AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ಏಕಾಏಕಿ ದೀಪಿಕಾ ಪಡುಕೋಣೆಗೆ ಮೆಚ್ಚುಗೆ ಸೂಚಿಸಿದ ವಿವೇಕ್​ ಅಗ್ನಿಹೋತ್ರಿ; ಶುರುವಾಯ್ತು ಟ್ರೋಲ್​

Deepika Padukone | Oscar Awards: ಬಾಲಿವುಡ್​ನಲ್ಲಿ 2 ಬಣಗಳಿವೆ. ದೀಪಿಕಾ ಪಡುಕೋಣೆ, ಶಾರುಖ್​ ಖಾನ್​ ಮುಂತಾದವರನ್ನು ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​ ಮೊದಲಾದ ಸೆಲೆಬ್ರಿಟಿಗಳು ವಿರೋಧಿಸುತ್ತಲೇ ಬಂದಿದ್ದಾರೆ.

Vivek Agnihotri: ಏಕಾಏಕಿ ದೀಪಿಕಾ ಪಡುಕೋಣೆಗೆ ಮೆಚ್ಚುಗೆ ಸೂಚಿಸಿದ ವಿವೇಕ್​ ಅಗ್ನಿಹೋತ್ರಿ; ಶುರುವಾಯ್ತು ಟ್ರೋಲ್​
ವಿವೇಕ್ ಅಗ್ನಿಹೋತ್ರಿ, ದೀಪಿಕಾ ಪಡುಕೋಣೆ
Follow us
ಮದನ್​ ಕುಮಾರ್​
|

Updated on:Mar 05, 2023 | 12:09 PM

95ನೇ ಅಕಾಡೆಮಿ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಆಸ್ಕರ್​ ಪ್ರಶಸ್ತಿ ಗೆದ್ದವರಿಗೆ ದೀಪಿಕಾ ಪಡುಕೋಣೆ (Deepika Padukone) ಅವರು ಟ್ರೋಫಿ ನೀಡಲಿದ್ದಾರೆ. ಮಾರ್ಚ್​​ 12ರಂದು ಲಾಸ್​ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್​ ಪ್ರಶಸ್ತಿ (Oscar Awards) ಪ್ರದಾನ ಸಮಾರಂಭ ನಡೆಯಲಿದೆ. ಹಲವು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಆ ಪೈಕಿ ಒಂದು ವಿಭಾಗದಲ್ಲಿ ಪ್ರಶಸ್ತಿ ಗೆದ್ದವರಿಗೆ ದೀಪಿಕಾ ಪಡುಕೋಣೆ ಅವರು ಟ್ರೋಫಿ ಹಸ್ತಾಂತರಿಸಲಿದ್ದಾರೆ. ಹಾಗಾಗಿ ದೀಪಿಕಾ ಅವರನ್ನು ವಿವೇಕ್ ಅಗ್ನಿಹೋತ್ರಿ ಹೊಗಳಿದ್ದಾರೆ. ಆದರೆ ಇದೇ ಅಗ್ನಿಹೋತ್ರಿ ಅವರು ಈ ಹಿಂದೆ ‘ಬೇಷರಂ ರಂಗ್​​..’ ಹಾಡು ರಿಲೀಸ್​ ಆಗಿದ್ದಾಗ ವಿರೋಧ ವ್ಯಕ್ತಪಡಿಸಿದ್ದರು. ದೀಪಿಕಾ ಬಗ್ಗೆ ಈ ರೀತಿ ದ್ವಂದ್ವ ನಿಲುವು ತೋರುತ್ತಿರುವುದಕ್ಕೆ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರನ್ನು ನೆಟ್ಟಿಗರು ಟೀಕೆ ಮಾಡಿದ್ದಾರೆ.

ಬಾಲಿವುಡ್​ನಲ್ಲಿ ಎರಡು ಬಣಗಳಿವೆ. ದೀಪಿಕಾ ಪಡುಕೋಣೆ, ಶಾರುಖ್​ ಖಾನ್​ ಮುಂತಾದವರನ್ನು ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​ ಮೊದಲಾದ ಸೆಲೆಬ್ರಿಟಿಗಳು ವಿರೋಧಿಸುತ್ತಲೇ ಬಂದಿದ್ದಾರೆ. ಆದರೆ ಏಕಾಏಕಿ ದೀಪಿಕಾ ಅವರನ್ನು ವಿವೇಕ್​ ಅಗ್ನಿಹೋತ್ರಿ ಹೊಗಳಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಹಾಗಾಗಿ ಅವರನ್ನು ಟ್ರೋಲ್​ ಮಾಡಲಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಇದನ್ನೂ ಓದಿ: ‘ಅರ್ಬನ್ ನಕ್ಸಲ್ಸ್​ಗೆ ನಿದ್ದೆ ಬರುತ್ತಿಲ್ಲ’; ‘ಬೊಗಳುತ್ತಾರೆ, ಕಚ್ಚಲ್ಲ’ ಎಂಬ ಪ್ರಕಾಶ್​ ರಾಜ್ ಹೇಳಿಕೆಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ

‘ನಿಮ್ಮ ಸಹಮತ ಇಲ್ಲದೇ ಇದ್ದಾಗ ಯಾರನ್ನಾದರೂ ಟೀಕಿಸುವುದು ಮತ್ತು ಅವರ ಕೆಲಸ ಇಷ್ಟ ಆದಾಗ ಮೆಚ್ಚುಗೆ ಸೂಚಿಸುವುದನ್ನು ಈ ಹೊಸ ಯುಗದಲ್ಲಿ ದ್ವಂದ್ವ ನೀತಿ ಎಂದು ಕರೆಯುತ್ತಾರೆ. ನಾನು ಅದನ್ನು ನ್ಯಾಯಸಮ್ಮತವಾದದ್ದು ಎಂದುಕೊಂಡಿದ್ದೇನೆ. ಭಾರತದ ಹೆಸರಿಗೆ ಗೌರವ ತರುವ ಎಲ್ಲರೂ ಮೆಚ್ಚುಗೆಗೆ ಅರ್ಹರು’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಮೋದಿ ಸೂಚನೆಯನ್ನು ಟೀಕಿಸಿದ ಅನುರಾಗ್ ಕಶ್ಯಪ್​ಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ

ಅನುಪಮ್​ ಖೇರ್​ ಕೂಡ ದೀಪಿಕಾ ಪಡುಕೋಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಪ್ರೀತಿಯ ದೀಪಿಕಾ ಪಡುಕೋಣೆ.. ಈ ವರ್ಷ ಆಸ್ಕರ್​ ಪ್ರೆಸೆಂಟರ್​ಗಳಲ್ಲಿ ನೀವೂ ಒಬ್ಬರಾಗಿರುವುದಕ್ಕೆ ಅಭಿನಂದನೆಗಳು. ನೀವು ಸಾಧನೆಯ ಪ್ರತಿ ಮೆಟ್ಟಿಲನ್ನು ಏರಿದಾಗ ನಿಮ್ಮ ಪಯಣದಲ್ಲಿ ನಾವೂ ಭಾಗಿ ಆಗಿದ್ದೇವೆ ಎಂಬ ಹೆಮ್ಮೆ ನಮಗಿದೆ’ ಎಂದು ಅನುಪಮ್​ ಖೇರ್​ ಟ್ವೀಟ್​ ಮಾಡಿದ್ದಾರೆ.

ಈ ಹಿಂದೆ ನಟಿ ಪ್ರಿಯಾಂಕಾ ಚೋಪ್ರಾ ಅವರು ಆಸ್ಕರ್ ಪ್ರಶಸ್ತಿ ಪ್ರದಾನ ಮಾಡಿದ್ದರು. ಈಗ ದೀಪಿಕಾ ಪಡುಕೋಣೆ ಅವರಿಗೆ ಆ ಅವಕಾಶ ಸಿಗುತ್ತಿದೆ. ತಮಗೆ ಈ ಚಾನ್ಸ್​ ಸಿಕ್ಕಿದೆ ಎಂಬುದನ್ನು ದೀಪಿಕಾ ಪಡುಕೋಣೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ಅದಕ್ಕೆ ಸೆಲೆಬ್ರಿಟಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ದೀಪಿಕಾ ಪತಿ ರಣವೀರ್​ ಸಿಂಗ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಟಿ ನೇಹಾ ಧೂಪಿಯಾ ಅವರು, ‘ನಿಮ್ಮನ್ನು ನೋಡಲು ಕಾಯುತ್ತಿದ್ದೇನೆ ದೀಪು’ ಎಂದು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:09 pm, Sun, 5 March 23

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ