AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್
ವಿಜಯ್ ಸೇತುಪತಿ-ಶಾರುಖ್ ಖಾನ್
TV9 Web
| Edited By: |

Updated on: Aug 04, 2022 | 6:35 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್​’ ಸಿನಿಮಾ (Jawan Movie) ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ತಮಿಳು ನಿರ್ದೇಶಕ ಅಟ್ಲೀ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಟ್ಲೀ ಈಗಾಗಲೇ ಕಾಲಿವುಡ್​ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಶಾರುಖ್ ಹಾಗೂ ಅಟ್ಲೀ ಒಂದಾಗಿರುವುದು ಸಾಕಷ್ಟು ಕುತೂಹಲ ಸೃಷ್ಟಿ ಮಾಡಿದೆ. ಈ ಚಿತ್ರಕ್ಕೆ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಜವಾನ್​’ ಪ್ಯಾನ್ ಇಂಡಿಯಾ ಸಿನಿಮಾ. ಈ ಚಿತ್ರಕ್ಕೆ ನಯನತಾರಾ ನಾಯಕಿ. ಈ ಚಿತ್ರಕ್ಕೆ ವಿಲನ್ ಯಾರು ಆಗಲಿದ್ದಾರೆ ಎಂಬ ಕುತೂಹಲ ಇತ್ತು. ಆರಂಭದಲ್ಲಿ ಈ ಚಿತ್ರಕ್ಕೆ ರಾಣಾ ದಗ್ಗುಬಾಟಿ ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಅವರು ಈ ಆಫರ್ ಒಪ್ಪಿದ್ದರು. ಆದರೆ, ಅವರು ಕಾರಣಾಂತರಗಳಿಂದ ಸಿನಿಮಾ ತಂಡದಿಂದ ಹೊರ ನಡೆದಿದ್ದರು. ಈಗ ವಿಜಯ್ ಸೇತುಪತಿ ಅವರು ಈ ಸ್ಥಾನ ತುಂಬುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಣಾ ದಗ್ಗುಬಾಟಿ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಲು ಸಾಕಷ್ಟು ಆಸಕ್ತಿ ತೋರಿದ್ದರು. ಆದರೆ, ಅವರು ತಮ್ಮ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಿನಿಮಾದಿಂದ ಹೊರ ಬಂದಿದ್ದಾರೆ. ಆ ಬಳಿಕ ಈ ಆಫರ್ ವಿಜಯ್ ಸೇತುಪತಿ ಬಳಿ ಹೋಗಿದೆ. ಅವರು ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡಿದ್ದಾರೆ. ವಿಶೇಷ ಎಂದರೆ ಈ ಆಫರ್​​ ಅನ್ನು ವಿಜಯ್​ ಸೇತುಪತಿಗೆ ಸ್ವತಃ ಶಾರುಖ್ ಖಾನ್ ನೀಡಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕಾಗಿ ತಮ್ಮ ಇತರ ಸಿನಿಮಾಗಳ ಕಾಲ್​ಶೀಟ್​ನಲ್ಲಿ ವಿಜಯ್ ಸೇತುಪತಿ ಹಲವು ಬದಲಾವಣೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್

ಶಾರುಖ್ ಖಾನ್ ಅವರು ‘ಜವಾನ್​’ ಮಾತ್ರವಲ್ಲದೆ, ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಹಾಗೂ ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಪಠಾಣ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಗಳ ಬಗ್ಗೆಯೂ ಫ್ಯಾನ್ಸ್​ಗೆ ನಿರೀಕ್ಷೆ ಇದೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ