AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 Fail Movie: ಆಸ್ಕರ್​ ಪ್ರಶಸ್ತಿ ರೇಸ್​ನಲ್ಲಿ ‘12th ಫೇಲ್​’ ಸಿನಿಮಾ; ಕನ್ನಡದಲ್ಲೂ ಬಿಡುಗಡೆ ಆದ ಈ ಚಿತ್ರದ ವಿಶೇಷತೆ ಏನು?

Oscar Awards: ಆಸ್ಕರ್​ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ‘12th ಫೇಲ್​’ ಸಿನಿಮಾಗೆ ವಿಧು ವಿನೋದ್​ ಚೋಪ್ರಾ ಅವರು ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಕೂಡ ಅವರದ್ದೇ. ಅಕ್ಟೋಬರ್​ 27ರಂದು ಈ ಚಿತ್ರ ಬಿಡುಗಡೆ ಆಯಿತು. ಹಿಂದಿಯಲ್ಲಿ ನಿರ್ಮಾಣ ಆದ ಈ ಸಿನಿಮಾವನ್ನು ಕನ್ನಡಕ್ಕೂ ಡಬ್​ ಮಾಡಿ ಬಿಡುಗಡೆ ಮಾಡಲಾಗಿತ್ತು.

12 Fail Movie: ಆಸ್ಕರ್​ ಪ್ರಶಸ್ತಿ ರೇಸ್​ನಲ್ಲಿ ‘12th ಫೇಲ್​’ ಸಿನಿಮಾ; ಕನ್ನಡದಲ್ಲೂ ಬಿಡುಗಡೆ ಆದ ಈ ಚಿತ್ರದ ವಿಶೇಷತೆ ಏನು?
ವಿಕ್ರಾಂತ್​ ಮಾಸ್ಸಿ
ಮದನ್​ ಕುಮಾರ್​
|

Updated on: Nov 26, 2023 | 7:20 AM

Share

ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ (Oscar Awards) ಪಡೆಯಲು ಭಾರತದ ‘12th ಫೇಲ್​’ ಸಿನಿಮಾ ಪ್ರಯತ್ನಿಸುತ್ತಿದೆ. ಹಿಂದಿ, ಕನ್ನಡ ಮುಂತಾದ ಭಾಷೆಗಳಲ್ಲಿ ಇತ್ತೀಚೆಗೆ ಬಿಡುಗಡೆ ಆದ ಈ ಸಿನಿಮಾವನ್ನು ಆಸ್ಕರ್​ ಸ್ಪರ್ಧೆಗೆ ಕಳಿಸಲಾಗಿದೆ ಎಂದು ಚಿತ್ರದ ನಾಯಕ ನಟ ವಿಕ್ರಾಂತ್​ ಮಾಸ್ಸಿ (Vikrant Massey) ಹೇಳಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿ ಆಗಿದ್ದ ಅವರು ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಚಿತ್ರತಂಡವೇ ಸ್ವತಂತ್ರವಾಗಿ ನಾಮಿನೇಷನ್​ ಸಲ್ಲಿಸಿದೆ. 2024ರಲ್ಲಿ ‘12th ಫೇಲ್​’ (12 Fail) ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಸಿಗಲಿದೆಯೇ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ವಿಧು ವಿನೋದ್​ ಚೋಪ್ರಾ ಅವರು ನಿರ್ದೇಶನ ಮಾಡಿದ್ದಾರೆ.

‘ಸಾಹಿತ್ಯ ಆಜ್​ತಕ್​ 2023’ ಕಾರ್ಯಕ್ರಮದಲ್ಲಿ ವಿಕ್ರಾಂತ್​ ಮಾಸ್ಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಅವರು ಆಸ್ಕರ್​ ಪ್ರಶಸ್ತಿ ಬಗ್ಗೆ ಮಾಹಿತಿ ಹಂಚಿಕೊಂಡರು. ಭಾರತೀಯರು ಕೂಡ ಆಸ್ಕರ್​ ಪ್ರಶಸ್ತಿ ಗೆಲ್ಲಬಹುದು ಎಂಬುದಕ್ಕೆ ‘ಆರ್​ಆರ್​ಆರ್​’ ಸಿನಿಮಾವೇ ಸಾಕ್ಷಿ. 2023ರಲ್ಲಿ ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಅವಾರ್ಡ್​ ಪಡೆದುಕೊಂಡಿತು. ಆ ಚಿತ್ರ ಕೂಡ ಸ್ವತಂತ್ರವಾಗಿ ನಾಮಿನೇಟ್​ ಆಗಿತ್ತು. ಈಗ ಇದೇ ಪ್ರಯತ್ನದಲ್ಲಿ ‘12th ಫೇಲ್​’ ಸಿನಿಮಾ ಕೂಡ ಇದೆ. ಭಾರತದಿಂದ ಅಧಿಕೃತವಾಗಿ ಮಲಯಾಳಂನ ‘2018’ ಚಿತ್ರ ಆಸ್ಕರ್​ ಸ್ಪರ್ಧೆಗೆ ಈಗಾಗಲೇ ಆಯ್ಕೆ ಆಗಿದೆ.

ಇದನ್ನೂ ಓದಿ: ‘ಆಸ್ಕರ್​’ ಮೂಲಕ ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ವಿಶೇಷ ಗೌರವ; ವಿವೇಕ್​ ಅಗ್ನಿಹೋತ್ರಿ ಗುಡ್​ ನ್ಯೂಸ್​

ಅನುರಾಗ್‍ ಪಾಠಕ್‍ ಅವರು ಬರೆದ ಕಾದಂಬರಿಯನ್ನು ಆಧರಿಸಿ ‘12th ಫೇಲ್​’ ಸಿನಿಮಾ ತಯಾರಾಗಿದೆ. ಹಲವು ಅಡೆತಡೆಗಳನ್ನು ಮೀರಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಐಪಿಎಸ್ ಅ‍ಧಿಕಾರಿ ಮನೋಜ್‍ ಕುಮಾರ್ ಶರ್ಮಾ ಅವರ ಜೀವನವನ್ನು ಆಧರಿಸಿ ಈ ಚಿತ್ರ ಮೂಡಿಬಂದಿದೆ. ಮನೋಜ್‍ ಕುಮಾರ್ ಶರ್ಮಾ ಅವರ ಪಾತ್ರಕ್ಕೆ ವಿಕ್ರಾಂತ್​ ಮಾಸ್ಸಿ ಬಣ್ಣ ಹಚ್ಚಿದ್ದಾರೆ. ಮಾಡಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೇಧಾ ಶಂಕರ್ ಅವರು ‘12th ಫೇಲ್​’ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ‌.

ಇದನ್ನೂ ಓದಿ: ‘ಜವಾನ್​’ ಚಿತ್ರ ಆಸ್ಕರ್​ಗೆ ಹೋಗಬೇಕು ಎಂದ ನಿರ್ದೇಶಕ ಅಟ್ಲಿ; ಟ್ರೋಲ್​ ಮಾಡಿದ ನೆಟ್ಟಿಗರು

ಅಕ್ಟೋಬರ್​ 27ರಂದು ‘12th ಫೇಲ್​’ ಚಿತ್ರ ಬಿಡುಗಡೆ ಆಯಿತು. ಹಿಂದಿಯಲ್ಲಿ ನಿರ್ಮಾಣ ಆದ ಈ ಸಿನಿಮಾವನ್ನು ಕನ್ನಡಕ್ಕೂ ಡಬ್​ ಮಾಡಿ ಬಿಡುಗಡೆ ಮಾಡಲಾಯಿತು. ನಿರ್ದೇಶಕ ರೋಹಿತ್​ ಪದಕಿ ಅವರ ಸಾರಥ್ಯದಲ್ಲಿ ಕನ್ನಡದ ಡಬ್ಬಿಂಗ್ ಕೆಲಸ ನಡೆಯಿತು. ‘ಕೆಆರ್​ಜಿ ಸ್ಟುಡಿಯೋಸ್​’ ಮೂಲಕ ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್ ಆಯಿತು. ವಿಧು ವಿನೋದ್​ ಚೋಪ್ರಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ