AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಸಾಫಿರ್ ಕೆಫೆ’ ಮಾದರಿಯಲ್ಲಿ ಎರಡು ಕೆಫೆ ಓಪನ್ ಮಾಡಿದ ವಿಕ್ರಾಂತ್ ಮಾಸ್ಸಿ

ಬಾಲಿವುಡ್ ನಟ ವಿಕ್ರಾಂತ್ ಮಾಸ್ಸಿ ತಮ್ಮ ಜನಪ್ರಿಯ ಸರಣಿ 'ಮುಸಾಫಿರ್ ಕೆಫೆ' ಮಾದರಿಯ ರಿಯಲ್ ಕೆಫೆಗಳನ್ನು ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಆರಂಭಿಸುತ್ತಿದ್ದಾರೆ. ಕಲಾವಿದರು ತಂಗಲು ಕೊಠಡಿಗಳ ಸೌಲಭ್ಯ ಹೊಂದಿರುವ ಈ ವಿಶೇಷ ಯೋಜನೆ ಪ್ರವಾಸಿಗರು ಮತ್ತು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

‘ಮುಸಾಫಿರ್ ಕೆಫೆ’ ಮಾದರಿಯಲ್ಲಿ ಎರಡು ಕೆಫೆ ಓಪನ್ ಮಾಡಿದ ವಿಕ್ರಾಂತ್ ಮಾಸ್ಸಿ
ಮುಸಾಫಿರ್ ಕೆಫೆ
ರಾಜೇಶ್ ದುಗ್ಗುಮನೆ
|

Updated on: Sep 18, 2026 | 2:51 PM

Share

ಮುಖ್ಯಾಂಶಗಳು

  • ರಿಯಲ್ ಲೈಫ್‌ನಲ್ಲಿ ಶುರುವಾಗಲಿದೆ 'ಮುಸಾಫಿರ್ ಕೆಫೆ'
  • ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ವಿಕ್ರಾಂತ್ ಮಾಸ್ಸಿ ಹೊಸ ಸಾಹಸ
  • ಕೆಫೆ ಜೊತೆಗೆ ನಿರ್ಮಾಣವಾಗಲಿವೆ 20 ವಿಶೇಷ ರೂಮ್‌ಗಳು  

ಬಾಲಿವುಡ್‌ನ ಪ್ರಸಿದ್ಧ ನಟ ವಿಕ್ರಾಂತ್ ಮಾಸ್ಸಿ ತಮ್ಮ ‘ಮುಸಾಫಿರ್ ಕೆಫೆ’ ಯಶಸ್ಸಿನ ನಂತರ ಉದ್ಯಮ ರಂಗಕ್ಕೆ ಕಾಲಿಡುತ್ತಿದ್ದಾರೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಸುಂದರ ಮಡಿಲಲ್ಲಿ ‘ಮುಸಾಫಿರ್ ಕೆಫೆ’ ಮಾದರಿಯ ಎರಡು ಕೆಫೆಗಳನ್ನು ತೆರೆಯಲು ಅವರು ಸಜ್ಜಾಗಿದ್ದಾರೆ. ಈ ಕೆಫೆಗಳ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದ್ದು ಪ್ರೇಕ್ಷಕರಲ್ಲಿ ಮತ್ತು ಪ್ರವಾಸಿಗರಲ್ಲಿ ದೊಡ್ಡ ಮಟ್ಟದ ಕುತೂಹಲ ಮೂಡಿಸಿದೆ.

ವಿಕ್ರಾಂತ್ ಮಾಸ್ಸಿ ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯಾದ ‘ಹೋಮ್ ಮೇಡ್ ಸ್ಟೋರೀಸ್’ ಮೂಲಕ ಈ ಯೋಜನೆ ಜಾರಿಗೆ ತರುತ್ತಿದ್ದಾರೆ. ಸರಣಿಯಲ್ಲಿ ಕಾಣಿಸಿಕೊಂಡಿದ್ದ ಕೆಫೆಯನ್ನೇ ಹೋಲುವಂತೆ ಈ ನೈಜ ಕೆಫೆಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ. ತೆರೆಯ ಮೇಲೆ ಕಂಡ ರಮಣೀಯ ವಾತಾವರಣವನ್ನು ಪ್ರವಾಸಿಗರು ನೇರವಾಗಿ ಅನುಭವಿಸಲು ಈ ಕೆಫೆಗಳು ಸಾಕ್ಷಿಯಾಗಲಿವೆ.

ಈ ವಿಶೇಷ ಕೆಫೆಗಳ ಜೊತೆಗೆ ಸುಮಾರು 20 ಕೊಠಡಿಗಳನ್ನು ಸಹ ನಿರ್ಮಿಸಲಾಗುತ್ತಿದೆ. ದೇಶದ ನಾನಾ ಭಾಗಗಳಿಂದ ಬರುವ ಕಲಾವಿದರು ಇಲ್ಲಿ ತಂಗಲು ವ್ಯವಸ್ಥೆ ಮಾಡಲಾಗುತ್ತದೆ. ಕಲಾವಿದರು ತಮ್ಮ ಹೊಸ ಯೋಜನೆಗಳ ಮೇಲೆ ಕೆಲಸ ಮಾಡಲು ಈ ಸ್ಥಳ ಅತ್ಯಂತ ಸೂಕ್ತ ವಾತಾವರಣ ಒದಗಿಸಲಿದೆ.

ಆರಂಭದಿಂದಲೂ ಹಿಮಾಚಲ ಪ್ರದೇಶದಲ್ಲಿ ಕೆಫೆ ತೆರೆಯುವುದು ವಿಕ್ರಾಂತ್ ಅವರ ಕನಸಾಗಿತ್ತು. ಅವರ ಪತ್ನಿ ಶೀತಲ್ ಠಾಕೂರ್ ಹಿಮಾಚಲ ಪ್ರದೇಶದ ಮೂಲದವರಾಗಿದ್ದಾರೆ. ಧರ್ಮಕೋಟ್ ಅಥವಾ ಧರ್ಮಶಾಲಾ ಸುತ್ತಮುತ್ತ ಕೆಫೆ ಆರಂಭಿಸುವ ಇಚ್ಛೆಯನ್ನು ಅವರು ಈ ಹಿಂದೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ‘ನೆನಪಿಟ್ಟುಕೊಳ್ಳಿ, ಹಣ ಇದ್ರೆ ಮಾತ್ರ ನಿಮಗೆ ಗೌರವ’; ಯುವ ಜನತೆ ಎಚ್ಚರಿಸಿದ ವಿಕ್ರಾಂತ್ ಮಾಸ್ಸಿ

ನೆಟ್‌ಫ್ಲಿಕ್ಸ್‌ನಲ್ಲಿ ಬಂದ ‘ಮುಸಾಫಿರ್ ಕೆಫೆ’ ಸರಣಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅದೇ ಶೈಲಿಯ ಕೆಫೆಗಳು ಇದೀಗ ನೈಜ ರೂಪ ಪಡೆಯುತ್ತಿರುವುದು ಅಭಿಮಾನಿಗಳಿಗೆ ತೀವ್ರ ಸಂತಸ ತಂದಿದೆ. ಬಣ್ಣದ ಲೋಕದ ಜೊತೆಗೆ ನಟ ವಿಕ್ರಾಂತ್ ಮಾಸ್ಸಿ ಉದ್ಯಮದಲ್ಲೂ ಹೊಸ ಹೆಜ್ಜೆ ಇಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ