AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿನಿಂದ ಆಹ್ವಾನ

ವಿವೇಕ್​ ಅವರ ಸಿನಿಮಾಗೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಬ್ರಿಟನ್​ ಸಂಸತ್ತಿನಿಂದ ಅವರಿಗೆ ಆಹ್ವಾನ ಬಂದಿದೆ. ಈ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಮಾತನಾಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿನಿಂದ ಆಹ್ವಾನ
ವಿವೇಕ್​-ಪಲ್ಲವಿ
TV9 Web
| Edited By: |

Updated on:Mar 29, 2022 | 4:36 PM

Share

1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು (Kashmir Pandits) ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ‘ದಿ ಕಾಶ್ಮೀರ್ ಫೈಲ್ಸ್​’ (The Kashmir Files) ಸಿನಿಮಾ ಮೂಲಕ ಜನರ ಮುಂದಿಡುವ ಪ್ರಯತ್ನವನ್ನು ವಿವೇಕ್​ ಅಗ್ನಿಹೋತ್ರಿ (Vivek agnihotri) ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಅವರ ಕಾರ್ಯಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲಾದವರು ಚಿತ್ರವನ್ನು ಹೊಗಳಿದ್ದರು. ಈಗ ಈ ವಿವೇಕ್​ ಅವರಿಗೆ ವಿಶೇಷ ಆಹ್ವಾನವೊಂದು ಬಂದಿದೆ. ಈ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ.

ವಿವೇಕ್​ ಅವರ ಸಿನಿಮಾಗೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಬ್ರಿಟನ್​ ಸಂಸತ್ತಿನಿಂದ ಅವರಿಗೆ ಆಹ್ವಾನ ಬಂದಿದೆ. ಈ ಬಗ್ಗೆ ಮಾತನಾಡಿರುವ ವಿವೇಕ್​ ಅಗ್ನಿಹೋತ್ರಿ, ‘ಪತ್ನಿ ಪಲ್ಲವಿ ಮತ್ತು ನನ್ನನ್ನು ಬ್ರಿಟನ್ ಸಂಸತ್​ನವರು ಆಹ್ವಾನಿಸಿದ್ದಾರೆ. ಮುಂದಿನ ತಿಂಗಳು ನಾವು ಅಲ್ಲಿಗೆ ಹೋಗುತ್ತೇವೆ. ಕಾಶ್ಮೀರಿ ಪಂಡಿತರ ನರಮೇಧದ ಸಂದೇಶವನ್ನು ಪ್ರಪಂಚದ ಮೂಲೆ ಮೂಲೆಗೆ ತಲುಪಿಸುವ ಉದ್ದೇಶದಿಂದ ಕಾಶ್ಮೀರಿ ಫೈಲ್ಸ್ ಸಿನಿಮಾ ಮಾಡಲಾಗಿದೆ. ಬ್ರಿಟನ್​ ಸಂಸತ್ತಿಗೆ ಹೋಗುತ್ತಿರುವುದಕ್ಕೆ ನನಗೆ ಖುಷಿಯಿದೆ’ ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ಭಾಷೆಗಳಿಗೆ ಡಬ್​ ಆಗಲಿದೆ ಸಿನಿಮಾ.

ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದಲ್ಲಿ ಹಿಂದಿ ಮಾತನಾಡುವವರ ಹಾಗೂ ಹಿಂದಿ ಭಾಷೆಯನ್ನು ಅರ್ಥೈಸಿಕೊಳ್ಳುವವರ ಸಂಖ್ಯೆ ತುಂಬಾನೇ ಕಡಿಮೆ. ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಂಪೂರ್ಣವಾಗಿ ಹಿಂದಿಯಲ್ಲೇ ಇದೆ. ಹೀಗಾಗಿ, ಎಲ್ಲಾ ವಿಚಾರಗಳು ಇಲ್ಲಿಯವರಿಗೆ ತಲುಪದೇ ಇರಬಹುದು. ಈ ಕಾರಣಕ್ಕೆ ಸಿನಿಮಾವನ್ನು ಕನ್ನಡ ಮೊದಲಾದ ಭಾಷೆಗಳಿಗೆ ಡಬ್​ ಮಾಡಲು ಚಿಂತನೆ ನಡೆದಿದೆ. ಈ ಬಗ್ಗೆಯೂ ವಿವೇಕ್​ ಮಾಹಿತಿ ನೀಡಿದ್ದಾರೆ.

ವಿವೇಕ್​ ಅಗ್ನಿಹೋತ್ರಿಗೆ ವೈ ಭದ್ರತೆ

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ್ದಕ್ಕಾಗಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರದಿಂದ ತೀರ್ಮಾನಿಸಲಾಗಿದೆ. 7ರಿಂದ 8 ಜನ CRPF ಕಮಾಂಡೋಗಳು ವಿವೇಕ್​ ಅವರಿಗೆ ಭದ್ರತೆ ಒದಗಿಸಲಿದ್ದಾರೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಅವರಿಗೆ ಅನೇಕರು ಕೊಲೆ ಬೆದರಿಗೆ ಹಾಕಿದ್ದರು. ಆ ಕಾರಣದಿಂದ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯನ್ನು ಡಿಆ್ಯಕ್ಟೀವೇಟ್​​ ಮಾಡುವುದಾಗಿ ವಿವೇಕ್​ ಅಗ್ನಿಹೋತ್ರಿ ತಿಳಿಸಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ ಬೆದರಿಕೆ ಕರೆಗಳು ಹೆಚ್ಚಿವೆ ಎನ್ನಲಾಗಿದೆ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

Published On - 4:05 pm, Tue, 29 March 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ