AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು

Gulshan Devaiah: ವಿವೇಕ್ ಅಗ್ನಿಹೋತ್ರಿ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ.

ಫಿಲ್ಮ್​​ಫೇರ್​ ತಿರಸ್ಕರಿಸಿದ ವಿಚಾರದಲ್ಲೂ ಪ್ರಚಾರ ಪಡೆದ ವಿವೇಕ್ ಅಗ್ನಿಹೋತ್ರಿ; ಛೀಮಾರಿ ಹಾಕಿದ ನೆಟ್ಟಿಗರು
ವಿವೇಕ್ ಅಗ್ನಿಹೋತ್ರಿ
ರಾಜೇಶ್ ದುಗ್ಗುಮನೆ
|

Updated on: Apr 28, 2023 | 12:40 PM

Share

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತೆರೆಗೆ ಬಂದ ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಚರ್ಚೆಗೆ ಒಳಗಾಗುತ್ತಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈಗ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿಯನ್ನು ತಿರಸ್ಕರಿಸಿರುವುದು ಮಾತ್ರವಲ್ಲ ಆ ಬಗ್ಗೆ ಅವರು ಪ್ರಚಾರ ಪಡೆಯಲು ಮುಂದಾಗಿದ್ದಾರೆ. ಈ ವಿಚಾರವನ್ನು ಬಾಲಿವುಡ್ ಹೀರೋ ಗುಲ್ಶನ್ ದೇವಯ್ಯ (Gulshan Devaiah) ತೆರೆದಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಏಪ್ರಿಲ್ 27ರಂದು ಮುಂಬೈನಲ್ಲಿ ಅದ್ದೂರಿಯಾಗಿ ಫಿಲ್ಮ್​ಫೆರ್ ಪ್ರಶಸ್ತಿ ಕಾರ್ಯಕ್ರಮ ನಡೆದಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆದರೆ, ಈ ಅವಾರ್ಡ್​ನ ಅವರು ತಿರಸ್ಕರಿಸಿದ್ದರು. ‘ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ. ಫಿಲ್ಮ್​ಫೇರ್​ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದರು. ಅಷ್ಟೇ ಅಲ್ಲ ಈ ಬಗ್ಗೆ ಪ್ರಸಾರವಾದ ವರದಿಯನ್ನು ಅವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಬೈಕಾಟ್ ಗ್ಯಾಂಗ್’ ಬಗ್ಗೆ ವಿವೇಕ್ ಅಗ್ನಿಹೋತ್ರಿಗೆ ಅನುಮಾನ; ‘ಪಠಾಣ್​’ ತಂಡದ ಗಿಮಿಕ್ ಬಿಚ್ಚಿಟ್ಟ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ಟ್ವೀಟ್​ನ ಗುಲ್ಶನ್ ರೀಟ್ವೀಟ್ ಮಾಡಿಕೊಂಡಿದ್ದಾರೆ. ‘ಸರ್, ನನಗೆ ಸಣ್ಣ ಅನುಮಾನ ಇದೆ. ಪ್ರಶಸ್ತಿ ತಿರಸ್ಕಾರದ ಬಗ್ಗೆ ಟ್ವೀಟ್ ಮಾಡಿದ್ದೀರಿ ಮತ್ತು ಅದನ್ನು ವಾಟ್ಸಾಪ್‌ನ ಮೂಲಕ ಕಳುಹಿಸಿದ್ದೀರಿ.  ಅದೃಷ್ಟವಶಾತ್ ನಾನು ನಿಮ್ಮ ಕಾಂಟ್ಯಾಕ್ಟ್​ ಲಿಸ್ಟ್​ನಲ್ಲಿದ್ದೇನೆ. ಹೀಗಾಗಿ ನನಗೂ ಆ ಮೆಸೇಜ್ ಬಂತು. ನಿಮ್ಮ ಮೆಸೇಜ್​​ನ ಸ್ವೀಕರಿಸಲು ಯಾವಾಗಲೂ ಖುಷಿ ಆಗಿತ್ತದೆ. ಆದರೆ, ಇದು ಏಕೆ? ನಿಮಗೆ ಏನು ಅನ್ನಿಸಿತೋ ಅದನ್ನು ಟ್ವೀಟ್ ಮಾಡಿ. ಆದರೆ, ಅದನ್ನು ವಾಟ್ಸ್​​ಪ್ ಮೂಲಕ ಏಕೆ ಕಳುಹಿಸಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: 68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ

ಈ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ವಿವೇಕ್ ಅಗ್ನಿಹೋತ್ರಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅವರು ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರೂ ಗುಲ್ಶನ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ‘ವಾಟ್ಸಾಪ್ ವಿಚಾರವನ್ನು ಅಲ್ಲಿಗೇ ಸೀಮಿತ ಮಾಡಬೇಕು. ಅದನ್ನು ಟ್ವಿಟರ್​ಗೆ ಏಕೆ ತಂದಿರಿ’ ಎಂದು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?