AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ

ವಮಿಕಾ ಜನಿಸಿದ್ದು ವಿರಾಟ್​ ಕುಟುಂಬಕ್ಕೆ ಖುಷಿ ತಂದಿದೆ. ಆದರೆ, ಇದನ್ನು ನೋಡೋಕೆ ಅವರ ತಂದೆ ಇಲ್ಲ ಎನ್ನುವ ವಿಚಾರ ಬೇಸರ ತರಿಸಿದೆ.

ಅನುಷ್ಕಾ ಮೊದಲ ಭೇಟಿ ಹೇಗಿತ್ತು? ಸಂದರ್ಭ ಸಹಿತ ವಿವರಿಸಿದ ವಿರಾಟ್​ ಕೊಹ್ಲಿ
ವಿರಾಟ್, ಅನುಷ್ಕಾ
TV9 Web
| Edited By: |

Updated on: Aug 04, 2021 | 7:23 PM

Share

ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಮದುವೆ ಆಗಿ ಅನೇಕ ವರ್ಷ ಕಳೆದಿದೆ. ಹಲವು ವರ್ಷಗಳ ಕಾಲ ಡೇಟಿಂಗ್​ ನಡೆಸುತ್ತಿದ್ದ ಈ ಜೋಡಿ 2017ರಲ್ಲಿ ಮದುವೆ ಆಗಿತ್ತು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ವಿರಾಟ್​ ಅನುಷ್ಕಾ ಮೊದಲ ಭೇಟಿ ಬಗ್ಗೆ ಹೇಳಿಕೊಂಡಿದ್ದಾರೆ. ಹಾಗಾದರೆ, ಇಬ್ಬರೂ ಮೊದಲು ಭೇಟಿ ಆಗಿದ್ದು ಎಲ್ಲಿ? ಹೇಗಿತ್ತು ಆ ಭೇಟಿ ಎನ್ನುವ ಬಗ್ಗೆ ವಿರಾಟ್​ ವಿವರಿಸಿದ್ದಾರೆ.

ವಿರಾಟ್​ ಅವರು ಅನುಷ್ಕಾ ಅವರನ್ನು ಮೊದಲ ಬಾರಿ ಭೇಟಿ ಮಾಡಿದ್ದು 2013ರಲ್ಲಿ. ಈ ಬಗ್ಗೆ ಮಾತನಾಡಿರುವ ವಿರಾಟ್​, ‘ನಾನು ಸೆಟ್​ನಲ್ಲಿ ಅನುಷ್ಕಾ ಅವರನ್ನು ಭೇಟಿ ಮಾಡಿದ್ದೆ. ಆಗ ತುಂಬಾನೇ ನರ್ವಸ್​ ಆಗಿದ್ದೆ. ಹೀಗಾಗಿ, ಒಂದು ಜೋಕ್​ ಹೇಳಿದೆ. ನನಗೆ ಏನು ಮಾಡಬೇಕು ಎಂಬುದೇ ಗೊತ್ತಿರಲಿಲ್ಲ. ಈ ಕಾರಣಕ್ಕೆ ನಾನು ಜೋಕ್​ ಹೇಳಿದೆ. ಅನುಷ್ಕಾ ತುಂಬಾನೇ ಎತ್ತರವಾಗಿ ಕಾಣುತ್ತಿದ್ದರು. ಹೀಲ್ಸ್​ ಹಾಕಿಕೊಂಡಿದ್ದರು. ಅವರು ತುಂಬಾನೇ ಕಾನ್ಫಿಡೆಂಟ್​ ಆಗಿದ್ದರು’ ಎಂದು ವಿರಾಟ್​ ಮೊದಲ ಭೇಟಿ ಅನುಭವ ಹಂಚಿಕೊಂಡಿದ್ದಾರೆ.

ವಮಿಕಾ ಜನಿಸಿದ್ದು ವಿರಾಟ್​ ಕುಟುಂಬಕ್ಕೆ ಖುಷಿ ತಂದಿದೆ. ಆದರೆ, ಇದನ್ನು ನೋಡೋಕೆ ಅವರ ತಂದೆ ಇಲ್ಲ ಎನ್ನುವ ವಿಚಾರ ಬೇಸರ ತರಿಸಿದೆ. ಈ ಬಗ್ಗೆ ಮಾತನಾಡಿರುವ ವಿರಾಟ್​, ‘ನಾನು ಕ್ರಿಕೆಟ್​ ಆಡುವುದನ್ನು ನೋಡುವುದಕ್ಕೂ ನನ್ನ ತಂದೆ ಇಲ್ಲ. ಈಗ ನನ್ನ ಮಗಳನ್ನು ನೋಡೋಕು ನನ್ನ ತಂದೆ ಇಲ್ಲ. ನನ್ನ ಅಮ್ಮನ ಮುಖದಲ್ಲಿ ಎಲ್ಲಾ ಖುಷಿಯನ್ನು ಕಾಣುತ್ತಿದ್ದೇನೆ’ ಎಂದಿದ್ದಾರೆ ಕೊಹ್ಲಿ.

ವಿರಾಟ್​ ಹಾಗೂ ಅನುಷ್ಕಾ 2017ರಲ್ಲಿ ದೂರದ ಇಟಲಿಗೆ ತೆರಳಿ ಮದುವೆ ಆಗಿದ್ದರು. ಜನವರಿಯಲ್ಲಿ ಜನಿಸಿದ ಮಗಳಿಗೆ ಈ ಜೋಡಿ ವಮಿಕಾ ಎಂದು ಹೆಸರಿಟ್ಟಿದ್ದರು. ವಮಿಕಾ ಮುಖವನ್ನು ಅನುಷ್ಕಾ ಹಾಗೂ ವಿರಾಟ್​ ಅಭಿಮಾನಿಗಳಿಗೆ ತೋರಿಸಿಲ್ಲ. ಸದ್ಯ, ಇಂಗ್ಲೆಂಡ್​ನಲ್ಲಿ ಆಂಗ್ಲರ ವಿರುದ್ಧ ಪಂದ್ಯ ನಡೆಯುತ್ತಿದೆ. ಈ ಕಾರಣಕ್ಕೆ ಟೀಂ ಇಂಡಿಯಾ ಅಲ್ಲಿಗೆ ತೆರಳಿದೆ. ಅನುಷ್ಕಾ ಕೂಡ ಅಲ್ಲಿಯೇ ಇದ್ದಾರೆ.

ಇದನ್ನೂ ಓದಿ: ಸ್ಟೋಕ್ಸ್ ಅವರಂತೆ ಬೇರೆ ಆಟಗಾರರು ಸಹ ಬಯೊ-ಬಬಲ್ ಬದುಕಿನಿಂದ ಬೇಸತ್ತು ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಳ್ಳಬಹುದು: ವಿರಾಟ್ ಕೊಹ್ಲಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ