Vivek Agnihotri: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?

Aishwarya Rai Bachchan: ವಿವೇಕ್​ ಅಗ್ನಿಹೋತ್ರಿ ಅವರು ತಮಗೆ ಸಂಬಂಧ ಇಲ್ಲದ ಅನೇಕ ವಿಚಾರಗಳ ಬಗ್ಗೆ ಟ್ವೀಟ್​ ಮಾಡುತ್ತಾರೆ. ಈಗ ಅವರು ಐಶ್ವರ್ಯಾ ರೈ ಬಚ್ಚನ್​ ಬಗ್ಗೆ ಟೀಕೆ ಮಾಡಿದ್ದಾರೆ.

Vivek Agnihotri: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?
ಐಶ್ವರ್ಯಾ ರೈ ಬಚ್ಚನ್, ವಿವೇಕ್ ಅಗ್ನಿಹೋತ್ರಿ
Follow us
|

Updated on: May 20, 2023 | 7:15 AM

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರು 2023ರ ಕಾನ್​ ಚಿತ್ರೋತ್ಸವಲ್ಲಿ (Cannes Film Festival 2023) ಪಾಲ್ಗೊಂಡಿದ್ದಾರೆ. ಮೇ 16ರಿಂದ ಮೇ 27ರವರೆಗೆ ನಡೆಯುವ ಈ ಸಿನಿಮೋತ್ಸವದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ. ಇದರಲ್ಲಿನ ರೆಡ್​ ಕಾರ್ಪೆಟ್​ ಪ್ರಮುಖ ಆಕರ್ಷಣೆ. ವಿವಿಧ ದೇಶದ ಸೆಲೆಬ್ರಿಟಿಗಳು ಬಣ್ಣ ಬಣ್ಣದ ಉಡುಗೆ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಾರೆ. ಅದೇ ರೀತಿ ಐಶ್ವರ್ಯಾ ರೈ ಬಚ್ಚನ್​ ಕೂಡ ತಮ್ಮಿಷ್ಟದ ಕಾಸ್ಟ್ಯೂಮ್​ ಧರಿಸಿ ಪೋಸ್​ ನೀಡಿದ್ದಾರೆ. ಆದರೆ ಅವರ ಉದ್ದದ ಬಟ್ಟೆಯನ್ನು ನಿಭಾಯಿಸಲು ಓರ್ವ ವ್ಯಕ್ತಿಯನ್ನು ಅವರು ನೇಮಿಸಿಕೊಂಡಿದ್ದರು. ಆ ರೀತಿಯ ಸಹಾಯಕರಿಗೆ ‘ಕಾಸ್ಟ್ಯೂಮ್ ಸ್ಲೇವ್ಸ್’ ಎಂದು ಕರೆಯಲಾಗುತ್ತದೆ. ಇಂಥ ಪದ್ಧತಿ ಸರಿಯಲ್ಲ ಎಂದು ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಟೀಕೆ ಮಾಡಿದ್ದಾರೆ. ಅಲ್ಲದೇ ಇದನ್ನು ಮೂರ್ಖತನ ಎಂದು ಅವರು ಕರೆದಿದ್ದಾರೆ. ಇದು ಐಶ್ವರ್ಯಾ ರೈ ಬಚ್ಚನ್​ ಅವರ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ವಿವೇಕ್ ಅಗ್ನಿಹೋತ್ರಿಯ ವೈರಲ್​ ಟ್ವೀಟ್​:

‘ಕಾಸ್ಟ್ಯೂಮ್​ ಗುಲಾಮರು’ ಎಂಬ ಪದವನ್ನು ನೀವು ಕೇಳಿದ್ದೀರಾ? ಅವರು ಹೆಚ್ಚಾಗಿ ಹುಡುಗಿಯರಾಗಿರುತ್ತಾರೆ. ನೀವು ಅವರನ್ನು ಈಗ ಭಾರತದಲ್ಲಿಯೂ ಸಹ ಪ್ರತಿಯೊಬ್ಬ ಮಹಿಳಾ ಸೆಲೆಬ್ರಿಟಿಗಳ ಜೊತೆ ನೋಡಬಹುದು. ಹೊಂದಿಕೆ ಆಗದಂತಹ ಫ್ಯಾಷನ್‌ಗಾಗಿ ನಾವು ಏಕೆ ಮೂರ್ಖರಾಗಿದ್ದೇವೆ ಮತ್ತು ದಬ್ಬಾಳಿಕೆ ಮಾಡುತ್ತಿದ್ದೇವೆ?’ ಎಂದು ವಿವೇಕ್ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ನೆಟ್ಟಿಗರು ಐಶ್ವರ್ಯಾ ರೈ ಬಚ್ಚನ್​ ಪರವಾಗಿ ಬ್ಯಾಟ್​ ಬೀಸಿದ್ದಾರೆ. ‘ನಿಮ್ಮನ್ನು ಕಾನ್​ ಚಿತ್ರೋತ್ಸವಕ್ಕೆ ಕರೆದಿಲ್ಲ ಅಂತ ಹೊಟ್ಟೆ ಕಿಚ್ಚು ಆಗುತ್ತಿದೆಯೇ’ ಎಂದು ವಿವೇಕ್​ ಅಗ್ನಿಹೋತ್ರಿಗೆ ಜನರು ಪ್ರಶ್ನಿಸಿದ್ದಾರೆ. ತಮಗೆ ಸಂಬಂಧ ಇಲ್ಲದ ಅನೇಕ ವಿಚಾರಗಳ ಬಗ್ಗೆ ವಿವೇಕ್ ಅಗ್ನಿಹೋತ್ರಿ ಟ್ವೀಟ್​ ಮಾಡುತ್ತಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಹಿಟ್​ ಆದ ಬಳಿಕ ಅವರಿಗೆ ಖ್ಯಾತಿ ಹೆಚ್ಚಿತು.

ದೆಹಲಿ ಮೆಟ್ರೋದಲ್ಲಿ ಪೊಲೀಸ್​ ನಿಯೋಜನೆ ಮಾಡುವ ಬಗ್ಗೆಯೂ ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು. ಕೆಲವೇ ದಿನಗಳ ಹಿಂದೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ ಕೋಚ್‌ಗಳ ಒಳಗೆ ಪೊಲೀಸ ಗಸ್ತು ಇರುತ್ತದೆ ಎಂದು ವರದಿಯಾಗಿತ್ತು. ಆ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದರು. ‘ಇದು ತುಂಬಾ ಮೂರ್ಖತನ’ ಎಂದು ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ