AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ

ಮೂರು ವಾರಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇದಾಗಿದ್ದು, ಈಗ ಆ ಕ್ಲಿಪ್​ ವೈರಲ್​ ಆಗಿದೆ ಎನ್ನಲಾಗುತ್ತಿದೆ. ಈ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on: Mar 26, 2022 | 1:37 PM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files). ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಜಾದೂ ಮಾಡಿದೆ. ಯಾರೂ ಊಹಿಸದಷ್ಟು ಗಳಿಕೆ ಮಾಡುತ್ತಿದೆ ಈ ಸಿನಿಮಾ. ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯೆಯನ್ನು ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿದ್ಧಗೊಂಡಿದೆ. ಕೆಲವರು ವಿವೇಕ್​ ಅವರನ್ನು ತೆಗಳುತ್ತಿದ್ದಾರೆ. ಈ ಮಧ್ಯೆ ಅವರು ವಿವಾದಕ್ಕೆ ಸಿಲುಕಿದ್ದಾರೆ. ಭೋಪಾಲ್​ (Bhopal) ನಗರದ ಬಗ್ಗೆ ಕೀಳಾಗಿ ಮಾತನಾಡಿ ಎಲ್ಲರ ಟೀಕೆಗೆ ಗುರಿಯಾಗಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್​ ನಾಯಕರು ಆಗ್ರಹಿಸಿದ್ದಾರೆ.

ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಶುಕ್ರವಾರ ಭೋಪಾಲ್‌ಗೆ ಭೇಟಿ ನೀಡಿದ್ದಾರೆ ವಿವೇಕ್​ ಅಗ್ನಿಹೋತ್ರಿ. ಅದಕ್ಕೂ ಮೊದಲು ವಿಡಿಯೋ ಒಂದು ವೈರಲ್​ ಆಗಿದೆ. ಮೂರು ವಾರಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇದಾಗಿದ್ದು, ಈಗ ಆ ಕ್ಲಿಪ್​ ವೈರಲ್​ ಆಗಿದೆ ಎನ್ನಲಾಗುತ್ತಿದೆ. ಈ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

‘ನಾನು ಭೋಪಾಲ್‌ನಲ್ಲಿ ಬೆಳೆದಿದ್ದೇನೆ. ಆದರೆ ನಾನು ಭೋಪಾಲಿ ಅಲ್ಲ. ಏಕೆಂದರೆ ಭೋಪಾಲಿ ಎಂಬ ಶಬ್ದ ಭಿನ್ನ ಅರ್ಥವನ್ನು ಹೊಂದಿದೆ. ಯಾರಾದರೂ ಬಂದು ನಾನು ಭೋಪಾಲಿ ಎಂದು ಹೇಳಿದರೆ, ಆ ವ್ಯಕ್ತಿ ಸಲಿಂಗಕಾಮಿ ಎಂದರ್ಥ. ಭೋಪಾಲ್​ನಲ್ಲಿರುವ ಯಾವುದೇ ವ್ಯಕ್ತಿಯ ಬಳಿ ಬೇಕಾದರೂ ನೀವು ಇದನ್ನು ಕೇಳಬಹುದು’ ಎಂದಿದ್ದಾರೆ ವಿವೇಕ್​ ಅಗ್ನಿಹೋತ್ರಿ. ಸದ್ಯ, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್​ ಇದನ್ನು ಖಂಡಿಸಿದ್ದಾರೆ. ‘ವಿವೇಕ್ ಅಗ್ನಿಹೋತ್ರಿ ಅವರೇ ಇದು ನಿಮ್ಮ ವೈಯಕ್ತಿಕ ಅನುಭವವಾಗಿರಬಹುದು. ಭೋಪಾಲ್ ನಿವಾಸಿಗಳು ಹಾಗಿಲ್ಲ. ನಾನು 1977 ರಿಂದ ಭೋಪಾಲ್ ಮತ್ತು ಭೋಪಾಲಿಗಳೊಂದಿಗೆ ಕನೆಕ್ಟ್​ ಆಗಿದ್ದೇನೆ. ಆದರೆ, ನನಗೆ ಆ ರೀತಿಯ ಅನುಭವ ಆಗಿಲ್ಲ. ಈ ರೀತಿ ಅನುಭವ ಆಗಲು ನಿಮ್ಮ ಜತೆ ಯಾರಿದ್ದರು ಎಂಬುದು ಕೂಡ ಮುಖ್ಯವಾಗುತ್ತದೆ’ ಎಂದಿದ್ದಾರೆ ಅವರು.

ಮಾಜಿ ಸಚಿವ ಪಿಸಿ ಶರ್ಮಾ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ‘ಭೋಪಾಲ್ ಜನರ ಮೇಲೆ ಸಲಿಂಗಕಾಮಿ ಎಂಬ ಪದಗಳನ್ನು ಬಳಸಿ ವಿವೇಕ್​ ಅಪರಾಧ ಎಸಗಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ

‘ದಿ ಕಾಶ್ಮೀರ್​ ಫೈಲ್ಸ್​’ ಹೆಸರು ಹೇಳದೇ ಒಂದೇ ಒಂದು ಟ್ವೀಟ್​ ಮಾಡಿ ಟ್ರೋಲ್​ ಆದ ನಟ ಆದಿಲ್​ ಹುಸೇನ್​

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ