Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮವಿತ್ತ ಅನುಷ್ಕಾ, ಖುಷಿ ಹಂಚಿಕೊಂಡ ವಿರಾಟ್: ಮಗುವಿನ ಹೆಸರೇನು?

Virat-Anushka: ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಮಗುವಿಗೆ ಭಿನ್ನ ಹೆಸರನ್ನು ವಿರಾಟ್ ಹಾಗೂ ಅನುಷ್ಕಾ ಇಟ್ಟಿದ್ದಾರೆ.

ಗಂಡು ಮಗುವಿಗೆ ಜನ್ಮವಿತ್ತ ಅನುಷ್ಕಾ, ಖುಷಿ ಹಂಚಿಕೊಂಡ ವಿರಾಟ್: ಮಗುವಿನ ಹೆಸರೇನು?
Follow us
ಮಂಜುನಾಥ ಸಿ.
|

Updated on:Feb 20, 2024 | 9:44 PM

ಭಾರತದ ಟಾಪ್ ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ (Virat Kohli) ಮತ್ತು ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿನ ಪೋಷಕರಾಗಿದ್ದಾರೆ. ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಖುಷಿಯ ಸುದ್ದಿಯನ್ನು ಇನ್​ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ. ಇದೀಗ ಗಂಡು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಫೆಬ್ರವರಿ 15ರಂದೇ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಸುದ್ದಿಯನ್ನು ತಡವಾಗಿ ಹಂಚಿಕೊಳ್ಳಲಾಗಿದೆ.

ಗಂಡು ಮಗುವಿಗೆ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ ವಿರಾಟ್ ಹಾಗೂ ಅನುಷ್ಕಾ ಶರ್ಮಾ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, ‘ಅತ್ಯಂತ ಸಂತೋಷ ಮತ್ತು ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ. ಫೆಬ್ರವರಿ 15 ರಂದು, ನಾವು ನಮ್ಮ ಗಂಡು ಮಗು ಅಕಾಯ್ ಅನ್ನು ನಮ್ಮ ಜೀವನಕ್ಕೆ ಸ್ವಾಗತಿಸಿದ್ದೇವೆ. ಅಕಾಯ್, ವಮಿಕಾಳ ಪುಟ್ಟ ಸಹೋದರ. ನಾವು ‘ಅಕಾಯ್’ ಅನ್ನು ಸ್ವಾಗತಿಸಿದ ಸುದ್ದಿ ತಿಳಿಸಲು ಬಹಳ ಖುಷಿ ಪಡುತ್ತಿದ್ದೇವೆ. ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಲು ವಿನಂತಿಸುತ್ತೇವೆ’ ಎಂದು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ:2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರಲ್ಲಿ ವಿವಾಹವಾದರು. 2021ರಲ್ಲಿ ಮೊದಲ ಮಗು ವಮಿಕಾಗೆ ಅನುಷ್ಕಾ ಶರ್ಮಾ ಜನ್ಮ ನೀಡಿದರು. ಈಗ 2024ರ ಫೆಬ್ರವರಿ 15ರಂದು ಅಕಾಯ್​ಗೆ ಜನ್ಮ ನೀಡಿದ್ದಾರೆ. ಅಕಾಯ್ ಎಂದರೆ ಟರ್ಕಿಶ್​ನಲ್ಲಿ ಹೊಳೆಯುವ ಚಂದ್ರ ಎಂಬ ಅರ್ಥವಿದೆ. ಹಿಂದಿಯಲ್ಲಿ ಕಾಯ ಇಲ್ಲದವ ಅಥವಾ ಶಿವ ಎಂಬ ಅರ್ಥವೂ ಇದೆ ಎನ್ನಲಾಗುತ್ತದೆ. ಮಗಳಿಗೆ ‘ವಮಿಕಾ’ ಎಂದು ಹೆಸರು ಇಟ್ಟಿದ್ದಾರೆ ವಿರಾಟ್ ಹಾಗೂ ಅನುಷ್ಕಾ. ವಮಿಕಾ ಎಂದರೆ ಸಂಸ್ಕೃತದಲ್ಲಿ ದೇವಿ ದುರ್ಗಾ ಎಂದರ್ಥ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Tue, 20 February 24

ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್