AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್
ವಿಜಯ್ ಸೇತುಪತಿ-ಶಾರುಖ್ ಖಾನ್
TV9 Web
| Edited By: |

Updated on: Aug 04, 2022 | 6:35 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್​’ ಸಿನಿಮಾ (Jawan Movie) ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ತಮಿಳು ನಿರ್ದೇಶಕ ಅಟ್ಲೀ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಟ್ಲೀ ಈಗಾಗಲೇ ಕಾಲಿವುಡ್​ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಶಾರುಖ್ ಹಾಗೂ ಅಟ್ಲೀ ಒಂದಾಗಿರುವುದು ಸಾಕಷ್ಟು ಕುತೂಹಲ ಸೃಷ್ಟಿ ಮಾಡಿದೆ. ಈ ಚಿತ್ರಕ್ಕೆ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಜವಾನ್​’ ಪ್ಯಾನ್ ಇಂಡಿಯಾ ಸಿನಿಮಾ. ಈ ಚಿತ್ರಕ್ಕೆ ನಯನತಾರಾ ನಾಯಕಿ. ಈ ಚಿತ್ರಕ್ಕೆ ವಿಲನ್ ಯಾರು ಆಗಲಿದ್ದಾರೆ ಎಂಬ ಕುತೂಹಲ ಇತ್ತು. ಆರಂಭದಲ್ಲಿ ಈ ಚಿತ್ರಕ್ಕೆ ರಾಣಾ ದಗ್ಗುಬಾಟಿ ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಅವರು ಈ ಆಫರ್ ಒಪ್ಪಿದ್ದರು. ಆದರೆ, ಅವರು ಕಾರಣಾಂತರಗಳಿಂದ ಸಿನಿಮಾ ತಂಡದಿಂದ ಹೊರ ನಡೆದಿದ್ದರು. ಈಗ ವಿಜಯ್ ಸೇತುಪತಿ ಅವರು ಈ ಸ್ಥಾನ ತುಂಬುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಣಾ ದಗ್ಗುಬಾಟಿ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಲು ಸಾಕಷ್ಟು ಆಸಕ್ತಿ ತೋರಿದ್ದರು. ಆದರೆ, ಅವರು ತಮ್ಮ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಿನಿಮಾದಿಂದ ಹೊರ ಬಂದಿದ್ದಾರೆ. ಆ ಬಳಿಕ ಈ ಆಫರ್ ವಿಜಯ್ ಸೇತುಪತಿ ಬಳಿ ಹೋಗಿದೆ. ಅವರು ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡಿದ್ದಾರೆ. ವಿಶೇಷ ಎಂದರೆ ಈ ಆಫರ್​​ ಅನ್ನು ವಿಜಯ್​ ಸೇತುಪತಿಗೆ ಸ್ವತಃ ಶಾರುಖ್ ಖಾನ್ ನೀಡಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕಾಗಿ ತಮ್ಮ ಇತರ ಸಿನಿಮಾಗಳ ಕಾಲ್​ಶೀಟ್​ನಲ್ಲಿ ವಿಜಯ್ ಸೇತುಪತಿ ಹಲವು ಬದಲಾವಣೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್

ಶಾರುಖ್ ಖಾನ್ ಅವರು ‘ಜವಾನ್​’ ಮಾತ್ರವಲ್ಲದೆ, ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಹಾಗೂ ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಪಠಾಣ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಗಳ ಬಗ್ಗೆಯೂ ಫ್ಯಾನ್ಸ್​ಗೆ ನಿರೀಕ್ಷೆ ಇದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ