AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ

ವಮಿಕಾ ಜನಿಸಿದ್ದು ವಿರಾಟ್​ ಕುಟುಂಬಕ್ಕೆ ಖುಷಿ ತಂದಿದೆ. ಆದರೆ, ಇದನ್ನು ನೋಡೋಕೆ ಅವರ ತಂದೆ ಇಲ್ಲ ಎನ್ನುವ ವಿಚಾರ ಬೇಸರ ತರಿಸಿದೆ.

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ
ವಿರಾಟ್, ಅನುಷ್ಕಾ
TV9 Web
| Edited By: |

Updated on: Aug 04, 2021 | 7:23 PM

Share

ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಮದುವೆ ಆಗಿ ಅನೇಕ ವರ್ಷ ಕಳೆದಿದೆ. ಹಲವು ವರ್ಷಗಳ ಕಾಲ ಡೇಟಿಂಗ್​ ನಡೆಸುತ್ತಿದ್ದ ಈ ಜೋಡಿ 2017ರಲ್ಲಿ ಮದುವೆ ಆಗಿತ್ತು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ವಿರಾಟ್​ ಅನುಷ್ಕಾ ಮೊದಲ ಭೇಟಿ ಬಗ್ಗೆ ಹೇಳಿಕೊಂಡಿದ್ದಾರೆ. ಹಾಗಾದರೆ, ಇಬ್ಬರೂ ಮೊದಲು ಭೇಟಿ ಆಗಿದ್ದು ಎಲ್ಲಿ? ಹೇಗಿತ್ತು ಆ ಭೇಟಿ ಎನ್ನುವ ಬಗ್ಗೆ ವಿರಾಟ್​ ವಿವರಿಸಿದ್ದಾರೆ.

ವಿರಾಟ್​ ಅವರು ಅನುಷ್ಕಾ ಅವರನ್ನು ಮೊದಲ ಬಾರಿ ಭೇಟಿ ಮಾಡಿದ್ದು 2013ರಲ್ಲಿ. ಈ ಬಗ್ಗೆ ಮಾತನಾಡಿರುವ ವಿರಾಟ್​, ‘ನಾನು ಸೆಟ್​ನಲ್ಲಿ ಅನುಷ್ಕಾ ಅವರನ್ನು ಭೇಟಿ ಮಾಡಿದ್ದೆ. ಆಗ ತುಂಬಾನೇ ನರ್ವಸ್​ ಆಗಿದ್ದೆ. ಹೀಗಾಗಿ, ಒಂದು ಜೋಕ್​ ಹೇಳಿದೆ. ನನಗೆ ಏನು ಮಾಡಬೇಕು ಎಂಬುದೇ ಗೊತ್ತಿರಲಿಲ್ಲ. ಈ ಕಾರಣಕ್ಕೆ ನಾನು ಜೋಕ್​ ಹೇಳಿದೆ. ಅನುಷ್ಕಾ ತುಂಬಾನೇ ಎತ್ತರವಾಗಿ ಕಾಣುತ್ತಿದ್ದರು. ಹೀಲ್ಸ್​ ಹಾಕಿಕೊಂಡಿದ್ದರು. ಅವರು ತುಂಬಾನೇ ಕಾನ್ಫಿಡೆಂಟ್​ ಆಗಿದ್ದರು’ ಎಂದು ವಿರಾಟ್​ ಮೊದಲ ಭೇಟಿ ಅನುಭವ ಹಂಚಿಕೊಂಡಿದ್ದಾರೆ.

ವಮಿಕಾ ಜನಿಸಿದ್ದು ವಿರಾಟ್​ ಕುಟುಂಬಕ್ಕೆ ಖುಷಿ ತಂದಿದೆ. ಆದರೆ, ಇದನ್ನು ನೋಡೋಕೆ ಅವರ ತಂದೆ ಇಲ್ಲ ಎನ್ನುವ ವಿಚಾರ ಬೇಸರ ತರಿಸಿದೆ. ಈ ಬಗ್ಗೆ ಮಾತನಾಡಿರುವ ವಿರಾಟ್​, ‘ನಾನು ಕ್ರಿಕೆಟ್​ ಆಡುವುದನ್ನು ನೋಡುವುದಕ್ಕೂ ನನ್ನ ತಂದೆ ಇಲ್ಲ. ಈಗ ನನ್ನ ಮಗಳನ್ನು ನೋಡೋಕು ನನ್ನ ತಂದೆ ಇಲ್ಲ. ನನ್ನ ಅಮ್ಮನ ಮುಖದಲ್ಲಿ ಎಲ್ಲಾ ಖುಷಿಯನ್ನು ಕಾಣುತ್ತಿದ್ದೇನೆ’ ಎಂದಿದ್ದಾರೆ ಕೊಹ್ಲಿ.

ವಿರಾಟ್​ ಹಾಗೂ ಅನುಷ್ಕಾ 2017ರಲ್ಲಿ ದೂರದ ಇಟಲಿಗೆ ತೆರಳಿ ಮದುವೆ ಆಗಿದ್ದರು. ಜನವರಿಯಲ್ಲಿ ಜನಿಸಿದ ಮಗಳಿಗೆ ಈ ಜೋಡಿ ವಮಿಕಾ ಎಂದು ಹೆಸರಿಟ್ಟಿದ್ದರು. ವಮಿಕಾ ಮುಖವನ್ನು ಅನುಷ್ಕಾ ಹಾಗೂ ವಿರಾಟ್​ ಅಭಿಮಾನಿಗಳಿಗೆ ತೋರಿಸಿಲ್ಲ. ಸದ್ಯ, ಇಂಗ್ಲೆಂಡ್​ನಲ್ಲಿ ಆಂಗ್ಲರ ವಿರುದ್ಧ ಪಂದ್ಯ ನಡೆಯುತ್ತಿದೆ. ಈ ಕಾರಣಕ್ಕೆ ಟೀಂ ಇಂಡಿಯಾ ಅಲ್ಲಿಗೆ ತೆರಳಿದೆ. ಅನುಷ್ಕಾ ಕೂಡ ಅಲ್ಲಿಯೇ ಇದ್ದಾರೆ.

ಇದನ್ನೂ ಓದಿ: ಸ್ಟೋಕ್ಸ್ ಅವರಂತೆ ಬೇರೆ ಆಟಗಾರರು ಸಹ ಬಯೊ-ಬಬಲ್ ಬದುಕಿನಿಂದ ಬೇಸತ್ತು ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಬಹುದು: ವಿರಾಟ್ ಕೊಹ್ಲಿ

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ