲಿ. ಹಾಗಾಗಿ ತಮಿಳು ಚಿತ್ರರಂಗದ ಹಲವರಿಗೆ ‘ಜವಾನ್​’ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ. ಶಾರುಖ್​ ಖಾನ್​ ಎದುರು ವಿಜಯ್​ ಸೇತುಪತಿಯವರೇ ವಿಲನ್​ ಆಗಿ ನಟಿಸಬೇಕು ಎಂಬುದು ಚಿತ್ರತಂಡದ ಬೇಡಿಕೆ ಆಗಿತ್ತು. ಅದಕ್ಕಾಗಿ ದುಬಾರಿ ಸಂಭಾವನೆ ನೀಡಲೂ ಶಾರುಖ್​ ಖಾನ್​ ರೆಡಿ ಇದ್ದರು. ಹಾಗಾಗಿ ವಿಜಯ್​ ಸೇತುಪತಿ ಅವರ ಜೇಬಿಗೆ 21 ಕೋಟಿ ರೂಪಾಯಿ ಸೇರಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಎಷ್ಟೋ ಹೀರೋಗಳು ಕೂಡ ಇಷ್ಟ ಸಂಭಾವನೆ ಪಡೆದಿಲ್ಲ.

ಇದನ್ನೂ ಓದಿ: ಯಶ್​ ನಟನೆಯ ಸಿನಿಮಾಗಳನ್ನು ನೋಡಿ ‘ಜವಾನ್​’ ಚಿತ್ರಕ್ಕಾಗಿ ತಯಾರಿ ಮಾಡಿಕೊಂಡಿದ್ದ ಶಾರುಖ್​ ಖಾನ್​

ಸೆಪ್ಟೆಂಬರ್​ 7ರಂದು ‘ಜವಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆಗೆ ದೀಪಿಕಾ ಪಡುಕೋಣೆ, ನಯನತಾರಾ, ಸಾನ್ಯಾ ಮಲ್ಹೋತ್ರಾ, ರಿಧಿ ಡೋಗ್ರಾ ಮುಂತಾದವರು ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿರುವ ಪ್ರಿವ್ಯೂ ನೋಡಿ ಎಲ್ಲರೂ ವಾವ್​ ಎಂದಿದ್ದಾರೆ. ಇದರಲ್ಲಿನ ಆ್ಯಕ್ಷನ್​ ಕಂಡು ಶಾರುಖ್​ ಖಾನ್​ ಅಭಿಮಾನಿಗಳಿಗೆ ಥ್ರಿಲ್​ ಆಗಿದೆ. ತಾಂತ್ರಿಕವಾಗಿ ಈ ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ.

ಇದನ್ನೂ ಓದಿ: Jawan: ‘ಜವಾನ್​’ ಸಿನಿಮಾದ ಪ್ರಿವ್ಯೂನಲ್ಲಿ ಈ ಸುಂದರಿಗಾಗಿ ಹುಡುಕಾಡಿದ ಫ್ಯಾನ್ಸ್​; ಯಾರು ಈ ಬೆಡಗಿ?

2023ರ ಆರಂಭದಲ್ಲೇ ಶಾರುಖ್​ ಖಾನ್​ ಅವರಿಗೆ ‘ಪಠಾಣ್​’ ಸಿನಿಮಾ ಮೂಲಕ ಭರ್ಜರಿ ಗೆಲುವು ಸಿಕ್ಕಿತು. ಆ ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಅದೇ ರೀತಿ ‘ಜವಾನ್​’ ಸಿನಿಮಾ ಕೂಡ ಅಬ್ಬರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆ ಬಳಿಕ ‘ಡಂಕಿ’ ಸಿನಿಮಾ ತೆರೆಕಾಣಲಿದೆ. ಆ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ