AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧ್ರಾ ಹತ್ಯಾಕಾಂಡ ಕುರಿತ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಆ.2ಕ್ಕೆ ಬಿಡುಗಡೆ

2002ರ ಫೆ.27ರಂದು ಗೋಧ್ರಾ ರೇಲ್ವೆ ನಿಲ್ದಾಣದ ಸಮೀಪ ಭಾರಿ ದುರಂತ ನಡೆದಿತ್ತು. ಆ ಕಹಿ ಘಟನೆಯ ಸುತ್ತ ಅನೇಕ ವಿವಾದಗಳು ಸುತ್ತಿಕೊಂಡಿವೆ. ಆ ಘಟನೆಯನ್ನು ಕೇಂದ್ರವಾಗಿ ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಸಿದ್ಧವಾಗಿದೆ. ಆದ್ದರಿಂದ ಪ್ರೇಕ್ಷಕರಿಗೆ ಈ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇದೆ. ಆಗಸ್ಟ್​ 2ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಗೋಧ್ರಾ ಹತ್ಯಾಕಾಂಡ ಕುರಿತ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಆ.2ಕ್ಕೆ ಬಿಡುಗಡೆ
ವಿಕ್ರಾಂತ್​ ಮಾಸ್ಸಿ
ಮದನ್​ ಕುಮಾರ್​
|

Updated on: Apr 22, 2024 | 10:54 PM

Share

ಹಲವು ವರ್ಷಗಳ ಹಿಂದೆ ನಡೆದ ಕಹಿ ಘಟನೆಗಳನ್ನು ಆಧರಿಸಿ ಸಿದ್ಧವಾದ ಕೆಲವು ಸಿನಿಮಾಗಳು ಭಾರಿ ಯಶಸ್ಸು ಕಂಡಿವೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ದಿ ಕೇರಳ ಸ್ಟೋರಿ’ ಸಿನಿಮಾಗಳೇ ಅದಕ್ಕೆ ಸಾಕ್ಷಿ. ಅದೇ ರೀತಿ ಗೋಧ್ರಾ (Godhra) ಹತ್ಯಾಕಾಂಡದ ಕುರಿತು ಈಗ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾಗೆ ‘ದಿ ಸಾಬರಮತಿ ರಿಪೋರ್ಟ್​’ (The Sabarmati Report) ಎಂದು ಶೀರ್ಷಿಕೆ ಇಡಲಾಗಿದೆ. ಕೆಲವೇ ತಿಂಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಆಗಿ ಗಮನ ಸೆಳೆದಿತ್ತು. ಈಗ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಆಗಸ್ಟ್​ 2ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ನಟ ವಿಕ್ರಾಂತ್​ ಮಾಸ್ಸಿ (Vikrant Massey) ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

2002ರ ಫೆಬ್ರವರಿ 27ರಂದು ಗುಜರಾತ್​ನ ಗೋಧ್ರಾ ರೇಲ್ವೆ ನಿಲ್ದಾಣದ ಬಳಿ ದೊಡ್ಡ ದುರಂತ ಸಂಭವಿಸಿತ್ತು. ಆ ಘಟನೆಯ ಸುತ್ತ ಹಲವಾರು ವಿವಾದಗಳು ಸುತ್ತಿಕೊಂಡಿವೆ. ಅದೇ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ನಿರ್ಮಾಣ ಆಗಿರುವುದರಿಂದ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. 22 ವರ್ಷಗಳ ಹಿಂದೆ ನಡೆದ ಘಟನೆಯ ಚಿತ್ರಣ ಈಗ ದೊಡ್ಡ ಪರದೆಯಲ್ಲಿ ಜನರ ಎದುರು ಬರಲಿದೆ.

ಬಾಲಾಜಿ ಮೋಷನ್​ ಪಿಕ್ಚರ್ಸ್​ನ ‘ಬಾಲಾಜಿ ಟಿಲಿಫಿಲ್ಮ್ಸ್​​’ ಮೂಲಕ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ನಿರ್ಮಾಣ ಆಗಿದೆ. ರಂಜನ್​ ಚಂಡೇಲ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ವಿಕ್ರಾಂತ್​ ಮಾಸ್ಸಿ ಜೊತೆಗೆ ರಾಶಿ ಖನ್ನಾ, ರಿಧಿ ಡೋಗ್ರಾ ಕೂಡ ನಟಿಸಿದ್ದಾರೆ. ವಿವಾದಾತ್ಮಕ ವಸ್ತುವಿಷಯ ಇರುವುದರಿಂದ ಈ ಸಿನಿಮಾಗೆ ಜನರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

ಈ ಮೊದಲು ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾವನ್ನು ಮೇ 3ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ದೇಶಾದ್ಯಂತ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹಲವು ಹಂತಗಳಲ್ಲಿ ಮತದಾನಕ್ಕೆ ದಿನಾಂಕಗಳು ನಿಗದಿ ಆಗಿವೆ. ಇಂಥ ಸಂದರ್ಭದಲ್ಲಿ ಈ ಚಿತ್ರವನ್ನು ರಿಲೀಸ್​ ಮಾಡಿದರೆ ನೀತಿ ಸಂಹಿತೆಯ ಉಲ್ಲಂಘನೆ ಆಗಲಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಮೇ 3ರ ಬದಲಿಗೆ ಆಗಸ್ಟ್​ 2ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!