AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿ ದಿನ ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯಾ ರೈ ರೀತಿ ಆಗುತ್ತದೆ’: ವಿವಾದ ಹುಟ್ಟಿಸಿದ ಸಚಿವರ ಹೇಳಿಕೆ

‘ನೀವು ಐಶ್ವರ್ಯಾ ರೈ ಅವರನ್ನು ನೋಡಿದ್ದೀರಾ? ಅವರು ಪ್ರತಿ ದಿನ ಮೀನು ತಿನ್ನುತ್ತಿದ್ದರು. ಮೀನು ತಿನ್ನುವುದರಿಂದ ಎರಡು ಪ್ರಯೋಜನಗಳಿವೆ. ಮಹಿಳೆಯರು ಸ್ಲಿಮ್​ ಆಗುತ್ತಾರೆ ಮತ್ತು ಆಕರ್ಷಕವಾಗಿ ಕಾಣುತ್ತಾರೆ’ ಎಂದು ವಿಜಯ್ ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯಿಂದಾಗಿ ಚರ್ಚೆ ಶುರುವಾಗಿದೆ.

‘ಪ್ರತಿ ದಿನ ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯಾ ರೈ ರೀತಿ ಆಗುತ್ತದೆ’: ವಿವಾದ ಹುಟ್ಟಿಸಿದ ಸಚಿವರ ಹೇಳಿಕೆ
ಐಶ್ವರ್ಯಾ ರೈ ಬಚ್ಚನ್​
Follow us
ಮದನ್​ ಕುಮಾರ್​
|

Updated on: Aug 21, 2023 | 3:10 PM

ಮಹಾರಾಷ್ಟ್ರದಲ್ಲಿ ಏಕನಾಥ್​ ಶಿಂಧೆ ಸರ್ಕಾರದ ಸಚಿವರು, ಶಾಸಕರು ದಿನವೂ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಯಲ್ಲಿ ಇರುತ್ತಾರೆ. ಎರಡು ದಿನಗಳ ಹಿಂದೆ ಶಿಂಧೆ ಗುಂಪಿನ ಶಾಸಕ ಭರತ್ ಗೋಗವ್ಲೆ ಅವರು ಶಾಸಕರಿಗೆ ಸಚಿವ ಸ್ಥಾನ ಹೇಗೆ ಸಿಕ್ಕಿತು ಎಂಬುದನ್ನು ಬಹಿರಂಗಪಡಿಸುವ ಮೂಲಕ ಶಿಂಧೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಇದೀಗ ಬುಡಕಟ್ಟು ಅಭಿವೃದ್ಧಿ ಸಚಿವ ಡಾ. ವಿಜಯ್ ಕುಮಾರ್ ಗವಿತ್ (Vijaykumar Gavit) ಅವರು ಒಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ‘ನಟಿ ಐಶ್ವರ್ಯಾ ರೈ (Aishwarya Rai Bachchan) ಮೀನು ತಿನ್ನುತ್ತಿದ್ದರು. ಆದ್ದರಿಂದ ಅವರ ಕಣ್ಣುಗಳು ಮತ್ತು ಚರ್ಮವು ಸುಂದರವಾಗಿದೆ. ಮೀನು (Fish) ತಿನ್ನುವ ಮೂಲಕ ನಿಮ್ಮ ಕಣ್ಣುಗಳನ್ನು ಸುಂದರವಾಗಿಸಿಕೊಳ್ಳಿ’ ಎಂದು ವಿಜಯ್ ಕುಮಾರ್ ಗವಿತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಧುಲೆ ಜಿಲ್ಲೆಯ ಅಂತುರ್ಲಿಯಲ್ಲಿ ಬುಡಕಟ್ಟು ಮೀನುಗಾರಿಗೆ ಮೀನುಗಾರಿಕೆಯ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬುಡಕಟ್ಟು ಅಭಿವೃದ್ಧಿ ಸಚಿವ ಡಾ. ವಿಜಯ್ ಕುಮಾರ್ ಗವಿತ್ ಈ ಹೇಳಿಕೆ ನೀಡಿದ್ದಾರೆ. ಆ ಸಮಯದಲ್ಲಿ, ಡಾ. ಸುಪ್ರಿಯಾ ಗವಿತ್ ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ: ‘ಪೊನ್ನಿಯಿನ್​ ಸೆಲ್ವನ್​ 2’ಸಿನಿಮಾಗೆ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ಬಚ್ಚನ್​ ಸೊಸೆಗೆ ಭಾರಿ ಬೇಡಿಕೆ

‘ಬಾಲಿವುಡ್​ನ ಖ್ಯಾತ ನಟಿ ಐಶ್ವರ್ಯಾ ರೈ ಅವರು ಪ್ರತಿ ದಿನ ಮೀನು ತಿನ್ನುವುದರಿಂದ ಸುಂದರವಾದ ಕಣ್ಣುಗಳನ್ನು ಹೊಂದಿದ್ದಾರೆ. ನೀವೂ ಕೂಡ ಪ್ರತಿ ದಿನ ಮೀನು ತಿಂದರೆ ನಿಮ್ಮ ಕಣ್ಣುಗಳು ಕೂಡ ಸುಂದರವಾಗಿರುತ್ತದೆ. ಯಾರಿಗೆ ಬೇಕಾದರೂ ಇದನ್ನು ಮನವರಿಕೆ ಮಾಡಿಕೊಡುತ್ತೇವೆ’ ಎಂದು ವಿಜಯ್​ ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ. ಅವರು ಈ ಹೇಳಿಕೆಯಿಂದ ಅಲ್ಲಿದ್ದವರ ಹುಬ್ಬೇರಿಸಿತು.

ಇದನ್ನೂ ಓದಿ: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?

‘ನೀವು ಐಶ್ವರ್ಯಾ ರೈ ಅವರನ್ನು ನೋಡಿದ್ದೀರಾ? ಅವರು ಪ್ರತಿ ದಿನ ಮೀನು ತಿನ್ನುತ್ತಿದ್ದರು. ಅವರ ಕಣ್ಣುಗಳನ್ನು ನೋಡಿದ್ದೀರಾ? ಮೀನು ತಿನ್ನುವುದರಿಂದ ಎರಡು ಪ್ರಯೋಜನಗಳಿವೆ. ಮಹಿಳೆಯರು ಸ್ಲಿಮ್​ ಆಗುತ್ತಾರೆ ಮತ್ತು ಆಕರ್ಷಕವಾಗಿ ಕಾಣುತ್ತಾರೆ. ಮೀನಿನಲ್ಲಿ ಇರುವ ಒಂದು ತೈಲದಿಂದ ಇದು ಸಾಧ್ಯ. ನಿಮ್ಮ ಕಣ್ಣು ಮತ್ತು ತ್ವಚೆ ಕಾಂತಿಯುತವಾಗಿ ಕಾಣುತ್ತವೆ’ ಎಂದು ವಿಜಯ್​ ಕುಮಾರ್ ಗವಿತ್ ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನವರು ಒಳ್ಳೆಯ ಅವಕಾಶಗಳನ್ನು ನೀಡುತ್ತಿಲ್ಲ: ಐಶ್ವರ್ಯಾ ರೈ

ಈ ಮೊದಲು ವಿಜಯ್​ ಕುಮಾರ್​ ಗವಿತ್​ ಅವರು ಎನ್​ಸಿಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು. ಉದ್ಧವ್​ ಠಾಕ್ರೆ ಸರ್ಕಾರದಲ್ಲಿ ಅವರು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ನಂತರ ಅವರು ಬಿಜೆಪಿ ಸೇರಿಕೊಂಡರು. ಈಗ ಬುಡಕಟ್ಟು ಅಭಿವೃದ್ಧಿ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್