AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vamika: ಕ್ರಿಕೆಟರ್ ಆಗ್ತಾಳಾ ವಮಿಕಾ? ಬಿಗ್ ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ಆರ್​ಸಿಬಿ ಕ್ಯಾಪ್ಟನ್ ಆಗಿ ಮಿಂಚಿದರು. ಈಗ ಅವರು ಕ್ಯಾಪ್ಟನ್ಸಿಯಿಂದ ಕೆಳಕ್ಕೆ ಇಳಿದಿದ್ದಾರೆ. ತಂಡದಲ್ಲಿ ಒಬ್ಬರಾಗಿ ಪಂದ್ಯಗಳನ್ನು ಆಡುತ್ತಿದ್ದಾರೆ. ಈಗ ಅವರು ನಟ ಹಾಗೂ ಆರ್​​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಟ್ ಜೊತೆ ಮಾತನಾಡಿದ್ದಾರೆ.

Vamika: ಕ್ರಿಕೆಟರ್ ಆಗ್ತಾಳಾ ವಮಿಕಾ? ಬಿಗ್ ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ
ವಿರಾಟ್
ರಾಜೇಶ್ ದುಗ್ಗುಮನೆ
|

Updated on: May 17, 2024 | 11:41 AM

Share

ಸ್ಟಾರ್ ಹೀರೋ/ಹೀರೋಯಿನ್​ಗಳ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲೇ ಮುಂದುವರಿಯೋಕೆ ಇಷ್ಟಪಡುತ್ತಾರೆ. ಕ್ರಿಕೆಟರ್​ಗಳ ಮಕ್ಕಳು ಕೂಡ ಬ್ಯಾಟ್​ ಅಥವಾ ಬಾಲ್ ಹಿಡಿದು ಮೈದಾನಕ್ಕೆ ಇಳಿಯೋಕೆ ಇಷ್ಟಪಡುತ್ತಾರೆ. ಕ್ರಿಕೆಟರ್ ವಿರಾಟ್​ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ಮಗಳು ವಮಿಕಾ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈ ಬಗ್ಗೆ ವಿರಾಟ್ ಕೊಹ್ಲಿ ಅವರು ದೊಡ್ಡ ಸೂಚನೆ ಕೊಟ್ಟಿದ್ದಾರೆ. ಜೊತೆಗೆ ಅಂತಿಮ ಆಯ್ಕೆ ಕೂಡ ಅವರದ್ದೇ ಎಂದಿದ್ದಾರೆ.

ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ಆರ್​ಸಿಬಿ ಕ್ಯಾಪ್ಟನ್ ಆಗಿ ಮಿಂಚಿದರು. ಈಗ ಅವರು ಕ್ಯಾಪ್ಟನ್ಸಿಯಿಂದ ಕೆಳಕ್ಕೆ ಇಳಿದಿದ್ದಾರೆ. ತಂಡದಲ್ಲಿ ಒಬ್ಬರಾಗಿ ಪಂದ್ಯಗಳನ್ನು ಆಡುತ್ತಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಅವರು ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್​ನ ಉಳಿಸಿಕೊಂಡಿದ್ದಾರೆ. ಈಗ ಅವರು ನಟ ಹಾಗೂ ಆರ್​​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಟ್ ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ದೊಡ್ಡ ಸೂಚನೆ ಒಂದನ್ನು ಕೊಟ್ಟಿದ್ದಾರೆ. ಇದನ್ನೂ ಓದಿ:  ಗನ್ ಸೆಲೆಬ್ರೇಷನ್ ಮಾಡಿದ ಪಂಜಾಬ್ ಬ್ಯಾಟರ್​ನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ವಿಡಿಯೋ

‘ಮಗ ಹೇಗಿದ್ದಾನೆ’ ಎಂದು ದ್ಯಾನಿಶ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿರಾಟ್, ‘ಮಗ ಆರೋಗ್ಯವಾಗಿದ್ದಾನೆ’ ಎಂದಿದ್ದಾರೆ. ಆ ಬಳಿಕ ಮಗಳ ಬಗ್ಗೆ ಅವರು ಹೇಳಿದ್ದಾರೆ. ‘ಮಗಳು ಬ್ಯಾಟ್ ತೆಗೆದುಕೊಂಡು ಸ್ವಿಂಗ್ ಮಾಡುತ್ತಾಳೆ. ಅವಳಿಗೆ ಅದು ಇಷ್ಟ. ಅಂತಿಮವಾಗಿ ಅವಳ ಆಯ್ಕೆ’ ಎಂದಿದ್ದಾರೆ  ವಿರಾಟ್ ಕೊಹ್ಲಿ.

ವಿರಾಟ್ ಕೊಹ್ಲಿ ನೀಡಿರೋ ಈ ಹೇಳಿಕೆ ವೈರಲ್ ಆಗುತ್ತಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ. ವಿರಾಟ್ ಕೊಹ್ಲಿ ಅವರ ಮಗಳನ್ನು ಸಿನಿಮಾ ರಂಗಕ್ಕೆ ಪರಿಚಯಿಸುತ್ತಾರೋ ಅಥವಾ ಕ್ರಿಕೆಟ್ ಲೋಕಕ್ಕೆ ಪರಿಚಯಿಸುತ್ತಾರೋ ಎನ್ನುವ ಕುತೂಹಲ ಮೂಡಿದೆ. ಅನುಷ್ಕಾ ಶರ್ಮಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ