AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

ಕ್ರಿಕೆಟಿಗ ವಿರಾಟ್ ಕೊಹ್ಲಿ 'ಧುರಂಧರ್ 2' ಚಿತ್ರವನ್ನು ಹಾಡಿ ಹೊಗಳಿದ ನಂತರ, ಸಿನಿಮಾ ಕಲೆಕ್ಷನ್ ಹೆಚ್ಚಿದೆ ಎಂಬ ಚರ್ಚೆ ಶುರುವಾಯಿತು. ಥಿಯೇಟರ್‌ನಲ್ಲಿ ನೂಕು ನುಗ್ಗಲಿನ ವೈರಲ್ ವಿಡಿಯೋ ಸಹ ಹರಿದಾಡಿತು. ಆದರೆ, ಕೊಹ್ಲಿ ಪೋಸ್ಟ್ ನಂತರ ಸಂಗ್ರಹದಲ್ಲಿ ಅಷ್ಟೇನೂ ಗಮನಾರ್ಹ ಏರಿಕೆ ಆಗಿಲ್ಲ. ವೈರಲ್ ವಿಡಿಯೋ ಹಳೆಯದಾಗಿರಬಹುದು ಎಂದು ಹೇಳಲಾಗುತ್ತಿದೆ.

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?
ಧುರಂಧರ್ 2’
ರಾಜೇಶ್ ದುಗ್ಗುಮನೆ
|

Updated on: Apr 09, 2026 | 7:42 AM

Share

ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿತೇ? ಆ ಬಗ್ಗೆ ಇಲ್ಲಿದೆ ವಿವರ.

‘ಧುರಂಧರ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ 1652 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಚಿತ್ರದ ಗ್ರಾಸ್ ಕಲೆಕ್ಷನ್ 1653 ರೂಪಾಯಿ. ಈ ಚಿತ್ರದ ನೆಟ್ ಕಲೆಕ್ಷನ್ 1,041 ಕೋಟಿ ರೂಪಾಯಿ. ಈವರೆಗೆ ಸಿನಿಮಾ ಸುಮಾರು 4 ಲಕ್ಷ ಶೋಗಳನ್ನು ರನ್ ಮಾಡಿದೆ. ಈ ಸಿನಿಮಾ ಕಳೆದ ಭಾನುವಾರ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಕೊಹ್ಲಿ ಸಿನಿಮಾ ಬಗ್ಗೆ ಪೋಸ್ಟ್ ಮಾಡಿದ್ದು ಸೋಮವಾರ ಸಂಜೆ. ಸೋಮವಾರ ಚಿತ್ರದ ಗಳಿಕೆ 12 ಕೋಟಿ ರೂಪಾಯಿ ಇತ್ತು. ಮಂಗಳವಾರ ಚಿತ್ರದ ಕಲೆಕ್ಷನ್ ತಗ್ಗಿಲ್ಲ. ಬದಲಿಗೆ 12 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ ಸಿನಿಮಾದ ಕಲೆಕ್ಷನ್ 9.46 ಕೋಟಿ ರೂಪಾಯಿಗೆ ಇಳಿದಿದೆ. ಇದನ್ನು ಹೋಲಿಕೆ ಮಾಡಿದರೆ ಮಂಗಳವಾರ ಸ್ವಲ್ಪ ಪ್ರಮಾಣದಲ್ಲಿ ಕೊಹ್ಲಿ ಅಭಿಮಾನಿಗಳು ಸಿನಿಮಾ ವೀಕ್ಷಿಸಿರಬಹುದು ಎನ್ನಬಹುದು. ಆದರೆ, ಗಳಿಕೆಯಲ್ಲಿ ಗಮನಾರ್ಹ ಏರಿಕೆ ಏನೂ ಆಗಿಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

ಸದ್ಯ ವೈರಲ್ ಆಗಿರೋ ವಿಡಿಯೋದಲ್ಲಿ ಕೊಹ್ಲಿ ಅಭಿಮಾನಿಗಳು ಥಿಯೇಟರ್​​ನಲ್ಲಿ ಸಿನಿಮಾ ನೋಡಲು ನೂಕು ನುಗ್ಗಲು ಮಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಇದೆ. ಆದರೆ, ಅಸಲಿಗೆ ಆ ರೀತಿ ಇಲ್ಲ ಎಂದು ಹೇಳಲಾಗುತ್ತಾ ಇದೆ. ಕೆಲವರು ಹಳೆಯ ವಿಡಿಯೋವನ್ನು ಈಗ ವೈರಲ್ ಮಾಡಿರಬಹುದು ಎಂದು ಊಹಿಸಲಾಗಿದೆ. ವೈರಲ್ ಆಗಿರೋ ವಿಡಿಯೋದ ಸತ್ಯಾ ಸತ್ಯತೆ ಇನ್ನೂ ಬಹಿರಂಗವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ