AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?

ಕ್ರಿಕೆಟಿಗ ವಿರಾಟ್ ಕೊಹ್ಲಿ 'ಧುರಂಧರ್ 2' ಚಿತ್ರವನ್ನು ಹಾಡಿ ಹೊಗಳಿದ ನಂತರ, ಸಿನಿಮಾ ಕಲೆಕ್ಷನ್ ಹೆಚ್ಚಿದೆ ಎಂಬ ಚರ್ಚೆ ಶುರುವಾಯಿತು. ಥಿಯೇಟರ್‌ನಲ್ಲಿ ನೂಕು ನುಗ್ಗಲಿನ ವೈರಲ್ ವಿಡಿಯೋ ಸಹ ಹರಿದಾಡಿತು. ಆದರೆ, ಕೊಹ್ಲಿ ಪೋಸ್ಟ್ ನಂತರ ಸಂಗ್ರಹದಲ್ಲಿ ಅಷ್ಟೇನೂ ಗಮನಾರ್ಹ ಏರಿಕೆ ಆಗಿಲ್ಲ. ವೈರಲ್ ವಿಡಿಯೋ ಹಳೆಯದಾಗಿರಬಹುದು ಎಂದು ಹೇಳಲಾಗುತ್ತಿದೆ.

ಕೊಹ್ಲಿ ಹೊಗಳಿಕೆ ಬಳಿಕ ‘ಧುರಂಧರ್ 2’ ಹೌಸ್​​ಫುಲ್? ಕಲೆಕ್ಷನ್ ಏನ್​ ಅನ್ನುತ್ತೆ?
ಧುರಂಧರ್ 2’
ರಾಜೇಶ್ ದುಗ್ಗುಮನೆ
|

Updated on: Apr 09, 2026 | 7:42 AM

Share

ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿತೇ? ಆ ಬಗ್ಗೆ ಇಲ್ಲಿದೆ ವಿವರ.

‘ಧುರಂಧರ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ 1652 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಚಿತ್ರದ ಗ್ರಾಸ್ ಕಲೆಕ್ಷನ್ 1653 ರೂಪಾಯಿ. ಈ ಚಿತ್ರದ ನೆಟ್ ಕಲೆಕ್ಷನ್ 1,041 ಕೋಟಿ ರೂಪಾಯಿ. ಈವರೆಗೆ ಸಿನಿಮಾ ಸುಮಾರು 4 ಲಕ್ಷ ಶೋಗಳನ್ನು ರನ್ ಮಾಡಿದೆ. ಈ ಸಿನಿಮಾ ಕಳೆದ ಭಾನುವಾರ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಕೊಹ್ಲಿ ಸಿನಿಮಾ ಬಗ್ಗೆ ಪೋಸ್ಟ್ ಮಾಡಿದ್ದು ಸೋಮವಾರ ಸಂಜೆ. ಸೋಮವಾರ ಚಿತ್ರದ ಗಳಿಕೆ 12 ಕೋಟಿ ರೂಪಾಯಿ ಇತ್ತು. ಮಂಗಳವಾರ ಚಿತ್ರದ ಕಲೆಕ್ಷನ್ ತಗ್ಗಿಲ್ಲ. ಬದಲಿಗೆ 12 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ ಸಿನಿಮಾದ ಕಲೆಕ್ಷನ್ 9.46 ಕೋಟಿ ರೂಪಾಯಿಗೆ ಇಳಿದಿದೆ. ಇದನ್ನು ಹೋಲಿಕೆ ಮಾಡಿದರೆ ಮಂಗಳವಾರ ಸ್ವಲ್ಪ ಪ್ರಮಾಣದಲ್ಲಿ ಕೊಹ್ಲಿ ಅಭಿಮಾನಿಗಳು ಸಿನಿಮಾ ವೀಕ್ಷಿಸಿರಬಹುದು ಎನ್ನಬಹುದು. ಆದರೆ, ಗಳಿಕೆಯಲ್ಲಿ ಗಮನಾರ್ಹ ಏರಿಕೆ ಏನೂ ಆಗಿಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

ಸದ್ಯ ವೈರಲ್ ಆಗಿರೋ ವಿಡಿಯೋದಲ್ಲಿ ಕೊಹ್ಲಿ ಅಭಿಮಾನಿಗಳು ಥಿಯೇಟರ್​​ನಲ್ಲಿ ಸಿನಿಮಾ ನೋಡಲು ನೂಕು ನುಗ್ಗಲು ಮಾಡುತ್ತಿದ್ದಾರೆ ಎಂಬ ರೀತಿಯಲ್ಲಿ ಇದೆ. ಆದರೆ, ಅಸಲಿಗೆ ಆ ರೀತಿ ಇಲ್ಲ ಎಂದು ಹೇಳಲಾಗುತ್ತಾ ಇದೆ. ಕೆಲವರು ಹಳೆಯ ವಿಡಿಯೋವನ್ನು ಈಗ ವೈರಲ್ ಮಾಡಿರಬಹುದು ಎಂದು ಊಹಿಸಲಾಗಿದೆ. ವೈರಲ್ ಆಗಿರೋ ವಿಡಿಯೋದ ಸತ್ಯಾ ಸತ್ಯತೆ ಇನ್ನೂ ಬಹಿರಂಗವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ