AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ಅವರ ಹಿನ್ನೆಲೆ ಬಗ್ಗೆ ವಿವರ ಇಲ್ಲಿದೆ..

ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on: Mar 16, 2022 | 9:29 AM

Share

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files Movie) ಸಿನಿಮಾ ಮೋಡಿ ಮಾಡುತ್ತಿದೆ. ದೇಶದ ಹಲವು ನಗರಗಳಲ್ಲಿ ಜನರು ಮುಗಿಬಿದ್ದು ಈ ಸಿನಿಮಾ ನೋಡುತ್ತಿದ್ದಾರೆ. 1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಈ ಸಿನಿಮಾವನ್ನು ಕಟ್ಟಿಕೊಟ್ಟಿರುವ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕುಟುಂಬ ಸಮೇತರಾಗಿ ಜನರು ಬಂದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ನೋಡುತ್ತಿದ್ದಾರೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಕೆಲಸಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಕೂಡ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಮೊದಲ ದಿನ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕೇವಲ 3.5 ಕೋಟಿ ರೂಪಾಯಿ ಗಳಿಸಿತ್ತು. ಆದರೆ ದಿನದಿಂದ ದಿನಕ್ಕೆ ಇದರ ಕಲೆಕ್ಷನ್​ ಹೆಚ್ಚುತ್ತಾ ಬಂತು. 5ನೇ ದಿನ 50 ಕೋಟಿ ರೂಪಾಯಿಗಿಂತಲೂ ಹೆಚ್ಚು ಗಳಿಕೆ ಮಾಡಿ ಮುನ್ನುಗ್ಗುತ್ತಿದೆ. ಇಂಥ ಸಿನಿಮಾ ನಿರ್ದೇಶನ ಮಾಡಿದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri Profile) ಬಗ್ಗೆ ತಿಳಿದುಕೊಳ್ಳಲು ಜನರು ಆಸಕ್ತಿ ತೋರುತ್ತಿದ್ದಾರೆ. ಅವರ ಹಿನ್ನೆಲೆ ಬಗ್ಗೆ ಇಲ್ಲಿದೆ ಮಾಹಿತಿ..

ವಿವೇಕ್​ ಅಗ್ನಿಹೋತ್ರಿ ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ಇಂಡಿಯನ್​ ಇನ್ಸ್​ಟಿಟ್ಯೂಟ್​ ಆಫ್​ ಮಾಸ್​ ಕಮ್ಯುನಿಕೇಷನ್​, ಭೋಪಾಲ್​ ಸ್ಕೂಲ್​ ಆಫ್​ ಸೋಶಿಯಲ್​ ಸೈನ್ಸ್​, ಜೆಎನ್​ಯು ಮುಂತಾದ ಕಡೆಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಶಿಕ್ಷಣ ಪಡೆದಿದ್ದಾರೆ. ಈವರೆಗೂ 8 ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ. ಆ ಪೈಕಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ.

ಜಾಹೀರಾತು ಮತ್ತು ಕಿರುತೆರೆಯಲ್ಲಿ ಕೆಲಸ ಆರಂಭ:

ಚಿತ್ರರಂಗಕ್ಕೆ ಬರುವುದಕ್ಕೂ ಮುನ್ನ ವಿವೇಕ್​ ಅಗ್ನಿಹೋತ್ರಿ ಅವರು ಜಾಹೀರಾತು ಮತ್ತು ಕಿರಿತೆರೆಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿಷ್ಠಿತ ಜಾಹೀರಾತು ಕಂಪನಿಗಳಲ್ಲಿ ಅವರು ಕ್ರಿಯೇಟಿವ್​ ಡೈರೆಕ್ಟರ್​ ಆಗಿದ್ದರು. ನಂತರ ಕೆಲವು ಧಾರಾವಾಹಿಗಳ ನಿರ್ದೇಶನ ಮತ್ತು ನಿರ್ಮಾಣದಲ್ಲೂ ಅವರು ತೊಡಗಿಕೊಂಡರು. ಆಗಲೇ ಕೆಲವು ವಿವಾದಗಳು ಅವರನ್ನು ಸುತ್ತಿಕೊಂಡಿದ್ದವು.

2005ರಲ್ಲಿ ಮೊದಲ ಸಿನಿಮಾ:

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು 2005ರಲ್ಲಿ ಬಾಲಿವುಡ್​ಗೆ ಕಾಲಿಟ್ಟರು. ಅವರು ನಿರ್ದೇಶಿಸಿದ ಮೊದಲ ಹಿಂದಿ ಸಿನಿಮಾ ‘ಚಾಕೊಲೇಟ್​’ 2005ರ ಸೆಪ್ಟೆಂಬರ್​ 16ರಂದು ತೆರೆಕಂಡಿತು. ಆ ಚಿತ್ರದಲ್ಲಿ ಇಮ್ರಾನ್​ ಹಷ್ಮಿ, ತನುಶ್ರೀ ದತ್ತ ಅಭಿನಯಿಸಿದ್ದರು. ಬಳಿಕ ‘ಧನ್​ ಧನಾ ಧನ್​ ಗೋಲ್​’, ‘ಹೇಟ್​ ಸ್ಟೋರಿ’, ‘ಝಿದ್​’, ‘ಬುದ್ಧ ಇನ್​ ಎ ಟ್ರಾಫಿಕ್​ ಜಾಮ್​’, ‘ಜುನೂನಿಯತ್​’, ‘ದಿ ತಾಷ್ಕೆಂಟ್​ ಫೈಲ್ಸ್​’ ಮತ್ತು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗಳನ್ನು ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ.

‘ದಿ ತಾಷ್ಕೆಂಟ್​ ಫೈಲ್ಸ್’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ:

ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ನಿಧನದ ಕುರಿತು ಸಿದ್ಧವಾದ ಸಿನಿಮಾ ‘ದಿ ತಾಷ್ಕೆಂಟ್​ ಫೈಲ್ಸ್’. 2019ರ ಏಪ್ರಿಲ್​ 12ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಕೆಲವರಿಂದ ನೆಗಟಿವ್​ ವಿಮರ್ಶೆ ಸಿಕ್ಕಿತ್ತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ನಿಧಾನವಾಗಿ ಯಶಸ್ಸು ಕಂಡಿತ್ತು. ಅಲ್ಲದೇ ರಾಷ್ಟ್ರ ಪ್ರಶಸ್ತಿ ಬಾಚಿಕೊಳ್ಳುವಲ್ಲಿ ‘ದಿ ತಾಷ್ಕೆಂಟ್​ ಫೈಲ್ಸ್’ ಯಶಸ್ವಿ ಆಯಿತು. ‘ಅತ್ಯುತ್ತಮ ಚಿತ್ರಕಥೆ’ ರಾಷ್ಟ್ರ ಪ್ರಶಸ್ತಿಯನ್ನು ವಿವೇಕ್​ ಅಗ್ನಿಹೋತ್ರಿ ಸ್ವೀಕರಿಸಿದರು. ಈ ಸಿನಿಮಾದಲ್ಲಿನ ನಟನೆಗೆ ಪಲ್ಲವಿ ಜೋಶಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತು.

ಸೆನ್ಸಾರ್ ಮಂಡಳಿಯಲ್ಲೂ ಸೇವೆ ಸಲ್ಲಿಸಿದ ವಿವೇಕ್​ ಅಗ್ನಿಹೋತ್ರಿ:

ಚಿತ್ರರಂಗದಲ್ಲಿ ಸಕ್ರಿಯರಾಗಿರುವ ವಿವೇಕ್​ ಅಗ್ನಿಹೋತ್ರಿ ಅವರು ಸೆನ್ಸಾರ್​ ಮಂಡಳಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. 2017ರಲ್ಲಿ ಅವರು ‘ಕೇಂದ್ರ ಚಲನಚಿತ್ರ ಪ್ರಮಾಣಿಕೃತ ಮಂಡಳಿ’ ಸದಸ್ಯನಾಗಿ ಆಯ್ಕೆ ಆಗಿದ್ದರು. ‘48ನೇ ಫಿಲ್ಮ್​ ಫೆಸ್ಟಿವಲ್​ ಆಫ್​ ಇಂಡಿಯಾ’ ಪ್ರೀವ್ಯೂ ಕಮಿಟಿಯಲ್ಲೂ ಅವರು ಕೆಲಸ ಮಾಡಿದರು.

ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ:

ಅನುಭವಿ ನಟಿ ಪಲ್ಲವಿ ಜೋಶಿ ಅವರನ್ನು ವಿವೇಕ್​ ಅಗ್ನಿಹೋತ್ರಿ ಅವರು ವಿವಾಹವಾಗಿದ್ದಾರೆ. ಬಾಲನಟಿ ಆಗಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟು ಅನುಭವ ಪಡೆದವರು ಪಲ್ಲವಿ ಜೋಶಿ. ನಂತರ ಅನೇಕ ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ಅವರು ನಟಿಸಿದರು. ‘ದಿ ತಾಷ್ಕೆಂಟ್​ ಫೈಲ್ಸ್​’ ಸಿನಿಮಾದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು. ಈಗ ಸೂಪರ್​ ಹಿಟ್​ ಆಗಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಪ್ರೊಫೆಸರ್​ ರಾಧಿಕಾ ಮೆನನ್​ ಎಂಬ ಪಾತ್ರವನ್ನು ಪಲ್ಲವಿ ಜೋಶಿ ನಿಭಾಯಿಸಿದ್ದಾರೆ. ಪಲ್ಲವಿ ಜೋಶಿ-ವಿವೇಕ್​ ಅಗ್ನಿಹೋತ್ರಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

Fact Check: ‘ದಿ ಕಾಶ್ಮೀರ್​ ಫೈಲ್ಸ್​’ ನೋಡಿ ಅಡ್ವಾಣಿ ಅತ್ತರು ಅನ್ನೋದು ಸುಳ್ಳು; ಇಲ್ಲಿದೆ ಅಸಲಿ ವಿಷಯ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?