AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vamika: ಕ್ರಿಕೆಟರ್ ಆಗ್ತಾಳಾ ವಮಿಕಾ? ಬಿಗ್ ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ಆರ್​ಸಿಬಿ ಕ್ಯಾಪ್ಟನ್ ಆಗಿ ಮಿಂಚಿದರು. ಈಗ ಅವರು ಕ್ಯಾಪ್ಟನ್ಸಿಯಿಂದ ಕೆಳಕ್ಕೆ ಇಳಿದಿದ್ದಾರೆ. ತಂಡದಲ್ಲಿ ಒಬ್ಬರಾಗಿ ಪಂದ್ಯಗಳನ್ನು ಆಡುತ್ತಿದ್ದಾರೆ. ಈಗ ಅವರು ನಟ ಹಾಗೂ ಆರ್​​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಟ್ ಜೊತೆ ಮಾತನಾಡಿದ್ದಾರೆ.

Vamika: ಕ್ರಿಕೆಟರ್ ಆಗ್ತಾಳಾ ವಮಿಕಾ? ಬಿಗ್ ಹಿಂಟ್ ಕೊಟ್ಟ ವಿರಾಟ್ ಕೊಹ್ಲಿ
ವಿರಾಟ್
ರಾಜೇಶ್ ದುಗ್ಗುಮನೆ
|

Updated on: May 17, 2024 | 11:41 AM

Share

ಸ್ಟಾರ್ ಹೀರೋ/ಹೀರೋಯಿನ್​ಗಳ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲೇ ಮುಂದುವರಿಯೋಕೆ ಇಷ್ಟಪಡುತ್ತಾರೆ. ಕ್ರಿಕೆಟರ್​ಗಳ ಮಕ್ಕಳು ಕೂಡ ಬ್ಯಾಟ್​ ಅಥವಾ ಬಾಲ್ ಹಿಡಿದು ಮೈದಾನಕ್ಕೆ ಇಳಿಯೋಕೆ ಇಷ್ಟಪಡುತ್ತಾರೆ. ಕ್ರಿಕೆಟರ್ ವಿರಾಟ್​ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ಮಗಳು ವಮಿಕಾ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈ ಬಗ್ಗೆ ವಿರಾಟ್ ಕೊಹ್ಲಿ ಅವರು ದೊಡ್ಡ ಸೂಚನೆ ಕೊಟ್ಟಿದ್ದಾರೆ. ಜೊತೆಗೆ ಅಂತಿಮ ಆಯ್ಕೆ ಕೂಡ ಅವರದ್ದೇ ಎಂದಿದ್ದಾರೆ.

ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ಆರ್​ಸಿಬಿ ಕ್ಯಾಪ್ಟನ್ ಆಗಿ ಮಿಂಚಿದರು. ಈಗ ಅವರು ಕ್ಯಾಪ್ಟನ್ಸಿಯಿಂದ ಕೆಳಕ್ಕೆ ಇಳಿದಿದ್ದಾರೆ. ತಂಡದಲ್ಲಿ ಒಬ್ಬರಾಗಿ ಪಂದ್ಯಗಳನ್ನು ಆಡುತ್ತಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಅವರು ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್​ನ ಉಳಿಸಿಕೊಂಡಿದ್ದಾರೆ. ಈಗ ಅವರು ನಟ ಹಾಗೂ ಆರ್​​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಟ್ ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ದೊಡ್ಡ ಸೂಚನೆ ಒಂದನ್ನು ಕೊಟ್ಟಿದ್ದಾರೆ. ಇದನ್ನೂ ಓದಿ:  ಗನ್ ಸೆಲೆಬ್ರೇಷನ್ ಮಾಡಿದ ಪಂಜಾಬ್ ಬ್ಯಾಟರ್​ನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ವಿಡಿಯೋ

‘ಮಗ ಹೇಗಿದ್ದಾನೆ’ ಎಂದು ದ್ಯಾನಿಶ್ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವಿರಾಟ್, ‘ಮಗ ಆರೋಗ್ಯವಾಗಿದ್ದಾನೆ’ ಎಂದಿದ್ದಾರೆ. ಆ ಬಳಿಕ ಮಗಳ ಬಗ್ಗೆ ಅವರು ಹೇಳಿದ್ದಾರೆ. ‘ಮಗಳು ಬ್ಯಾಟ್ ತೆಗೆದುಕೊಂಡು ಸ್ವಿಂಗ್ ಮಾಡುತ್ತಾಳೆ. ಅವಳಿಗೆ ಅದು ಇಷ್ಟ. ಅಂತಿಮವಾಗಿ ಅವಳ ಆಯ್ಕೆ’ ಎಂದಿದ್ದಾರೆ  ವಿರಾಟ್ ಕೊಹ್ಲಿ.

ವಿರಾಟ್ ಕೊಹ್ಲಿ ನೀಡಿರೋ ಈ ಹೇಳಿಕೆ ವೈರಲ್ ಆಗುತ್ತಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ. ವಿರಾಟ್ ಕೊಹ್ಲಿ ಅವರ ಮಗಳನ್ನು ಸಿನಿಮಾ ರಂಗಕ್ಕೆ ಪರಿಚಯಿಸುತ್ತಾರೋ ಅಥವಾ ಕ್ರಿಕೆಟ್ ಲೋಕಕ್ಕೆ ಪರಿಚಯಿಸುತ್ತಾರೋ ಎನ್ನುವ ಕುತೂಹಲ ಮೂಡಿದೆ. ಅನುಷ್ಕಾ ಶರ್ಮಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ