AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಶಾಲೆಯಲ್ಲಿ ಓದಿದ್ದ ಸ್ಟಾರ್ ಕ್ರಿಕೆಟಿಗರ ಪತ್ನಿಯರು; ಒಬ್ಬರು ನಟಿ, ಮತ್ತೊಬ್ಬರು ನಿರ್ಮಾಪಕಿ  

ಸ್ಟಾರ್ ಕ್ರಿಕೆಟಿಗರ ಪತ್ನಿಯರ ಫೋಟೋ ವೈರಲ್ ಆಗಿದೆ. ಇವರು ಚಿತ್ರರಂಗದಲ್ಲಿ ತೊಡಗಿಕೊಂಡವರು. ಅವರಿಬ್ಬರೂ ಬಾಲ್ಯದಿಂದ ಗೆಳತಿಯರು ಅನ್ನೋದು ವಿಶೇಷ.

ಒಂದೇ ಶಾಲೆಯಲ್ಲಿ ಓದಿದ್ದ ಸ್ಟಾರ್ ಕ್ರಿಕೆಟಿಗರ ಪತ್ನಿಯರು; ಒಬ್ಬರು ನಟಿ, ಮತ್ತೊಬ್ಬರು ನಿರ್ಮಾಪಕಿ  
ರಾಜೇಶ್ ದುಗ್ಗುಮನೆ
|

Updated on:May 31, 2023 | 1:03 PM

Share

ಸೆಲೆಬ್ರಿಟಿಗಳ ಬಾಲ್ಯದ ಫೋಟೋ ನೋಡೋಕೆ ಫ್ಯಾನ್ಸ್ ಕಾದು ಕೂತಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ (Social Media) ಆಗಾಗ ಈ ರೀತಿಯ ಫೋಟೋಗಳು ವೈರಲ್ ಆಗುತ್ತವೆ. ಈಗ ಸ್ಟಾರ್ ಕ್ರಿಕೆಟಿಗರ ಪತ್ನಿಯರ ಫೋಟೋ ವೈರಲ್ ಆಗಿದೆ. ಇವರು ಚಿತ್ರರಂಗದಲ್ಲಿ ತೊಡಗಿಕೊಂಡವರು. ಅವರಿಬ್ಬರೂ ಬಾಲ್ಯದಿಂದ ಗೆಳತಿಯರು ಅನ್ನೋದು ವಿಶೇಷ. ಅವರು ಬೇರಾರೂ ಅಲ್ಲ ಅನುಷ್ಕಾ ಶರ್ಮಾ (Anushka Sharma) ಹಾಗೂ ಸಾಕ್ಷಿ ಸಿಂಗ್ ಧೋನಿ. ಈ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸದ್ದು ಮಾಡುತ್ತಿದೆ.

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಇಬ್ಬರೂ ಪ್ರೀತಿಸಿ ಮದುವೆ ಆದವರು. ಸಾಕ್ಷಿಯನ್ನು ಧೋನಿ ಹಾಗೂ ಅನುಷ್ಕಾ ಶರ್ಮಾ ಅವರನ್ನು ವಿರಾಟ್ ಮದುವೆ ಆಗಿದ್ದಾರೆ. ಅನುಷ್ಕಾ-ಸಾಕ್ಷಿಗೆ ಈ ಮೊದಲೇ ಪರಿಚಯ ಇತ್ತು ಅನ್ನೋದು ವಿಶೇಷ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸದ್ದು ಮಾಡುತ್ತಿದೆ. ಅನೇಕರು ಈ ಬಗ್ಗೆ ಅಚ್ಚರಿ ಹೊರಹಾಕಿದ್ದಾರೆ.

ಇನ್​​ಸ್ಟಂಟ್ ಬಾಲಿವುಡ್ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಅನುಷ್ಕಾ ಶರ್ಮಾ, ಕರ್ಣೇಶ್ ಶರ್ಮಾ ಹಾಗೂ ಸಾಕ್ಷಿ ಸಿಂಗ್ ಒಟ್ಟಾಗಿ ಇರುವ ಫೋಟೋ ಹಂಚಿಕೊಳ್ಳಲಾಗಿದೆ. ಅಸ್ಸಾಂನಲ್ಲಿ ಈ ಮೂವರು ಒಂದೇ ಶಾಲೆಯಲ್ಲಿ ಕಲಿತಿದ್ದರು. ಅನುಷ್ಕಾ ತಂದೆ ಸೇನೆಯಲ್ಲಿದ್ದರು. ಅವರು ದೇಶದ ವಿವಿಧ ಕಡೆ ಸೇವೆ ಸಲ್ಲಿಸಿದ್ದಾರೆ. ಒಂದು ಸಂದರ್ಭದಲ್ಲಿ ಸಾಕ್ಷಿ ಇದ್ದ ಊರಿನಲ್ಲಿ ಅನುಷ್ಕಾ ತಂದೆ ಸೇವೆ ಸಲ್ಲಿಸಿದ್ದರು. ಹೀಗಾಗಿ ಇಬ್ಬರೂ ಒಂದೇ ಸ್ಕೂಲ್​ನಲ್ಲಿ ಕಲಿಯೋ ಸಂದರ್ಭ ಬಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಮೊದಲಿನಷ್ಟು ಸಿನಿಮಾ ಮಾಡಲ್ಲ ಅನುಷ್ಕಾ ಶರ್ಮಾ; ಈ ತ್ಯಾಗಕ್ಕೆ ಕಾರಣ ತಿಳಿಸಿದ ನಟಿ

ಇಬ್ಬರ ನಡುವೆ ಹಲವು ಸಾಮ್ಯತೆ ಇದೆ. ಅನುಷ್ಕಾ ಶರ್ಮಾ ಹಾಗೂ ಸಾಕ್ಷಿ ಇಬ್ಬರೂ ಟೀಂ ಇಂಡಿಯಾ ಆಟಗಾರರನ್ನು ಮದುವೆ ಆಗಿದ್ದಾರೆ. ಇಬ್ಬರ ಪತಿಯರು ಟೀಂ ಇಂಡಿಯಾನ ಮುನ್ನಡೆಸಿದ್ದರು. ಇಬ್ಬರಿಗೂ ಹೆಣ್ಣು ಮಗು ಜನಿಸಿದೆ. ಅಷ್ಟೇ ಅಲ್ಲ, ಅನುಷ್ಕಾ ಈ ಮೊದಲು ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದರು. ಬೇರೆ ಕೆಲಸದ ನಿಮಿತ್ತ ಅದನ್ನು ತೊರೆದಿದ್ದಾರೆ. ಸಾಕ್ಷಿ ಸಿಂಗ್ ಧೋನಿ ಈಗ ನಿರ್ಮಾಪಕಿ ಆಗಿದ್ದಾರೆ. ಧೋನಿ ಎಂಟರ್​ಟೇನ್​ಮೆಂಟ್ ಮೂಲಕ ಬರುತ್ತಿರುವ ಮೊದಲ ಸಿನಿಮಾ ‘ಎಲ್​ಜಿಎಂ’ಗೆ ಅವರು ನಿರ್ಮಾಪಕಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Wed, 31 May 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ