AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು

Gulshan Devaiah: ವಿವೇಕ್ ಅಗ್ನಿಹೋತ್ರಿ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು
ವಿವೇಕ್ ಅಗ್ನಿಹೋತ್ರಿ
ರಾಜೇಶ್ ದುಗ್ಗುಮನೆ
|

Updated on: Apr 28, 2023 | 12:40 PM

Share

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತೆರೆಗೆ ಬಂದ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಚರ್ಚೆಗೆ ಒಳಗಾಗುತ್ತಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈಗ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿಯನ್ನು ತಿರಸ್ಕರಿಸಿರುವುದು ಮಾತ್ರವಲ್ಲ ಆ ಬಗ್ಗೆ ಅವರು ಪ್ರಚಾರ ಪಡೆಯಲು ಮುಂದಾಗಿದ್ದಾರೆ. ಈ ವಿಚಾರವನ್ನು ಬಾಲಿವುಡ್ ಹೀರೋ ಗುಲ್ಶನ್ ದೇವಯ್ಯ (Gulshan Devaiah) ತೆರೆದಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಏಪ್ರಿಲ್ 27ರಂದು ಮುಂಬೈನಲ್ಲಿ ಅದ್ದೂರಿಯಾಗಿ ಫಿಲ್ಮ್​ಫೆರ್ ಪ್ರಶಸ್ತಿ ಕಾರ್ಯಕ್ರಮ ನಡೆದಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆದರೆ, ಈ ಅವಾರ್ಡ್​ನ ಅವರು ತಿರಸ್ಕರಿಸಿದ್ದರು. ‘ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ. ಫಿಲ್ಮ್​ಫೇರ್​ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದರು. ಅಷ್ಟೇ ಅಲ್ಲ ಈ ಬಗ್ಗೆ ಪ್ರಸಾರವಾದ ವರದಿಯನ್ನು ಅವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಬೈಕಾಟ್ ಗ್ಯಾಂಗ್’ ಬಗ್ಗೆ ವಿವೇಕ್ ಅಗ್ನಿಹೋತ್ರಿಗೆ ಅನುಮಾನ; ‘ಪಠಾಣ್​’ ತಂಡದ ಗಿಮಿಕ್ ಬಿಚ್ಚಿಟ್ಟ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ಟ್ವೀಟ್​ನ ಗುಲ್ಶನ್ ರೀಟ್ವೀಟ್ ಮಾಡಿಕೊಂಡಿದ್ದಾರೆ. ‘ಸರ್, ನನಗೆ ಸಣ್ಣ ಅನುಮಾನ ಇದೆ. ಪ್ರಶಸ್ತಿ ತಿರಸ್ಕಾರದ ಬಗ್ಗೆ ಟ್ವೀಟ್ ಮಾಡಿದ್ದೀರಿ ಮತ್ತು ಅದನ್ನು ವಾಟ್ಸಾಪ್‌ನ ಮೂಲಕ ಕಳುಹಿಸಿದ್ದೀರಿ.  ಅದೃಷ್ಟವಶಾತ್ ನಾನು ನಿಮ್ಮ ಕಾಂಟ್ಯಾಕ್ಟ್​ ಲಿಸ್ಟ್​ನಲ್ಲಿದ್ದೇನೆ. ಹೀಗಾಗಿ ನನಗೂ ಆ ಮೆಸೇಜ್ ಬಂತು. ನಿಮ್ಮ ಮೆಸೇಜ್​​ನ ಸ್ವೀಕರಿಸಲು ಯಾವಾಗಲೂ ಖುಷಿ ಆಗಿತ್ತದೆ. ಆದರೆ, ಇದು ಏಕೆ? ನಿಮಗೆ ಏನು ಅನ್ನಿಸಿತೋ ಅದನ್ನು ಟ್ವೀಟ್ ಮಾಡಿ. ಆದರೆ, ಅದನ್ನು ವಾಟ್ಸ್​​ಪ್ ಮೂಲಕ ಏಕೆ ಕಳುಹಿಸಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: 68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ

ಈ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರೂ ಗುಲ್ಶನ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ‘ವಾಟ್ಸಾಪ್ ವಿಚಾರವನ್ನು ಅಲ್ಲಿಗೇ ಸೀಮಿತ ಮಾಡಬೇಕು. ಅದನ್ನು ಟ್ವಿಟರ್​ಗೆ ಏಕೆ ತಂದಿರಿ’ ಎಂದು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!