Vivek Agnihotri: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?

Aishwarya Rai Bachchan: ವಿವೇಕ್​ ಅಗ್ನಿಹೋತ್ರಿ ಅವರು ತಮಗೆ ಸಂಬಂಧ ಇಲ್ಲದ ಅನೇಕ ವಿಚಾರಗಳ ಬಗ್ಗೆ ಟ್ವೀಟ್​ ಮಾಡುತ್ತಾರೆ. ಈಗ ಅವರು ಐಶ್ವರ್ಯಾ ರೈ ಬಚ್ಚನ್​ ಬಗ್ಗೆ ಟೀಕೆ ಮಾಡಿದ್ದಾರೆ.

Vivek Agnihotri: ಐಶ್ವರ್ಯಾ ರೈ ವರ್ತನೆ ಕಂಡು ಸ್ಟುಪಿಡ್​ ಎಂದ ವಿವೇಕ್​ ಅಗ್ನಿಹೋತ್ರಿ; ನಟಿಯಿಂದ ಆದ ತಪ್ಪೇನು?
ಐಶ್ವರ್ಯಾ ರೈ ಬಚ್ಚನ್, ವಿವೇಕ್ ಅಗ್ನಿಹೋತ್ರಿ

Updated on: May 20, 2023 | 7:15 AM

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರು 2023ರ ಕಾನ್​ ಚಿತ್ರೋತ್ಸವಲ್ಲಿ (Cannes Film Festival 2023) ಪಾಲ್ಗೊಂಡಿದ್ದಾರೆ. ಮೇ 16ರಿಂದ ಮೇ 27ರವರೆಗೆ ನಡೆಯುವ ಈ ಸಿನಿಮೋತ್ಸವದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ. ಇದರಲ್ಲಿನ ರೆಡ್​ ಕಾರ್ಪೆಟ್​ ಪ್ರಮುಖ ಆಕರ್ಷಣೆ. ವಿವಿಧ ದೇಶದ ಸೆಲೆಬ್ರಿಟಿಗಳು ಬಣ್ಣ ಬಣ್ಣದ ಉಡುಗೆ ಧರಿಸಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುತ್ತಾರೆ. ಅದೇ ರೀತಿ ಐಶ್ವರ್ಯಾ ರೈ ಬಚ್ಚನ್​ ಕೂಡ ತಮ್ಮಿಷ್ಟದ ಕಾಸ್ಟ್ಯೂಮ್​ ಧರಿಸಿ ಪೋಸ್​ ನೀಡಿದ್ದಾರೆ. ಆದರೆ ಅವರ ಉದ್ದದ ಬಟ್ಟೆಯನ್ನು ನಿಭಾಯಿಸಲು ಓರ್ವ ವ್ಯಕ್ತಿಯನ್ನು ಅವರು ನೇಮಿಸಿಕೊಂಡಿದ್ದರು. ಆ ರೀತಿಯ ಸಹಾಯಕರಿಗೆ ‘ಕಾಸ್ಟ್ಯೂಮ್ ಸ್ಲೇವ್ಸ್’ ಎಂದು ಕರೆಯಲಾಗುತ್ತದೆ. ಇಂಥ ಪದ್ಧತಿ ಸರಿಯಲ್ಲ ಎಂದು ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಟೀಕೆ ಮಾಡಿದ್ದಾರೆ. ಅಲ್ಲದೇ ಇದನ್ನು ಮೂರ್ಖತನ ಎಂದು ಅವರು ಕರೆದಿದ್ದಾರೆ. ಇದು ಐಶ್ವರ್ಯಾ ರೈ ಬಚ್ಚನ್​ ಅವರ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ವಿವೇಕ್ ಅಗ್ನಿಹೋತ್ರಿಯ ವೈರಲ್​ ಟ್ವೀಟ್​:

‘ಕಾಸ್ಟ್ಯೂಮ್​ ಗುಲಾಮರು’ ಎಂಬ ಪದವನ್ನು ನೀವು ಕೇಳಿದ್ದೀರಾ? ಅವರು ಹೆಚ್ಚಾಗಿ ಹುಡುಗಿಯರಾಗಿರುತ್ತಾರೆ. ನೀವು ಅವರನ್ನು ಈಗ ಭಾರತದಲ್ಲಿಯೂ ಸಹ ಪ್ರತಿಯೊಬ್ಬ ಮಹಿಳಾ ಸೆಲೆಬ್ರಿಟಿಗಳ ಜೊತೆ ನೋಡಬಹುದು. ಹೊಂದಿಕೆ ಆಗದಂತಹ ಫ್ಯಾಷನ್‌ಗಾಗಿ ನಾವು ಏಕೆ ಮೂರ್ಖರಾಗಿದ್ದೇವೆ ಮತ್ತು ದಬ್ಬಾಳಿಕೆ ಮಾಡುತ್ತಿದ್ದೇವೆ?’ ಎಂದು ವಿವೇಕ್ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ನೆಟ್ಟಿಗರು ಐಶ್ವರ್ಯಾ ರೈ ಬಚ್ಚನ್​ ಪರವಾಗಿ ಬ್ಯಾಟ್​ ಬೀಸಿದ್ದಾರೆ. ‘ನಿಮ್ಮನ್ನು ಕಾನ್​ ಚಿತ್ರೋತ್ಸವಕ್ಕೆ ಕರೆದಿಲ್ಲ ಅಂತ ಹೊಟ್ಟೆ ಕಿಚ್ಚು ಆಗುತ್ತಿದೆಯೇ’ ಎಂದು ವಿವೇಕ್​ ಅಗ್ನಿಹೋತ್ರಿಗೆ ಜನರು ಪ್ರಶ್ನಿಸಿದ್ದಾರೆ. ತಮಗೆ ಸಂಬಂಧ ಇಲ್ಲದ ಅನೇಕ ವಿಚಾರಗಳ ಬಗ್ಗೆ ವಿವೇಕ್ ಅಗ್ನಿಹೋತ್ರಿ ಟ್ವೀಟ್​ ಮಾಡುತ್ತಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಹಿಟ್​ ಆದ ಬಳಿಕ ಅವರಿಗೆ ಖ್ಯಾತಿ ಹೆಚ್ಚಿತು.

ದೆಹಲಿ ಮೆಟ್ರೋದಲ್ಲಿ ಪೊಲೀಸ್​ ನಿಯೋಜನೆ ಮಾಡುವ ಬಗ್ಗೆಯೂ ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು. ಕೆಲವೇ ದಿನಗಳ ಹಿಂದೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ ಕೋಚ್‌ಗಳ ಒಳಗೆ ಪೊಲೀಸ ಗಸ್ತು ಇರುತ್ತದೆ ಎಂದು ವರದಿಯಾಗಿತ್ತು. ಆ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದರು. ‘ಇದು ತುಂಬಾ ಮೂರ್ಖತನ’ ಎಂದು ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us