AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ
TV9 Web
| Edited By: |

Updated on:Aug 30, 2021 | 6:15 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಮತ್ತಷ್ಟು ಮಾಹಿತಿಗೆ ನಿರೀಕ್ಷಿಸಿ.. 

Published On - 5:53 pm, Mon, 30 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ