AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಕೊಹ್ಲಿಗಾಗಿ ದೊಡ್ಡ ತ್ಯಾಗ ಮಾಡಿದ ಅನುಷ್ಕಾ ಶರ್ಮಾ; ಸಂದರ್ಶನದಲ್ಲಿ ಹೇಳಿಕೊಂಡ ಕ್ರಿಕೆಟರ್

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2017ರಲ್ಲಿ ಮದುವೆ ಆದರು. 2021ರ ಜನವರಿಯಲ್ಲಿ ಅನುಷ್ಕಾ ಹಾಗೂ ವಿರಾಟ್ ದಂಪತಿಗೆ ಮಗಳು ಜನಿಸಿದಳು. ಅವಳಿಗೆ ವಮಿಕಾ ಎಂದು ನಾಮಕರಣ ಮಾಡಲಾಗಿದೆ.

ವಿರಾಟ್​ ಕೊಹ್ಲಿಗಾಗಿ ದೊಡ್ಡ ತ್ಯಾಗ ಮಾಡಿದ ಅನುಷ್ಕಾ ಶರ್ಮಾ; ಸಂದರ್ಶನದಲ್ಲಿ ಹೇಳಿಕೊಂಡ ಕ್ರಿಕೆಟರ್
ವಿರಾಟ್-ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Mar 01, 2023 | 12:38 PM

Share

ಕ್ರಿಕೆಟರ್ ವಿರಾಟ್ ಕೊಹ್ಲಿ (Virat Kohli) ಅವರು ಮತ್ತೆ ಲಯ ಕಂಡುಕೊಂಡಿದ್ದಾರೆ. ಫಾರ್ಮ್​​ಗೆ ಮರಳುವ ಮೂಲಕ ಕ್ರಿಕೆಟ್​ ಪ್ರಿಯರನ್ನು ಅವರು ರಂಜಿಸುತ್ತಿದ್ದಾರೆ. ಅವರು ಯಶಸ್ಸು ಕಂಡಾಗ, ಸೋತಾಗ ಅನುಷ್ಕಾ ಶರ್ಮಾ ಅವರು ವಿರಾಟ್ ಜೊತೆಗಿದ್ದರು. ಈ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ. ಅನುಷ್ಕಾ ಶರ್ಮಾ (Anushka Sharma) ಅವರ ತ್ಯಾಗವನ್ನು ಅವರು ನೆನಪಿಸಿಕೊಂಡಿದ್ದಾರೆ. ಪತ್ನಿಯನ್ನು ಮನಸ್ಫೂರ್ತಿಯಾಗಿ ಹೊಗಳಿದ್ದಾರೆ ವಿರಾಟ್. ಅವರು ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2017ರಲ್ಲಿ ಮದುವೆ ಆದರು. 2021ರ ಜನವರಿಯಲ್ಲಿ ಅನುಷ್ಕಾ ಹಾಗೂ ವಿರಾಟ್ ದಂಪತಿಗೆ ಮಗಳು ಜನಿಸಿದಳು. ಅವಳಿಗೆ ವಮಿಕಾ ಎಂದು ನಾಮಕರಣ ಮಾಡಲಾಗಿದೆ. ಮಗಳು ಜನಿಸಿದ ನಂತರದಲ್ಲಿ ವಿರಾಟ್ ಕೊಹ್ಲಿ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅನುಷ್ಕಾ ಅವರು ಮಗಳ ಆರೈಕೆ ಮಾಡುತ್ತಾರೆ. ಇದರಿಂದ ವಿರಾಟ್​​ಗೆ ಕ್ರಿಕೆಟ್​ ಮೇಲೆ ಗಮನಹರಿಸೋಕೆ ಸಾಧ್ಯವಾಗುತ್ತಿದೆ.

‘ಕಳೆದ ಎರಡು ವರ್ಷಗಳಲ್ಲಿ ಹಲವು ಘಟನೆಗಳು ನಡೆದೆವು. ನಾವು ಮಗುವನ್ನು ಪಡೆದೆವು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗ ದೊಡ್ಡದು. ಅನುಷ್ಕಾ ನೋಡಿದಾಗ ನನ್ನಲ್ಲಿರುವ ಸಮಸ್ಯೆಗಳು ಏನೂ ಅಲ್ಲ ಎಂದೆನಿಸುತ್ತದೆ. ನೀವು ಹೇಗಿದ್ದೀರೋ ಹಾಗೆ ನಿಮ್ಮ ಕುಟುಂಬ ಒಪ್ಪಿಕೊಳ್ಳುತ್ತದೆ ಎಂದಾದರೆ ಅವರಿಂದ ಅದಕ್ಕಿಂತ ಹೆಚ್ಚಿನದ್ದನ್ನು ನೀವು ನಿರೀಕ್ಷಿಸಬಾರದು’ ಎಂದು ವಿರಾಟ್​ ಕೊಹ್ಲಿ ಅವರು ಆರ್​ಸಿಬಿ ಪಾಡ್​ಕಾಸ್ಟ್​​ನಲ್ಲಿ ಹೇಳಿದ್ದಾರೆ.

‘ಸ್ಫೂರ್ತಿ ಬೇಕು ಎಂದಾಗ ನೀವು ಮೊದಲು ನೋಡೋದು ಮನೆಯ ಸದಸ್ಯರನ್ನು. ಅನುಷ್ಕಾ ನನಗೆ ದೊಡ್ಡ ಸ್ಫೂರ್ತಿ. ನನ್ನ ಜೀವನದಲ್ಲಿ ನಾನು ಬೇರೆಯದೇ ದೃಷ್ಟಿಕೋನ ಹೊಂದಿದ್ದೆ. ಆದರೆ, ಒಬ್ಬರನ್ನು ಪ್ರೀತಿಸಲು ಪ್ರಾರಂಭಿಸಿದರೆ ನಿಮ್ಮೊಳಗೆ ಆ ಬದಲಾವಣೆ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಜೀವನದ ಬಗ್ಗೆ ಅನುಷ್ಕಾ ದೃಷ್ಟಿಕೋನ ಭಿನ್ನವಾಗಿದೆ. ವಿಷಯಗಳನ್ನು ಒಪ್ಪಿಕೊಳ್ಳಲು ನಾನು ಅವರಿಂದ ಕಲಿತೆ’ ಎಂದಿದ್ದಾರೆ ವಿರಾಟ್.

ಅನುಷ್ಕಾ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮದುವೆ ಬಳಿಕ ಅವರು ಕುಟುಂಬದಲ್ಲಿ ಬ್ಯುಸಿ ಆದರು. ಹೀಗಾಗಿ, ಅವರು ಸಿನಿಮಾ ಮಾಡೋದು ಕಡಿಮೆ ಆಯಿತು. ಕುಟುಂಬಕ್ಕಾಗಿ ಅವರು ತಮ್ಮ ವೃತ್ತಿ ಜೀವನವನ್ನು ತ್ಯಾಗ ಮಾಡಿದ್ದಾರೆ ಎನ್ನುವ ಮಾತನ್ನು ಅನೇಕರು ಒಪ್ಪುತ್ತಾರೆ. ಅವರು ಸಂಪೂರ್ಣವಾಗಿ ಚಿತ್ರರಂಗದಲ್ಲಿ ತೊಡಗಿಕೊಳ್ಳಲಿ ಅನ್ನೋದು ಅನೇಕರ ಕೋರಿಕೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಮಗಳ ಆರೈಕೆಯಲ್ಲಿ ಅನುಷ್ಕಾ ಬ್ಯುಸಿ ಇರುವುದರಿಂದ ಇದು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ