‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ

ಮೂರು ವಾರಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇದಾಗಿದ್ದು, ಈಗ ಆ ಕ್ಲಿಪ್​ ವೈರಲ್​ ಆಗಿದೆ ಎನ್ನಲಾಗುತ್ತಿದೆ. ಈ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 26, 2022 | 1:37 PM

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files). ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಜಾದೂ ಮಾಡಿದೆ. ಯಾರೂ ಊಹಿಸದಷ್ಟು ಗಳಿಕೆ ಮಾಡುತ್ತಿದೆ ಈ ಸಿನಿಮಾ. ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯೆಯನ್ನು ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿದ್ಧಗೊಂಡಿದೆ. ಕೆಲವರು ವಿವೇಕ್​ ಅವರನ್ನು ತೆಗಳುತ್ತಿದ್ದಾರೆ. ಈ ಮಧ್ಯೆ ಅವರು ವಿವಾದಕ್ಕೆ ಸಿಲುಕಿದ್ದಾರೆ. ಭೋಪಾಲ್​ (Bhopal) ನಗರದ ಬಗ್ಗೆ ಕೀಳಾಗಿ ಮಾತನಾಡಿ ಎಲ್ಲರ ಟೀಕೆಗೆ ಗುರಿಯಾಗಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಮಧ್ಯಪ್ರದೇಶ ಕಾಂಗ್ರೆಸ್​ ನಾಯಕರು ಆಗ್ರಹಿಸಿದ್ದಾರೆ.

ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಶುಕ್ರವಾರ ಭೋಪಾಲ್‌ಗೆ ಭೇಟಿ ನೀಡಿದ್ದಾರೆ ವಿವೇಕ್​ ಅಗ್ನಿಹೋತ್ರಿ. ಅದಕ್ಕೂ ಮೊದಲು ವಿಡಿಯೋ ಒಂದು ವೈರಲ್​ ಆಗಿದೆ. ಮೂರು ವಾರಗಳ ಹಿಂದೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆ ಇದಾಗಿದ್ದು, ಈಗ ಆ ಕ್ಲಿಪ್​ ವೈರಲ್​ ಆಗಿದೆ ಎನ್ನಲಾಗುತ್ತಿದೆ. ಈ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ.

‘ನಾನು ಭೋಪಾಲ್‌ನಲ್ಲಿ ಬೆಳೆದಿದ್ದೇನೆ. ಆದರೆ ನಾನು ಭೋಪಾಲಿ ಅಲ್ಲ. ಏಕೆಂದರೆ ಭೋಪಾಲಿ ಎಂಬ ಶಬ್ದ ಭಿನ್ನ ಅರ್ಥವನ್ನು ಹೊಂದಿದೆ. ಯಾರಾದರೂ ಬಂದು ನಾನು ಭೋಪಾಲಿ ಎಂದು ಹೇಳಿದರೆ, ಆ ವ್ಯಕ್ತಿ ಸಲಿಂಗಕಾಮಿ ಎಂದರ್ಥ. ಭೋಪಾಲ್​ನಲ್ಲಿರುವ ಯಾವುದೇ ವ್ಯಕ್ತಿಯ ಬಳಿ ಬೇಕಾದರೂ ನೀವು ಇದನ್ನು ಕೇಳಬಹುದು’ ಎಂದಿದ್ದಾರೆ ವಿವೇಕ್​ ಅಗ್ನಿಹೋತ್ರಿ. ಸದ್ಯ, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್​ ಇದನ್ನು ಖಂಡಿಸಿದ್ದಾರೆ. ‘ವಿವೇಕ್ ಅಗ್ನಿಹೋತ್ರಿ ಅವರೇ ಇದು ನಿಮ್ಮ ವೈಯಕ್ತಿಕ ಅನುಭವವಾಗಿರಬಹುದು. ಭೋಪಾಲ್ ನಿವಾಸಿಗಳು ಹಾಗಿಲ್ಲ. ನಾನು 1977 ರಿಂದ ಭೋಪಾಲ್ ಮತ್ತು ಭೋಪಾಲಿಗಳೊಂದಿಗೆ ಕನೆಕ್ಟ್​ ಆಗಿದ್ದೇನೆ. ಆದರೆ, ನನಗೆ ಆ ರೀತಿಯ ಅನುಭವ ಆಗಿಲ್ಲ. ಈ ರೀತಿ ಅನುಭವ ಆಗಲು ನಿಮ್ಮ ಜತೆ ಯಾರಿದ್ದರು ಎಂಬುದು ಕೂಡ ಮುಖ್ಯವಾಗುತ್ತದೆ’ ಎಂದಿದ್ದಾರೆ ಅವರು.

ಮಾಜಿ ಸಚಿವ ಪಿಸಿ ಶರ್ಮಾ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ‘ಭೋಪಾಲ್ ಜನರ ಮೇಲೆ ಸಲಿಂಗಕಾಮಿ ಎಂಬ ಪದಗಳನ್ನು ಬಳಸಿ ವಿವೇಕ್​ ಅಪರಾಧ ಎಸಗಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ

‘ದಿ ಕಾಶ್ಮೀರ್​ ಫೈಲ್ಸ್​’ ಹೆಸರು ಹೇಳದೇ ಒಂದೇ ಒಂದು ಟ್ವೀಟ್​ ಮಾಡಿ ಟ್ರೋಲ್​ ಆದ ನಟ ಆದಿಲ್​ ಹುಸೇನ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ