AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’; ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್

ಈ ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಚಿತ್ರ 11 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’; ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್
TV9 Web
| Edited By: |

Updated on: Nov 10, 2022 | 3:50 PM

Share

‘ದಿ ಕಾಶ್ಮೀರ್ ಫೈಲ್ಸ್​’ (The Kashmir Files Movie) ಚಿತ್ರದ ಮೂಲಕ ವಿವೇಕ್ ಅಗ್ನಿಹೋತ್ರಿ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅಷ್ಟೇ ಅಲ್ಲ, ಸಣ್ಣ ಬಜೆಟ್ ಚಿತ್ರಗಳು ದೊಡ್ಡ ಮೊತ್ತದ ಕಲೆಕ್ಷನ್ ಮಾಡಲು ಸಾಧ್ಯವಿಲ್ಲ ಎಂಬ ಮೂಢನಂಬಿಕೆಯನ್ನು ಈ ಚಿತ್ರ ತೊಡೆದು ಹಾಕಿತ್ತು. ‘ದಿ ಕಾಶ್ಮೀರ್ ಫೈಲ್ಸ್​’ ಸೂಪರ್ ಹಿಟ್ ಆದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ಯಾವುದು ಎನ್ನುವು ಕುತೂಹಲ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಚಿತ್ರವನ್ನು ವಿವೇಕ್ ನಿರ್ದೇಶನ ಮಾಡುತ್ತಿದ್ದಾರೆ.

ಮಾರ್ಚ್​ 11ರಂದು ‘ದಿ ಕಾಶ್ಮೀರ್ ಫೈಲ್ಸ್​’ ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಆರಂಭದ ವಾರಗಳಲ್ಲಿ ಸಾಧಾರಣ ಗಳಿಕೆ ಮಾಡಿದ್ದ ಈ ಚಿತ್ರ ಎರಡು, ಮೂರು ಹಾಗೂ ನಾಲ್ಕನೇ ವಾರದಲ್ಲಿ ಭರಪೂರ ಕಲೆಕ್ಷನ್ ಮಾಡಿತು. 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ವಲಸೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರಕ್ಕೆ ರಾಜಕಾರಣಿಗಳಿಂದಲೂ ಮೆಚ್ಚುಗೆ ಸಿಕ್ಕಿತು.

ಈಗ ವಿವೇಕ್ ಅವರು  ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ರಿವೀಲ್ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಟೈಟಲ್ ಬರೆಯಲಾಗಿದೆ. ಕೊವಿಡ್ ಟೈಮ್​ನಲ್ಲಿ ವ್ಯಾಕ್ಸಿನ್​ಗಾಗಿ ಹಾಹಾಕಾರ ಎದ್ದಿತ್ತು. ಈ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಈ ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಚಿತ್ರ 11 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಮೊದಲಾದ ಭಾಷೆಗಳಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರ ನಿರ್ಮಾಣ ಮಾಡಿದ್ದ ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಅನ್ನೋದು ಇನ್ನಷ್ಟೇ ರಿವೀಲ್ ಆಗಬೇಕಿದೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್