AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕೋಟಿ ಆಸೆಗೆ ನಟ ಸತೀಶ್ ಕೌಶಿಕ್ ಕೊಲೆ, ಉದ್ಯಮಿ ಪತ್ನಿ ಆರೋಪ, ದೆಹಲಿ ಪೊಲೀಸರಿಂದ ತನಿಖೆ

ಮೂರು ದಿನಗಳ ಹಿಂದೆ ನಿಧನ ಹೊಂದಿದ ಬಾಲಿವುಡ್ ಹಿರಿಯ ನಟ ಸತೀಶ್ ಕೌಶಿಕ್​ರ ನಿಧನದ ಬಗ್ಗೆ ಅನುಮಾನಗಳೆದ್ದಿದೆ. ದೆಹಲಿಯ ಉದ್ಯಮಿಯೊಬ್ಬರ ಪತ್ನಿ, ನನ್ನ ಪತಿಯೇ ಸತೀಶ್ ಕೌಶಿಕ್ ಅವರನ್ನು ಕೊಂದಿದ್ದಾರೆಂದು ದೂರು ನೀಡಿದ್ದಾರೆ.

15 ಕೋಟಿ ಆಸೆಗೆ ನಟ ಸತೀಶ್ ಕೌಶಿಕ್ ಕೊಲೆ, ಉದ್ಯಮಿ ಪತ್ನಿ ಆರೋಪ, ದೆಹಲಿ ಪೊಲೀಸರಿಂದ ತನಿಖೆ
ಸತೀಶ್ ಕೌಶಿಕ್-ಸಾನ್ವಿ ಮಾಲು-ವಿಕಾಸ್ ಮಾಲು
Follow us
ಮಂಜುನಾಥ ಸಿ.
|

Updated on: Mar 12, 2023 | 3:35 PM

ಮೂರು ದಿನಗಳ ಹಿಂದಷ್ಟೆ (ಮಾರ್ಚ್ 09) ಬಾಲಿವುಡ್​ನ (Bollywood) ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಸತೀಶ್ ಕೌಶಿಕ್ (Satish Kaushik) ನಿಧನ ಹೊಂದಿದ್ದರು. ಹೃದಯಾಘಾತ ಇವರ ನಿಧನಕ್ಕೆ ಕಾರಣ ಎನ್ನಲಾಗಿತ್ತು. ಆದರೆ ದೆಹಲಿಯ ಉದ್ಯಮಿಯೊಬ್ಬರ ಪತ್ನಿ ಇದೀಗ ಸತೀಶ್ ಕೌಶಿಕ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ನನ್ನ ಪತಿಯೇ ಸತೀಶ್​ಗೆ ವಿಷ ಉಣಿಸಿ ಕೊಂದಿದ್ದಾರೆ ಎಂದಿದ್ದಾರೆ.

ನಿಧನಕ್ಕೂ ಮುನ್ನ ಸತೀಶ್, ದೆಹಲಿಯ ಜನಪ್ರಿಯ ಉದ್ಯಮಿ ವಿಕಾಸ್ ಮಾಲು ಅವರ ಫಾರ್ಮ್ ಹೌಸ್​ನಲ್ಲಿ ನಡೆದ ಹೋಳಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಇದೀಗ ವಿಕಾಸ್ ಮಾಲು ಅವರ ಎರಡನೇ ಪತ್ನಿ ಸಾನ್ವಿ ಮಾಲು ಆರೋಪ ಮಾಡಿದ್ದು, ಹದಿನೈದು ಕೋಟಿ ಹಣದ ಆಸೆಗೆ ಸತೀಶ್ ಕೌಶಿಕ್​ಗೆ ವಿಕಾಸ್ ಮಾಲು ವಿಷ ಉಣಿಸಿದ್ದಾರೆ ಎಂದಿದ್ದಾರೆ. ಮಾತ್ರವಲ್ಲ ಈ ಕುರಿತು ದೆಹಲಿ ಪೊಲೀಸರಿಗೆ ಲಿಖಿತ ದೂರು ಸಹ ಸಲ್ಲಿಸಿದ್ದಾರೆ.

ದೂರಿನ ಬಗ್ಗೆ ಮಾಧ್ಯಮಗಳ ಬಳಿ ಮಾತನಾಡಿರುವ ವಿಕಾಸ್ ಮಾಲು ಪತ್ನಿ ಸಾನ್ವಿ, ”ಸತೀಶ್ ಕೌಶಿಕ್, ಫಾರ್ಮ್​ಹೌಸ್​ಗೆ ಬಂದ ಕೆಲ ಹೊತ್ತಿನಲ್ಲಿಯೇ ಅವರ ಆರೋಗ್ಯದಲ್ಲಿ ವ್ಯತ್ಯ ಕಂಡು ಬಂದಿತು. ಅಲ್ಲದೆ ಫಾರ್ಮ್ ಹೌಸ್​ನಲ್ಲಿ ಕೆಲವು ಔಷಧಿಗಳು ಸಹ ನನ್ನ ಕಣ್ಣಿಗೆ ಬಿದ್ದವು ಆಗಲೇ ನನಗೆ ಅನುಮಾನ ಬಂತು. ತಮ್ಮ ಪತಿ ವಿಕಾಸ್ ಹಾಗೂ ಸತೀಶ್ ಕೌಶಿಕ್​ ನಡುವೆ ಹಣದ ವ್ಯವಹಾರವಿತ್ತು ಇದೇ ಕಾರಣಕ್ಕೆ ನನ್ನ ಪತಿಯೇ ಸತೀಶ್ ಅವರನ್ನು ಕೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಉದ್ಯಮಿ ವಿಕಾಸ್ ಮಾಲು, ಸತೀಶ್ ಕೌಶಿಕ್ ಬಳಿ 15 ಕೋಟಿ ಸಾಲ ಪಡೆದುಕೊಂಡಿದ್ದರು. ಆದರೆ ಕೋವಿಡ್ ಸಮಯದಲ್ಲಾದ ನಷ್ಟದಿಂದಾಗಿ ಆ ಹಣ ಮುಳುಗಿ ಹೋಯಿತು. ಹಣ ಮರಳಿಸುವಂತೆ ನಾನೂ ಸಹ ವಿಕಾಸ್​ಗೆ ಪದೇ-ಪದೇ ಹೇಳುತ್ತಿದ್ದೆ ಈ ಬಗ್ಗೆ ಜಗಳ ಸಹ ಮಾಡಿದ್ದೆ ಆದರೆ ವಿಕಾಸ್ ಹಣ ಮರಳಿ ನೀಡಬೇಕಾಗುತ್ತದೆ ಎಂದು ಸತೀಶ್ ಕೌಶಿಕ್ ಅನ್ನು ಕೊಂದಿದ್ದಾರೆ ಎಂದಿದ್ದಾರೆ ಸಾನ್ವಿ ಮಾಲು.

ಎರಡನೇ ಪತ್ನಿ ಸಾನ್ವಿ ಹೇಳಿಕೆ ಹೊರ ಬೀಳುತ್ತಲೇ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಸಮೇತ ಪೋಸ್ಟ್ ಒಂದನ್ನು ಉದ್ಯಮಿ ವಿಕಾಸ್ ಹಂಚಿಕೊಂಡಿದ್ದು, ಸತೀಶ್ ಅವರು ಕಳೆದ 30 ವರ್ಷದಿಂದಲೂ ನಮ್ಮ ಕುಟುಂಬದ ಸದಸ್ಯರಾಗಿದ್ದಾರೆ. ಆದರೆ ಅವರು ಹೋದ ಕೆಲವೇ ಗಂಟೆಗಳಲ್ಲಿ ನನ್ನ ಹೆಸರನ್ನು ಕೆಟ್ಟ ರೀತಿಯಲ್ಲಿ ಕೆಲವರು ಬಳಸುತ್ತಿದ್ದಾರೆ ಎಂದಿದ್ದಾರೆ.

”ಘಟನೆ ಬಗ್ಗೆ ನಾನು ಮೌನ ಮುರಿಯಬೇಕಾಗಿದೆ. ಯಾವುದೇ ದುರಂತ ಅನಿರೀಕ್ಷಿತವಾಗಿ ಆಗುತ್ತದೆ ದುರಂತವನ್ನು ಯಾರು ನಿಯಂತ್ರಿಸಲು ಆಗುವುದಿಲ್ಲ. ಇಂಥಹಾ ಸಮಯದಲ್ಲಿ ಮಾಧ್ಯಮಗಳು ಎಲ್ಲರ ಭಾವನೆಗಳಿಗೂ ಗೌರವ ನೀಡುವ ಕಾರ್ಯ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ವಿಕಾಸ್ ಬರೆದುಕೊಂಡಿದ್ದಾರೆ. ವಿಕಾಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಸತೀಶ್ ಕೌಶಿಕ್ ಬಿಂದಾಸ್ ಆಗಿ ಡ್ಯಾನ್ಸ್ ಮಾಡುತ್ತಿದ್ದಾರೆ. ಅವರು ಸಾಯುವ ಕೆಲವೇ ಗಂಟೆಗಳ ಮುಂಚಿನ ವಿಡಿಯೋ ಇದಾಗಿತ್ತು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ