AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಮೋದಿ ಸೂಚನೆಯನ್ನು ಟೀಕಿಸಿದ ಅನುರಾಗ್ ಕಶ್ಯಪ್​ಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ

ಅನುರಾಗ್ ಕಶ್ಯಪ್ ಅವರು ಬಿಜೆಪಿ ಸರ್ಕಾರದ ನಿರ್ಧಾರಗಳನ್ನು ಹಲವು ಬಾರಿ ಟೀಕಿಸಿದ ಉದಾಹರಣೆ ಇದೆ. ಈ ವಿಚಾರದಲ್ಲಿ ಅವರು ಅನೇಕ ಬಾರಿ ಸುದ್ದಿ ಆಗಿದ್ದಾರೆ. ಆದರೆ, ವಿವೇಕ್ ಅಗ್ನಿಹೋತ್ರಿ ಅವರು ಹಾಗಲ್ಲ.

ಪಿಎಂ ಮೋದಿ ಸೂಚನೆಯನ್ನು ಟೀಕಿಸಿದ ಅನುರಾಗ್ ಕಶ್ಯಪ್​ಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ
ವಿವೇಕ್ ಅಗ್ನಿಹೋತ್ರಿ-ಅನುರಾಗ್ ಕಶ್ಯಪ್
ರಾಜೇಶ್ ದುಗ್ಗುಮನೆ
|

Updated on:Jan 21, 2023 | 9:29 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಿನಿಮಾ ವಿಷಯವಾಗಿ ಟೀಕೆ ಮಾಡದಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಈ ವಿಚಾರವನ್ನು ಅನುರಾಗ್ ಕಶ್ಯಪ್ (Anurag Kashyap) ಅವರು ಟೀಕೆ ಮಾಡಿದ್ದರು. ಈ ಟೀಕೆಯನ್ನು ವಿವೇಕ್ ಅಗ್ನಿಹೋತ್ರಿ ಖಂಡಿಸಿದ್ದಾರೆ. ವ್ಯಂಗ್ಯವಾಗಿ ಕೆಲವೇ ಶಬ್ದಗಳಲ್ಲಿ ಅವರು ತಿರುಗೇಟು ನೀಡಿದ್ದಾರೆ.

ಅನುರಾಗ್ ಕಶ್ಯಪ್ ಅವರು ಬಿಜೆಪಿ ಸರ್ಕಾರದ ನಿರ್ಧಾರಗಳನ್ನು ಹಲವು ಬಾರಿ ಟೀಕಿಸಿದ ಉದಾಹರಣೆ ಇದೆ. ಈ ವಿಚಾರದಲ್ಲಿ ಅವರು ಅನೇಕ ಬಾರಿ ಸುದ್ದಿ ಆಗಿದ್ದಾರೆ. ಆದರೆ, ವಿವೇಕ್ ಅಗ್ನಿಹೋತ್ರಿ ಅವರು ಹಾಗಲ್ಲ. ಬಿಜೆಪಿ ಸರ್ಕಾರವನ್ನು ಸದಾ ಬೆಂಬಲಿಸುತ್ತ ಬಂದವರು. ಬಲಪಂಥೀಯ ಚಿಂತನೆಗಳನ್ನು ಹೊಂದಿರುವವರು. ಈ ಕಾರಣಕ್ಕೆ ಇಬ್ಬರ ಮಧ್ಯೆ ಜಟಾಪಟಿ ಏರ್ಪಟ್ಟಿದೆ.

ಅನುರಾಗ್ ಕಶ್ಯಪ್ ಹೇಳಿದ್ದೇನು?

‘ನಾಲ್ಕು ವರ್ಷಗಳ ಹಿಂದೆ ಅವರು ಇದನ್ನು ಹೇಳಿದ್ದರೆ ಅದರಿಂದ ವ್ಯತ್ಯಾಸ ಉಂಟಾಗುತ್ತಿತ್ತು. ಈಗ, ಅವರ ಹೇಳಿಕೆಯಿಂದ ಬದಲಾವಣೆ ಆಗುತ್ತದೆ ಎಂದು ನನಗೆ ಅನ್ನಿಸುವುದಿಲ್ಲ. ಗುಂಪು (mob) ನಿಯಂತ್ರಣ ಕಳೆದುಕೊಂಡಿದೆ. ಯಾರೂ ಯಾರ ಮಾತನ್ನೂ ಕೇಳುವುದಿಲ್ಲ’ ಎಂದು ಅನುರಾಗ್​ ಕಶ್ಯಪ್​ ಅವರು ಹೇಳಿದ್ದರು. ಗುಂಪು ಎಂಬ ಪದ ಬಳಕೆಯನ್ನು ಅವರು ಹಿಂಸಾಚಾರ ಸೃಷ್ಟಿ ಮಾಡುವ ಗುಂಪು ಎಂಬರ್ಥದಲ್ಲಿ ಬಳಕೆ ಮಾಡಿದ್ದರು.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಇದನ್ನೂ ಓದಿ: ‘4 ವರ್ಷಗಳ ಹಿಂದೆ ಹೇಳಿದ್ದರೆ ಬದಲಾವಣೆ ಆಗುತ್ತಿತ್ತು’; ಪಿಎಂ ಮೋದಿ ಸೂಚನೆಗೆ ಅನುರಾಗ್ ಕಶ್ಯಪ್ ಪ್ರತಿಕ್ರಿಯೆ

ವಿವೇಕ್ ಅಗ್ನಿಹೋತ್ರಿ ತಿರುಗೇಟು

ಇದನ್ನು ರೀಟ್ವೀಟ್ ಮಾಡಿರುವ ವಿವೇಕ್​ ಅಗ್ನಿಹೋತ್ರಿ ಅವರು, ‘ಆಡಿಯನ್ಸ್ ಈಗ ಮಾಬ್ ಆದರೇ? ವೋವ್ ವೋವ್ ವೋವ್​’ ಎಂದಷ್ಟೇ ಹೇಳಿದ್ದಾರೆ. ವಿವೇಕ್ ಅಗ್ನಿಹೋತ್ರಿ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಕೆಲವರು ಬೆಂಬಲಿಸಿದ್ದಾರೆ.

ಸಿನಿಮಾ ಬಗ್ಗೆ ಟೀಕೆ

ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಭಾರತ ವೈರಸ್ ವಿರುದ್ಧ ಹೋರಾಡಿದ್ದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ವಿವೇಕ್ ಅವರನ್ನು ಟೀಕಿಸಲಾಗಿದೆ. ಇದು ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡುತ್ತಿರುವ ಸಿನಿಮಾ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Sat, 21 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್