‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

‘ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಕೋಪ ಎಂಥದ್ದು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ತೆಗೆದುಕೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದಿದ್ದಾರೆ ವಿಶಾಲ್​ ದದ್ಲಾನಿ.

‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ
ವಿಶಾಲ್​ ದದ್ಲಾನಿ, ಕುಲ್ವಿಂದರ್​ ಕೌರ್​, ಕಂಗನಾ ರಣಾವತ್​
Follow us
|

Updated on: Jun 07, 2024 | 3:22 PM

ನಟಿ, ಸಂಸದೆ ಕಂಗನಾ ರಣಾವತ್​ (Kangana Ranaut) ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ಆಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕಂಗನಾ ಅವರು ಬಾಲಿವುಡ್​ನಲ್ಲಿ ಅನೇಕರ ವಿರೋಧ ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ಕಂಗನಾರ ಕೆನ್ನೆಗೆ ಬಾರಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರ ಪರವಾಗಿಯೂ ಕೆಲವರು ಮಾತನಾಡುತ್ತಿದ್ದಾರೆ. ಕುಲ್ವಿಂದರ್​ ಕೌರ್​ (Kulwinder Kaur) ಅವರಿಗೆ ಉದ್ಯೋಗ ನೀಡಲು ಜಯಪ್ರಿಯ ಗಾಯಕ ವಿಶಾಲ್​ ದದ್ಲಾನಿ (Vishal Dadlani) ಮುಂದೆ ಬಂದಿದ್ದಾರೆ.

ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

‘ಸ್ಕ್ಯಾನ್​ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್​ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್​ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾಯಿತು. ಕುಲ್ವಿಂದರ್​ ಕೌರ್​ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ ಉತ್ತಮ ಉದ್ಯೋಗ ನೀಡುತ್ತೇನೆ’ ಎಂದು ವಿಶಾಲ್​ ದದ್ಲಾನಿ ಭರವಸೆ ನೀಡಿದ್ದಾರೆ.

ಘಟನೆಗೆ ಕಂಗನಾ ಪ್ರತಿಕ್ರಿಯೆ:

ಗುರುವಾರ (ಜೂನ್​ 6) ಚಂಡಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಆದ ಬಳಿಕ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದರು. ‘ನಮಸ್ಕಾರ ಸ್ನೇಹಿತರೇ. ಹಿತೈಷಿಗಳು ಹಾಗೂ ಮಾಧ್ಯಮದವರಿಂದ ನನಗೆ ಅನೇಕ ಕರೆಗಳು ಬರುತ್ತಿವೆ. ನಾನೀಗ ಸುರಕ್ಷಿತವಾಗಿದ್ದೇನೆ. ಚಂಡಿಗಢ ಏರ್​ಪೋರ್ಟ್​ನಲ್ಲಿ ಸೆಕ್ಯುರಿಟಿ ಚೆಕ್​ ಮಾಡುವಾಗ ಈ ಘಟನೆ ನಡೆಯಿತು. ಸೆಕ್ಯುರಿಟಿ ಚೆಕ್​ ಮುಗಿಸಿ ನಾನು ಮುಂದಕ್ಕೆ ಸಾಗುವಾಗ ಪಕ್ಕದ ಕ್ಯಾಬಿನ್​ನಲ್ಲಿ ಇದ್ದ ಸಿಐಎಸ್​ಎಫ್​ ಭದ್ರತಾ ಸಿಬ್ಬಂದಿ ಬಂದು ನನ್ನ ಮುಖಕ್ಕೆ ಹೊಡೆದರು ಹಾಗೂ ನನಗೆ ಬೈಯ್ಯಲು ಶುರುಮಾಡಿದರು. ಯಾಕೆ ಹೀಗೆ ಮಾಡಿದ್ರಿ ಅಂತ ನಾನು ಅವರಿಗೆ ಕೇಳಿದೆ. ರೈತರ ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ಅವರು ಹೇಳಿದರು. ನಾನು ಸುರಕ್ಷಿತವಾಗಿದ್ದೇನೆ. ಆದರೆ ಪಂಜಾಬ್​ನಲ್ಲಿ ಹೆಚ್ಚುತ್ತಿರುವ ಉಗ್ರವಾದ ಹಾಗೂ ಆತಂಕವಾದವನ್ನು ನಾವು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ನನ್ನ ಕಳಕಳಿ ಇರುವುದು. ಧನ್ಯವಾದ’ ಎಂದು ಕಂಗನಾ ವಿಡಿಯೋ ಮೂಲಕ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ