AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಬೀಚ್​ನ ಸೌಂದರ್ಯ ಹೊಗಳಿದ ಸೆಹ್ವಾಗ್​; ಅಮಿತಾಭ್​ ಬಚ್ಚನ್​ ಪ್ರತಿಕ್ರಿಯೆ ಏನು?

ಉಡುಪಿ, ಪಾಂಡಿಚೆರಿ, ಅಂಡಮಾನ್​ ಮುಂತಾದ ಬೀಚ್​ಗಳು ಸುಂದರವಾಗಿವೆ. ಭಾರತದಲ್ಲಿ ಇಂಥ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ. ಇವುಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಪ್ರವಾಸೋದ್ಯಮ ವೃದ್ಧಿಸಬೇಕು. ನಿಮಗೆ ತಿಳಿದಿರುವ ಇಂತಹ ಸ್ಥಳಗಳ ಬಗ್ಗೆ ಹೇಳಿ ಎಂದು ವೀರೇಂದ್ರ ಸೆಹ್ವಾಗ್​ ಟ್ವೀಟ್​ ಮಾಡಿದ್ದಾರೆ.

ಉಡುಪಿ ಬೀಚ್​ನ ಸೌಂದರ್ಯ ಹೊಗಳಿದ ಸೆಹ್ವಾಗ್​; ಅಮಿತಾಭ್​ ಬಚ್ಚನ್​ ಪ್ರತಿಕ್ರಿಯೆ ಏನು?
ವೀರೇಂದ್ರ ಸೆಹ್ವಾಗ್​, ಅಮಿತಾಭ್​ ಬಚ್ಚನ್​
Follow us
ಮದನ್​ ಕುಮಾರ್​
|

Updated on:Jan 08, 2024 | 4:04 PM

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್​ (Maldives) ಸಚಿವರು ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದನ್ನು ವಿರೋಧಿಸಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇಷ್ಟು ದಿನಗಳ ಕಾಲ ಬಹುತೇಕ ಎಲ್ಲ ಸೆಲೆಬ್ರಿಟಿಗಳು ರಜೆಯ ದಿನಗಳನ್ನು ಎಂಜಾಯ್​ ಮಾಡಲು ಮಾಲ್ಡೀವ್ಸ್​ಗೆ ತೆರಳುತ್ತಿದ್ದರು. ಆದರೆ ಈಗ ಮಾಲ್ಡೀವ್ಸ್​ನ ಬಹಿಷ್ಕರಿಸುವ ಅಭಿಯಾನ ನಡೆಯುತ್ತಿದೆ. ಅದರ ಬದಲಾಗಿ ಭಾರತದಲ್ಲಿನ ಸುಂದರ ಬೀಚ್​ಗಳ ಬಗ್ಗೆ ಬೆಳಕು ಚೆಲ್ಲಲಾಗುತ್ತಿದೆ. ವಿರೇಂದ್ರ ಸೆಹ್ವಾಗ್​ ಅವರು ಉಡುಪಿ (Udupi) ಮುಂತಾದ ಬೀಚ್​ಗಳ ಸೌಂದರ್ಯವನ್ನು ಕೊಂಡಾಡಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ (Amitabh Bachchan) ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿ, ಪಾಂಡಿಚೆರಿ, ಅಂಡಮಾನ್​ ಮುಂತಾದ ಬೀಚ್​ಗಳು ಸುಂದರವಾಗಿವೆ. ಭಾರತದಲ್ಲಿ ಇಂಥ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ. ಇವುಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಪ್ರವಾಸೋದ್ಯಮ ವೃದ್ಧಿಸಬೇಕು. ನಿಮಗೆ ತಿಳಿದಿರುವ ಇಂತಹ ಸ್ಥಳಗಳ ಬಗ್ಗೆ ಹೇಳಿ ಎಂದು ವೀರೇಂದ್ರ ಸೆಹ್ವಾಗ್​ ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಅಮಿತಾಭ್​ ಬಚ್ಚನ್​ ಅವರು ಲಕ್ಷದ್ವೀಪ ಮತ್ತು ಅಂಡಮಾನ್​ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಇದು ಸೂಕ್ತ ಸಮಯ. ನಮ್ಮ ಸ್ಥಳಗಳೇ ಅತ್ಯುತ್ತಮವಾಗಿವೆ. ನಾನು ಅಂಡಮಾನ್​ ಮತ್ತು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೇನೆ. ಅವು ತುಂಬ ಸುಂದರವಾದ ಸ್ಥಳಗಳು. ಅಲ್ಲಿನ ಅಂಡರ್​ವಾಟರ್​ ಅನುಭವ ತುಂಬ ಚೆನ್ನಾಗಿದೆ’ ಎಂದು ಅಮಿತಾಭ್​ ಬಚ್ಚನ್​ ಅವರು ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಸಾವಿರಾರು ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಭಾರತದ ಪ್ರವಾಸಿ ತಾಣಗಳು ಅದ್ಭುತವಾಗಿವೆ ಎಂದು ನೆಟ್ಟಿಗರು ದನಿಗೂಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಸಚಿನ್​ ತೆಂಡೂಲ್ಕರ್​, ಸುರೇಶ್ ರೈನಾ, ಇರ್ಫಾನ್​ ಪಠಾಣ್​, ಅಕ್ಷಯ್​ ಕುಮಾರ್​ ಕಂಗನಾ ರಣಾವತ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ಭಾರತವನ್ನು ಅವಹೇಳನ ಮಾಡುವಂತಹ ಹೇಳಿಕೆ ನೀಡಿದ ಮಾಲ್ಡೀವ್ಸ್​ ಸಚಿವರ ವಿರುದ್ಧ ಅನೇಕರು ಗರಂ ಆಗಿದ್ದಾರೆ. ನಮ್ಮ ಆತ್ಮಗೌರವವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಪೋಸ್ಟ್​ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:00 pm, Mon, 8 January 24

ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್