AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ’ ಎಂದಿದ್ದರು.

‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ
ವಿವೇಕ್​-ನಡಾವ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 29, 2022 | 11:08 AM

Share

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ (The Kashmir Files) ಚಿತ್ರಕ್ಕೆ ಹಿನ್ನಡೆ ಆಗಿತ್ತು. ಈ ಚಿತ್ರದ ಬಗ್ಗೆ ಇಸ್ರೇಲ್ ನಿರ್ಮಾಪಕ ಹಾಗೂ ತೀರ್ಪುಗಾರರ ಮುಖ್ಯಸ್ಥ ನಡಾವ್ ಲಪಿಡ್ ಅವರು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ಅಪಸ್ವರ ತೆಗೆದಿದ್ದರು. ಇದೊಂದು ಕೆಟ್ಟ ಸಿನಿಮಾ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿವೇಕ್ ಅಗ್ನಿಹೋತ್ರಿ ಅವರು ಇದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಈ ವಿವಾದದಿಂದ ದೂರ ಸರಿಯುವ ಪ್ರಯತ್ನ ಮಾಡಿದೆ.

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ. ಈ ಚಿತ್ರ ನೋಡಿ ನಾವು ವಿಚಲಿತರಾಗಿದ್ದೇವೆ. ಈ ವೇದಿಕೆಯಲ್ಲಿ ನಿಮ್ಮೊಂದಿಗೆ ಈ ವಿಚಾರ ತಿಳಿಸಲು ನನಗೇನು ತೊಂದರೆ ಇಲ್ಲ. ಸಿನಿಮೋತ್ಸವದಲ್ಲಿ ನೀಡಿದ ವಿಮರ್ಶಾತ್ಮಕ ಚರ್ಚೆಯನ್ನು ನಾವು ಸ್ವೀಕರಿಸಬಹುದು’ ಎಂದಿದ್ದರು.

ಈ ಹೇಳಿಕೆ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಅಸಮಾಧಾನಗೊಂಡಂತಿದೆ. ಅವರು ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ಶುಭ ಮುಂಜಾನೆ. ಸತ್ಯ ಎನ್ನುವುದು ಅತ್ಯಂತ ಕಠೋರ ವಿಚಾರ. ಅದು ಜನರಿಂದ ಸುಳ್ಳನ್ನು ಹೇಳಿಸುತ್ತದೆ’ ಎಂದಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇದು ನಡಾವ್ ಅವರ ಹೇಳಿಕೆಗೆ ನೀಡಿದ ತಿರುಗೇಟು ಎಂದು ಬಣ್ಣಿಸಲಾಗುತ್ತಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಮಂಡಳಿ ಸ್ಪಷ್ಟನೆ

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ನಡಾವ್ ನೀಡಿದ ಹೇಳಿಕೆ ಕುರಿತು ಪರ ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಇದನ್ನು ಒಪ್ಪಿದರೆ, ಇನ್ನೂ ಕೆಲವರು ಕೊಂಕು ತೆಗೆದಿದ್ದಾರೆ. ಪ್ರತಿಷ್ಠಿತ ವೇದಿಕೆ ಮೇಲೆ ನಡಾವ್ ಅವರು ಈ ರೀತಿ ಹೇಳಬಾರದಿತ್ತು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಸ್ಪಷ್ಟನೆ ನೀಡಿದೆ. ‘ಈ ಹೇಳಿಕೆಗೂ ಮಂಡಳಿಗೂ ಯಾವುದೇ ಸಂಬಂಧ ಇಲ್ಲ. ಇದು ಅವರ ಅಭಿಪ್ರಾಯ’ ಎಂದು ಹೇಳಿದೆ. ಈ ಮೂಲಕ ವಿವಾದದಿಂದ ದೂರ ಉಳಿಯುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್

ಸಿನಿಮಾದಲ್ಲೇನಿದೆ?

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಥೆ ಹೇಳಲಾಗಿದೆ. 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಈ ಸಿನಿಮಾ ಇದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ