AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಬೀಚ್​ನ ಸೌಂದರ್ಯ ಹೊಗಳಿದ ಸೆಹ್ವಾಗ್​; ಅಮಿತಾಭ್​ ಬಚ್ಚನ್​ ಪ್ರತಿಕ್ರಿಯೆ ಏನು?

ಉಡುಪಿ, ಪಾಂಡಿಚೆರಿ, ಅಂಡಮಾನ್​ ಮುಂತಾದ ಬೀಚ್​ಗಳು ಸುಂದರವಾಗಿವೆ. ಭಾರತದಲ್ಲಿ ಇಂಥ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ. ಇವುಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಪ್ರವಾಸೋದ್ಯಮ ವೃದ್ಧಿಸಬೇಕು. ನಿಮಗೆ ತಿಳಿದಿರುವ ಇಂತಹ ಸ್ಥಳಗಳ ಬಗ್ಗೆ ಹೇಳಿ ಎಂದು ವೀರೇಂದ್ರ ಸೆಹ್ವಾಗ್​ ಟ್ವೀಟ್​ ಮಾಡಿದ್ದಾರೆ.

ಉಡುಪಿ ಬೀಚ್​ನ ಸೌಂದರ್ಯ ಹೊಗಳಿದ ಸೆಹ್ವಾಗ್​; ಅಮಿತಾಭ್​ ಬಚ್ಚನ್​ ಪ್ರತಿಕ್ರಿಯೆ ಏನು?
ವೀರೇಂದ್ರ ಸೆಹ್ವಾಗ್​, ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
|

Updated on:Jan 08, 2024 | 4:04 PM

Share

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್​ (Maldives) ಸಚಿವರು ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದನ್ನು ವಿರೋಧಿಸಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇಷ್ಟು ದಿನಗಳ ಕಾಲ ಬಹುತೇಕ ಎಲ್ಲ ಸೆಲೆಬ್ರಿಟಿಗಳು ರಜೆಯ ದಿನಗಳನ್ನು ಎಂಜಾಯ್​ ಮಾಡಲು ಮಾಲ್ಡೀವ್ಸ್​ಗೆ ತೆರಳುತ್ತಿದ್ದರು. ಆದರೆ ಈಗ ಮಾಲ್ಡೀವ್ಸ್​ನ ಬಹಿಷ್ಕರಿಸುವ ಅಭಿಯಾನ ನಡೆಯುತ್ತಿದೆ. ಅದರ ಬದಲಾಗಿ ಭಾರತದಲ್ಲಿನ ಸುಂದರ ಬೀಚ್​ಗಳ ಬಗ್ಗೆ ಬೆಳಕು ಚೆಲ್ಲಲಾಗುತ್ತಿದೆ. ವಿರೇಂದ್ರ ಸೆಹ್ವಾಗ್​ ಅವರು ಉಡುಪಿ (Udupi) ಮುಂತಾದ ಬೀಚ್​ಗಳ ಸೌಂದರ್ಯವನ್ನು ಕೊಂಡಾಡಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ (Amitabh Bachchan) ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿ, ಪಾಂಡಿಚೆರಿ, ಅಂಡಮಾನ್​ ಮುಂತಾದ ಬೀಚ್​ಗಳು ಸುಂದರವಾಗಿವೆ. ಭಾರತದಲ್ಲಿ ಇಂಥ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ. ಇವುಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಪ್ರವಾಸೋದ್ಯಮ ವೃದ್ಧಿಸಬೇಕು. ನಿಮಗೆ ತಿಳಿದಿರುವ ಇಂತಹ ಸ್ಥಳಗಳ ಬಗ್ಗೆ ಹೇಳಿ ಎಂದು ವೀರೇಂದ್ರ ಸೆಹ್ವಾಗ್​ ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಅಮಿತಾಭ್​ ಬಚ್ಚನ್​ ಅವರು ಲಕ್ಷದ್ವೀಪ ಮತ್ತು ಅಂಡಮಾನ್​ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಇದು ಸೂಕ್ತ ಸಮಯ. ನಮ್ಮ ಸ್ಥಳಗಳೇ ಅತ್ಯುತ್ತಮವಾಗಿವೆ. ನಾನು ಅಂಡಮಾನ್​ ಮತ್ತು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದೇನೆ. ಅವು ತುಂಬ ಸುಂದರವಾದ ಸ್ಥಳಗಳು. ಅಲ್ಲಿನ ಅಂಡರ್​ವಾಟರ್​ ಅನುಭವ ತುಂಬ ಚೆನ್ನಾಗಿದೆ’ ಎಂದು ಅಮಿತಾಭ್​ ಬಚ್ಚನ್​ ಅವರು ಪೋಸ್ಟ್​ ಮಾಡಿದ್ದಾರೆ. ಇದಕ್ಕೆ ಸಾವಿರಾರು ನೆಟ್ಟಿಗರು ಸಹಮತ ಸೂಚಿಸಿದ್ದಾರೆ. ಭಾರತದ ಪ್ರವಾಸಿ ತಾಣಗಳು ಅದ್ಭುತವಾಗಿವೆ ಎಂದು ನೆಟ್ಟಿಗರು ದನಿಗೂಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಸಚಿನ್​ ತೆಂಡೂಲ್ಕರ್​, ಸುರೇಶ್ ರೈನಾ, ಇರ್ಫಾನ್​ ಪಠಾಣ್​, ಅಕ್ಷಯ್​ ಕುಮಾರ್​ ಕಂಗನಾ ರಣಾವತ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ಭಾರತವನ್ನು ಅವಹೇಳನ ಮಾಡುವಂತಹ ಹೇಳಿಕೆ ನೀಡಿದ ಮಾಲ್ಡೀವ್ಸ್​ ಸಚಿವರ ವಿರುದ್ಧ ಅನೇಕರು ಗರಂ ಆಗಿದ್ದಾರೆ. ನಮ್ಮ ಆತ್ಮಗೌರವವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಪೋಸ್ಟ್​ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:00 pm, Mon, 8 January 24

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ