AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ’ ಎಂದಿದ್ದರು.

‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ
ವಿವೇಕ್​-ನಡಾವ್
TV9 Web
| Edited By: |

Updated on: Nov 29, 2022 | 11:08 AM

Share

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ (The Kashmir Files) ಚಿತ್ರಕ್ಕೆ ಹಿನ್ನಡೆ ಆಗಿತ್ತು. ಈ ಚಿತ್ರದ ಬಗ್ಗೆ ಇಸ್ರೇಲ್ ನಿರ್ಮಾಪಕ ಹಾಗೂ ತೀರ್ಪುಗಾರರ ಮುಖ್ಯಸ್ಥ ನಡಾವ್ ಲಪಿಡ್ ಅವರು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ಅಪಸ್ವರ ತೆಗೆದಿದ್ದರು. ಇದೊಂದು ಕೆಟ್ಟ ಸಿನಿಮಾ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿವೇಕ್ ಅಗ್ನಿಹೋತ್ರಿ ಅವರು ಇದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಈ ವಿವಾದದಿಂದ ದೂರ ಸರಿಯುವ ಪ್ರಯತ್ನ ಮಾಡಿದೆ.

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ. ಈ ಚಿತ್ರ ನೋಡಿ ನಾವು ವಿಚಲಿತರಾಗಿದ್ದೇವೆ. ಈ ವೇದಿಕೆಯಲ್ಲಿ ನಿಮ್ಮೊಂದಿಗೆ ಈ ವಿಚಾರ ತಿಳಿಸಲು ನನಗೇನು ತೊಂದರೆ ಇಲ್ಲ. ಸಿನಿಮೋತ್ಸವದಲ್ಲಿ ನೀಡಿದ ವಿಮರ್ಶಾತ್ಮಕ ಚರ್ಚೆಯನ್ನು ನಾವು ಸ್ವೀಕರಿಸಬಹುದು’ ಎಂದಿದ್ದರು.

ಈ ಹೇಳಿಕೆ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಅಸಮಾಧಾನಗೊಂಡಂತಿದೆ. ಅವರು ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ಶುಭ ಮುಂಜಾನೆ. ಸತ್ಯ ಎನ್ನುವುದು ಅತ್ಯಂತ ಕಠೋರ ವಿಚಾರ. ಅದು ಜನರಿಂದ ಸುಳ್ಳನ್ನು ಹೇಳಿಸುತ್ತದೆ’ ಎಂದಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇದು ನಡಾವ್ ಅವರ ಹೇಳಿಕೆಗೆ ನೀಡಿದ ತಿರುಗೇಟು ಎಂದು ಬಣ್ಣಿಸಲಾಗುತ್ತಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಮಂಡಳಿ ಸ್ಪಷ್ಟನೆ

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ನಡಾವ್ ನೀಡಿದ ಹೇಳಿಕೆ ಕುರಿತು ಪರ ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಇದನ್ನು ಒಪ್ಪಿದರೆ, ಇನ್ನೂ ಕೆಲವರು ಕೊಂಕು ತೆಗೆದಿದ್ದಾರೆ. ಪ್ರತಿಷ್ಠಿತ ವೇದಿಕೆ ಮೇಲೆ ನಡಾವ್ ಅವರು ಈ ರೀತಿ ಹೇಳಬಾರದಿತ್ತು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಸ್ಪಷ್ಟನೆ ನೀಡಿದೆ. ‘ಈ ಹೇಳಿಕೆಗೂ ಮಂಡಳಿಗೂ ಯಾವುದೇ ಸಂಬಂಧ ಇಲ್ಲ. ಇದು ಅವರ ಅಭಿಪ್ರಾಯ’ ಎಂದು ಹೇಳಿದೆ. ಈ ಮೂಲಕ ವಿವಾದದಿಂದ ದೂರ ಉಳಿಯುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್

ಸಿನಿಮಾದಲ್ಲೇನಿದೆ?

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಥೆ ಹೇಳಲಾಗಿದೆ. 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಈ ಸಿನಿಮಾ ಇದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?