AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Vaccine War: ವಿವೇಕ್ ಅಗ್ನಿಹೋತ್ರಿ ಹೊಸ ಚಿತ್ರದ ಕೆಲಸ ಶುರು; ಇದು 2024ರ ಚುನಾವಣೆಗೆ ಪ್ರಚಾರ ಎಂದ ನೆಟ್ಟಿಗರು

Vivek Agnihotri Next Movie: ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ‘ವ್ಯಾಕ್ಸಿನ್​ ವಾರ್​’ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದರ ಶೂಟಿಂಗ್​ ಆರಂಭಕ್ಕೂ ಮುನ್ನವೇ ಕೆಲವರಿಂದ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

The Vaccine War: ವಿವೇಕ್ ಅಗ್ನಿಹೋತ್ರಿ ಹೊಸ ಚಿತ್ರದ ಕೆಲಸ ಶುರು; ಇದು 2024ರ ಚುನಾವಣೆಗೆ ಪ್ರಚಾರ ಎಂದ ನೆಟ್ಟಿಗರು
ವಿವೇಕ್ ಅಗ್ನಿಹೋತ್ರಿ, ದಿ ವ್ಯಾಕ್ಸಿನ್ ವಾರ್
TV9 Web
| Updated By: ಮದನ್​ ಕುಮಾರ್​|

Updated on: Dec 12, 2022 | 9:14 AM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರ ಪ್ರತಿ ನಡೆಯೂ ಈಗ ಚರ್ಚೆಗೆ ಒಳಗಾಗುತ್ತಿದೆ. ಇತ್ತೀಚೆಗೆ ನಡೆದ ಗೋವಾ ಸಿನಿಮೋತ್ಸವದಲ್ಲಿ ಅವರ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಬಗ್ಗೆ ಪರ-ವಿರೋಧದ ಮಾತುಗಳು ಕೇಳಿಬಂದಿದ್ದವು. ಸಿನಿಮೋತ್ಸವದ ಜ್ಯೂರಿ ಕಮಿಟಿಯ ಅಧ್ಯಕ್ಷರಾಗಿದ್ದ ನಡಾವ್​ ಲಪಿಡ್​ ಅವರು ಈ ಚಿತ್ರವನ್ನು ಕಟುವಾಗಿ ಟೀಕಿಸಿದ್ದರು. ಆ ವಿಚಾರವನ್ನೆಲ್ಲ ಬದಿಗಿಟ್ಟು ವಿವೇಕ್​ ಅಗ್ನಿಹೋತ್ರಿ ಅವರು ಹೊಸ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. ಈ ಮೊದಲೇ ತಿಳಿಸಿರುವಂತೆ ಈ ಚಿತ್ರಕ್ಕೆ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಎಂದು ಹೆಸರು ಇಡಲಾಗಿತ್ತು. 2020ರಲ್ಲಿ ಕೊರೊನಾ ವೈರಸ್​ ಹಾವಳಿ ಎದುರಾದಾಗ ಅದರ ವಿರುದ್ಧ ಭಾರತ ಹೇಗೆ ಹೋರಾಟ ನಡೆಸಿತು ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲು ವಿವೇಕ್​ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ. ಅದರ ಬೆನ್ನಲ್ಲೇ ಕೆಲವು ನೆಟ್ಟಿಗರು ಟ್ರೋಲ್ ಮಾಡಲು ಆರಂಭಿಸಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ಅವರು ಮೋದಿ ಸರ್ಕಾರದ ಪರವಾಗಿ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಈಗ ಅವರು ವ್ಯಾಕ್ಸಿನ್​ ಕುರಿತು ಮಾಡಲು ಹೊರಟಿರುವ ಚಿತ್ರ ಕೂಡ ಮೋದಿ ಸರ್ಕಾರವನ್ನು ಹೊಗಳುವ ಪ್ರಚಾರದ ಸಿನಿಮಾ ಆಗಲಿದೆ ಎಂದು ಅನೇಕರು ಕಾಲೆಳೆಯುತ್ತಿದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಈ ಚಿತ್ರವನ್ನು ಮಾಡಲಾಗುತ್ತಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಇದನ್ನೂ ಓದಿ: Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ಶೂಟಿಂಗ್​ಗೆ ಭರದ ಸಿದ್ಧತೆ ನಡೆದಿದೆ.​ ಇದನ್ನು ತಿಳಿಸುವ ಸಲುವಾಗಿ ವಿವೇಕ್​ ಅಗ್ನಿಹೋತ್ರಿ ಅವರು ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಸಿನಿಮಾ ಮಾಡುತ್ತಿರುವುದಕ್ಕೆ ‘ಇಡಿ ಮತ್ತು ಐಟಿ ದಾಳಿಯಿಂದ ತಪ್ಪಿಸಿಕೊಂಡಿದ್ದೀರಿ’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

‘ಮುಂದಿನ ಬಾರಿ ನಡೆಯಲಿರುವ ಸಿನಿಮೋತ್ಸವಕ್ಕೆ ನಡಾವ್​ ಲಪಿಡ್​ ಅವರನ್ನು ಕರೆಯೋದು ಬೇಡ ಅಂತ ನಿಮ್ಮ ಸರ್ಕಾರಕ್ಕೆ ಹೇಳಿ. ವಿವೇಕ್​ ಅಗ್ನಿಹೋತ್ರಿಯೇ ಜ್ಯೂರಿ ಕಮಿಟಿ ಅಧ್ಯಕ್ಷರಾಗಲಿ. ಅನುರಾಗ್​ ಠಾಕೂರ್​, ಅನುಪಮ್​ ಖೇರ್​, ರವಿ ಕಿಶನ್​, ಅಕ್ಷಯ್​ ಕುಮಾ​ರ್​ ಅವರು ಜ್ಯೂರಿ ತಂಡದಲ್ಲಿ ಇರಲಿ’ ಎಂದು ವ್ಯಕ್ತಿಯೊಬ್ಬರು ವ್ಯಂಗ್ಯವಾಡಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಿತು. ಅದರ ಜೊತೆಗೆ ವಿವಾದಗಳು ಕೂಡ ಶುರುವಾದವು. ‘ವ್ಯಾಕ್ಸಿನ್​ ವಾರ್​’ ಚಿತ್ರದ ಶೂಟಿಂಗ್​ ಆರಂಭವಕ್ಕೂ ಮುನ್ನವೇ ಕೆಲವರಿಂದ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು