AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾದ ಟೈಟಲ್ ಬದಲಿಸಿದ ವಿವೇಕ್ ಅಗ್ನಿಹೋತ್ರಿ; ‘ದೆಹಲಿ ಫೈಲ್ಸ್’ ಈಗ ‘ಬೆಂಗಾಲ್ ಫೈಲ್ಸ್​’

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಮೊದಲು ‘ದಿ ದೆಹಲಿ ಫೈಲ್ಸ್’ ಎಂಬ ಟೈಟಲ್ ಇತ್ತು. ಈಗ ‘ದಿ ಬೆಂಗಾಲ್ ಫೈಲ್ಸ್’ ಎಂದು ಬದಲಾವಣೆ ಆಗಿದೆ. ಅಂದಹಾಗೆ, ಈ ಸಿನಿಮಾ ಕೂಡ ನೈಜ ಘಟನೆ ಆಧಾರಿತ ಆಗಿರಲಿದೆ. ಆ ಬಗ್ಗೆ ಇಲ್ಲಿದೆ ವಿವರ..

ಹೊಸ ಸಿನಿಮಾದ ಟೈಟಲ್ ಬದಲಿಸಿದ ವಿವೇಕ್ ಅಗ್ನಿಹೋತ್ರಿ; ‘ದೆಹಲಿ ಫೈಲ್ಸ್’ ಈಗ ‘ಬೆಂಗಾಲ್ ಫೈಲ್ಸ್​’
Vivek Agnihotri
ಮದನ್​ ಕುಮಾರ್​
|

Updated on: Jun 10, 2025 | 8:10 PM

Share

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ರಿಯಲ್ ಲೈಫ್ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವ ಮೂಲಕ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಆ ಬಳಿಕ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮಾಡಿದರು. ಆದರೆ ಆ ಸಿನಿಮಾ ಹೆಚ್ಚು ಕಲೆಕ್ಷನ್ ಮಾಡಲಿಲ್ಲ. ಈಗ ವಿವೇಕ್ ಅಗ್ನಿಹೋತ್ರಿ ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾದ ಟೈಟಲ್ ಬದಲಾಯಿಸಿದ್ದಾರೆ. ಈ ಮೊದಲು ‘ದಿ ದೆಹಲಿ ಫೈಲ್ಸ್’ (The Delhi Files) ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ವಿವೇಕ್ ಅಗ್ನಿಹೋತ್ರಿ ಅವರು ಕಾರಣಾಂತರಗಳಿಂದ ತಮ್ಮ ಹೊಸ ಸಿನಿಮಾದ ಶೀರ್ಷಿಕೆಯನ್ನು ‘ದಿ ಬೆಂಗಾಲ್ ಫೈಲ್ಸ್’ (The Bengal Files) ಎಂದು ಬದಲಾಯಿಸಿದ್ದಾರೆ.

ಈ ಬದಲಾವಣೆಗೆ ಕಾರಣ ಏನು ಎಂಬುದನ್ನು ಕೂಡ ವಿವೇಕ್ ಅಗ್ನಿಹೋತ್ರಿ ಅವರು ವಿವರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಜೂನ್ 12ರಂದು ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ಈ ವರ್ಷ ಸೆಪ್ಟೆಂಬರ್ 5ರಂದು ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಲಾಗಿದೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಈ ಸಿನಿಮಾ ಇರುವುದು ಬೆಂಗಾಲ್ ಬಗ್ಗೆ. ಸಿನಿಮಾ ಶುರು ಮಾಡಿದಾಗ ಎರಡು ಪಾರ್ಟ್ ಮಾಡುವ ಆಲೋಚನೆ ಇತ್ತು. ಅದರಲ್ಲಿ ಮೊದಲ ಪಾರ್ಟ್​ಗೆ ದೆಹಲಿ ಫೈಲ್ಸ್ ಎಂದು ಹೆಸರಿಟ್ಟು, ಎರಡನೇ ಪಾರ್ಟ್​ಗೆ ಬೆಂಗಾಲ್ ಚಾಪ್ಟರ್ ಎಂದು ಶೀರ್ಷಿಕೆ ಇಡಲು ತೀರ್ಮಾನಿಸಲಾಗಿತ್ತು. ಆದರೆ ಜನರು ‘ಬೆಂಗಾಲ್ ಫೈಲ್ಸ್’ ಎಂದು ಹೆಸರಿಡಲು ಸೂಚಿಸಿದರು’ ಎಂದಿದ್ದಾರೆ ವಿವೇಕ್ ಅಗ್ನಿಹೋತ್ರಿ.

ಟೈಟಲ್ ಬದಲಾವಣೆ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಸಮೀಕ್ಷೆ ನಡೆಸಿದರು. ಅದರಲ್ಲಿ ಶೇಕಡ 99ರಷ್ಟು ಜನರು ಶೀರ್ಷಿಕೆ ಬದಲಾವಣೆಗೆ ಸೂಚಿಸಿದರು. ಜನರ ಅಭಿಪ್ರಾಯ ಸರಿ ಎನಿಸಿದ್ದರಿಂದ ವಿವೇಕ್ ಅಗ್ನಿಹೋತ್ರಿ ಅವರು ಶೀರ್ಷಿಕೆ ಬದಲಾವಣೆ ಮಾಡಿದರು. ಈ ಪ್ರಾಜೆಕ್ಟ್​ನ ಎರಡನೇ ಪಾರ್ಟ್ ಶೀರ್ಷಿಕೆ ಕೂಡ ಬದಲಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಡಾಕ್ಟರೇಟ್ ಗೌರವ

‘ದಿ ಬೆಂಗಾಲ್ ಫೈಲ್ಸ್’ ಸಿನಿಮಾದಲ್ಲಿ ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ಪಲ್ಲವಿ ಜೋಶಿ, ಗೋವಿಂದ್ ಮಹಾದೇವ್ ಮುಂತಾದವರು ನಟಿಸುತ್ತಿದ್ದಾರೆ. ಅಭಿಷೇಕ್ ಅಗರ್​ವಾಲ್, ಪಲ್ಲವಿ ಜೋಶಿ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ‘ದಿ ಬೆಂಗಾಲ್ ಫೈಲ್ಸ್’ ಶೀರ್ಷಿಕೆಗೆ ‘ರೈಟ್ ಟು ಲೈಫ್’ ಎಂಬ ಟ್ಯಾಗ್ ಲೈನ್ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!