AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ
TV9 Web
| Edited By: |

Updated on:Aug 30, 2021 | 6:15 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಮತ್ತಷ್ಟು ಮಾಹಿತಿಗೆ ನಿರೀಕ್ಷಿಸಿ.. 

Published On - 5:53 pm, Mon, 30 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?