Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು

Gulshan Devaiah: ವಿವೇಕ್ ಅಗ್ನಿಹೋತ್ರಿ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು
ವಿವೇಕ್ ಅಗ್ನಿಹೋತ್ರಿ
Follow us
ರಾಜೇಶ್ ದುಗ್ಗುಮನೆ
|

Updated on: Apr 28, 2023 | 12:40 PM

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತೆರೆಗೆ ಬಂದ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಚರ್ಚೆಗೆ ಒಳಗಾಗುತ್ತಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈಗ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿಯನ್ನು ತಿರಸ್ಕರಿಸಿರುವುದು ಮಾತ್ರವಲ್ಲ ಆ ಬಗ್ಗೆ ಅವರು ಪ್ರಚಾರ ಪಡೆಯಲು ಮುಂದಾಗಿದ್ದಾರೆ. ಈ ವಿಚಾರವನ್ನು ಬಾಲಿವುಡ್ ಹೀರೋ ಗುಲ್ಶನ್ ದೇವಯ್ಯ (Gulshan Devaiah) ತೆರೆದಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಏಪ್ರಿಲ್ 27ರಂದು ಮುಂಬೈನಲ್ಲಿ ಅದ್ದೂರಿಯಾಗಿ ಫಿಲ್ಮ್​ಫೆರ್ ಪ್ರಶಸ್ತಿ ಕಾರ್ಯಕ್ರಮ ನಡೆದಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆದರೆ, ಈ ಅವಾರ್ಡ್​ನ ಅವರು ತಿರಸ್ಕರಿಸಿದ್ದರು. ‘ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ. ಫಿಲ್ಮ್​ಫೇರ್​ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದರು. ಅಷ್ಟೇ ಅಲ್ಲ ಈ ಬಗ್ಗೆ ಪ್ರಸಾರವಾದ ವರದಿಯನ್ನು ಅವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಬೈಕಾಟ್ ಗ್ಯಾಂಗ್’ ಬಗ್ಗೆ ವಿವೇಕ್ ಅಗ್ನಿಹೋತ್ರಿಗೆ ಅನುಮಾನ; ‘ಪಠಾಣ್​’ ತಂಡದ ಗಿಮಿಕ್ ಬಿಚ್ಚಿಟ್ಟ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ಟ್ವೀಟ್​ನ ಗುಲ್ಶನ್ ರೀಟ್ವೀಟ್ ಮಾಡಿಕೊಂಡಿದ್ದಾರೆ. ‘ಸರ್, ನನಗೆ ಸಣ್ಣ ಅನುಮಾನ ಇದೆ. ಪ್ರಶಸ್ತಿ ತಿರಸ್ಕಾರದ ಬಗ್ಗೆ ಟ್ವೀಟ್ ಮಾಡಿದ್ದೀರಿ ಮತ್ತು ಅದನ್ನು ವಾಟ್ಸಾಪ್‌ನ ಮೂಲಕ ಕಳುಹಿಸಿದ್ದೀರಿ.  ಅದೃಷ್ಟವಶಾತ್ ನಾನು ನಿಮ್ಮ ಕಾಂಟ್ಯಾಕ್ಟ್​ ಲಿಸ್ಟ್​ನಲ್ಲಿದ್ದೇನೆ. ಹೀಗಾಗಿ ನನಗೂ ಆ ಮೆಸೇಜ್ ಬಂತು. ನಿಮ್ಮ ಮೆಸೇಜ್​​ನ ಸ್ವೀಕರಿಸಲು ಯಾವಾಗಲೂ ಖುಷಿ ಆಗಿತ್ತದೆ. ಆದರೆ, ಇದು ಏಕೆ? ನಿಮಗೆ ಏನು ಅನ್ನಿಸಿತೋ ಅದನ್ನು ಟ್ವೀಟ್ ಮಾಡಿ. ಆದರೆ, ಅದನ್ನು ವಾಟ್ಸ್​​ಪ್ ಮೂಲಕ ಏಕೆ ಕಳುಹಿಸಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: 68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ

ಈ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರೂ ಗುಲ್ಶನ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ‘ವಾಟ್ಸಾಪ್ ವಿಚಾರವನ್ನು ಅಲ್ಲಿಗೇ ಸೀಮಿತ ಮಾಡಬೇಕು. ಅದನ್ನು ಟ್ವಿಟರ್​ಗೆ ಏಕೆ ತಂದಿರಿ’ ಎಂದು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್