AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯುನಲ್ಲಿ ತಂದೆ ಸಾವು; ಕೊವಿಡ್​ನಿಂದ ಹತ್ತಿರ ಹೋಗದ ಮಗ; ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ

ಕಳೆದ ಕೆಲವು ದಿನಗಳಿಂದ ವಿಶಾಲ್​ ದದ್ಲಾನಿ ಅವರ ತಂದೆ ಮೋತಿ ದದ್ಲಾನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಐಸಿಯುನಲ್ಲಿ ತಂದೆ ಸಾವು; ಕೊವಿಡ್​ನಿಂದ ಹತ್ತಿರ ಹೋಗದ ಮಗ; ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ
ಮೋತಿ ದದ್ಲಾನಿ, ವಿಶಾಲ್ ದದ್ಲಾನಿ
TV9 Web
| Edited By: |

Updated on:Jan 08, 2022 | 1:19 PM

Share

ಕೊರೊನಾ ವೈರಸ್​ ಕಾರಣದಿಂದ ಜನರು ಎದುರಿಸುತ್ತಿರುವ ಕಷ್ಟ ಒಂದೆರಡಲ್ಲ. ಎಲ್ಲರ ಬದುಕಿನಲ್ಲಿ ಅನಿಶ್ಚಿತತೆ ಆವರಿಸಿದೆ. ಮುಂದೇನು ಎಂಬ ಗೊಂದಲದಲ್ಲೇ ಕಾಲ ಕಳೆಯುವಂತಾಗಿದೆ. ಕೊವಿಡ್​ (Covid 19) ಸೋಂಕು ತಗುಲಿದರೆ ಆತ್ಮೀಯರಿಂದಲೂ ದೂರ ಇರಬೇಕಾದ ಪರಿಸ್ಥಿತಿ ಬಂದೊದಗುತ್ತಿದೆ. ಪ್ರೀತಿಪಾತ್ರರ ಅಂತಿಮ ಸಂಸ್ಕಾರದಲ್ಲೂ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಬಾಲಿವುಡ್​ನ (Bollywood) ಖ್ಯಾತ ಗಾಯಕ ವಿಶಾಲ್​ ದದ್ಲಾನಿ (Vishal Dadlani) ಅವರಿಗೆ ಅಕ್ಷರಶಃ ಇಂಥ ಸ್ಥಿತಿ ಬಂದಿದೆ. ಅವರ ತಂದೆ ಮೃತರಾಗಿದ್ದಾರೆ. ಆದರೆ ಕೊನೇ ಗಳಿಗೆಯಲ್ಲಿ ಅಪ್ಪನ ಜೊತೆ ಇರಲು ವಿಶಾಲ್​ ದದ್ಲಾನಿ ಅವರಿಗೆ ಸಾಧ್ಯವಾಗಿಲ್ಲ. ಕಳೆದ ಕೆಲವು ದಿನಗಳಿಂದ ಕೊವಿಡ್​ ಪಾಸಿಟಿವ್​ (Corona Positive) ಆಗಿರುವ ಅವರು ತಮ್ಮವರಿಂದಲೇ ದೂರ ಉಳಿದುಕೊಂಡು ನೋವು ಅನುಭವಿಸುತ್ತಿದ್ದಾರೆ. 

ಬಾಲಿವುಡ್​ನಲ್ಲಿ ನೂರಾರು ಗೀತೆಗಳನ್ನು ಹಾಡಿ ಫೇಮಸ್​ ಆಗಿದ್ದಾರೆ ವಿಶಾಲ್​ ದದ್ಲಾನಿ. ಶುಕ್ರವಾರ (ಜ.7) ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಆ ಕಾರಣದಿಂದ ಅವರು ಎಲ್ಲರಿಂದ ಐಸೋಲೇಟ್​ ಆಗಿದ್ದರು. ಕಳೆದ ಕೆಲವು ದಿನಗಳಿಂದ ಅವರ ತಂದೆ ಮೋತಿ ದದ್ಲಾನಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಮೋತಿ ದದ್ಲಾನಿ ನಿಧನರಾಗಿದ್ದಾರೆ. ಅಪ್ಪನ ಕೊನೇ ಕ್ಷಣಗಳಲ್ಲಿ ಜೊತೆಗಿರಲು ವಿಶಾಲ್​ಗೆ ಸಾಧ್ಯವಾಗಿಲ್ಲ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಳೆದ ರಾತ್ರಿ ಅತ್ಯುತ್ತಮ ವ್ಯಕ್ತಿಯನ್ನು ಕಳೆದುಕೊಂಡೆ. ಬದುಕಿನಲ್ಲಿ ಇವರಿಗಿಂತ ಒಳ್ಳೆಯ ತಂದೆಯನ್ನು, ಒಳ್ಳೆಯ ಗುರುವನ್ನು ನಾನು ಬಯಸಲು ಸಾಧ್ಯವಿಲ್ಲ. ನನ್ನಲ್ಲಿ ಇರುವ ಎಲ್ಲ ಒಳ್ಳೆಯತನಗಳು ಅವರ ಪ್ರತಿಬಿಂಬವೇ ಆಗಿದೆ. ಕಳೆದ 3-4 ದಿನಗಳಿಂದ ಅವರು ಐಸಿಯುನಲ್ಲಿ ಇದ್ದರು. ಕೊವಿಡ್​ ಕಾರಣದಿಂದ ನಾನು ನಿನ್ನೆಯಿಂದ ಅವರ ಬಳಿ ಹೋಗಲು ಆಗಿರಲಿಲ್ಲ. ನನ್ನ ತಾಯಿಯ ಅತಿ ಕಷ್ಟದ ಸಂದರ್ಭದಲ್ಲಿ ನಾನು ಅವರೊಂದಿಗೆ ಇರಲಾಗಲಿಲ್ಲ. ಇದು ನ್ಯಾಯವಲ್ಲ. ಅಪ್ಪ ಇಲ್ಲದೇ ಈ ಪ್ರಪಂಚದಲ್ಲಿ ಹೇಗೆ ಬದುಕಬೇಕೋ ತಿಳಿದಿಲ್ಲ. ನಾನು ಸಂಪೂರ್ಣವಾಗಿ ಕಳೆದುಹೋಗಿದ್ದೇನೆ’ ಎಂದು ವಿಶಾಲ್​ ದದ್ಲಾನಿ ಪೋಸ್ಟ್​ ಮಾಡಿದ್ದಾರೆ.

ಖ್ಯಾತ ಗಾಯಕನ ಕರುಣಾಜನಕ ಸ್ಥಿತಿ ಕಂಡು ಎಲ್ಲರೂ ಮರುಕು ವ್ಯಕ್ತಪಡಿಸಿದ್ದಾರೆ. ಅಗಲಿದ ಅವರ ತಂದೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಮೆಂಟ್​ ಮಾಡುತ್ತಿದ್ದಾರೆ. ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ಬಾಲಿವುಡ್​ನ ಅನೇಕರಿಗೆ ಕೊವಿಡ್​ ಪಾಸಿಟಿವ್​ ಆಗಿದೆ.

View this post on Instagram

A post shared by VISHAL (@vishaldadlani)

ದೇಶಾದ್ಯಂತ ಕೊರೊನಾ ಮೂರನೇ ಅಲೆ ಶುರುವಾಗಿದೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅನೇಕ ಕಡೆಗಳಲ್ಲಿ ಕಠಿಣ ನಿಯಮಗಳನ್ನು ಹೇರಲಾಗಿದೆ. ವೀಕೆಂಡ್​ ಕರ್ಫ್ಯೂ ಮತ್ತು ನೈಟ್​ ಕರ್ಫ್ಯೂ ಸಹ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ:

ಕೊರೊನಾ ನೆಗೆಟಿವ್​ ಆಗುತ್ತಿದ್ದಂತೆಯೇ ಪಾರ್ಟಿ ಶುರು ಮಾಡಿಕೊಂಡ ಕರೀನಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

Mahesh Babu: ಟಾಲಿವುಡ್​ ನಟ ಮಹೇಶ್​ ಬಾಬುಗೆ ಕೊವಿಡ್​ ಪಾಸಿಟಿವ್​

Published On - 1:17 pm, Sat, 8 January 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ